crossorigin="anonymous"> ಚಿನ್ನ ವ್ಯಾಪಾರದಲ್ಲಿ ನಷ್ಟ : ಮತ್ತೊಂದು ಚಿನ್ನದಂಗಡಿಗೆ ಕನ್ನ ಹಾಕಿಸಿದ್ದ ವ್ಯಾಪಾರಿಗಳು ಅಂದರ್...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಿನ್ನ ವ್ಯಾಪಾರದಲ್ಲಿ ನಷ್ಟ : ಮತ್ತೊಂದು ಚಿನ್ನದಂಗಡಿಗೆ ಕನ್ನ ಹಾಕಿಸಿದ್ದ ವ್ಯಾಪಾರಿಗಳು ಅಂದರ್…!

Radhakrishna Anegundi by Radhakrishna Anegundi
14-12-21, 8 : 03 am
in ಕ್ರೈಮ್
arrest
Share on FacebookShare on TwitterWhatsAppTelegram

ಬೆಂಗಳೂರು : ವ್ಯಾಪಾರದಲ್ಲಿ ಸಂಭವಿಸಿದ್ದ ಕೋಟಿ ಕೋಟಿ ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ಕನ್ನ ಹಾಕಿಸುವ ದಂಧೆಗೆ ಇಳಿದ ವ್ಯಾಪಾರಿಗಳು ಪೊಲೀಸರ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಸ್ಥಾನ ಮೂಲದ ದೇವರಾಮ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿನ್ನಾಭರಣದ ಅಂಗಡಿ ಹೊಂದಿದ್ರೆ, ಜಿಗಣಿ ಸಮೀಪದ ಯರೇಂಬಡನಬಳ್ಳಿಯಲ್ಲಿ ಡವರ್ ಲಾಲ್ ಸ್ಟೀಲ್ ಅಂಗಡಿ ಹೊಂದಿದ್ದ. ಕಾಕತಾಳೀಯ ಅನ್ನುವಂತೆ ಇಬ್ಬರೂ ವ್ಯಾಪಾರದಲ್ಲಿ ಕೈ ಸುಟ್ಟುಕೊಂಡಿದ್ದರು. ಹೀಗಾಗಿ ಕೋಟಿ ಕೋಟಿ ಸಾಲದ ಸುಳಿಗೆ ಸಿಲುಕಿದ್ದರು. ಸಾಲದ ಸುಳಿಯಿಂದ ಹೊರಬರಲು ಚಿನ್ನಾಭರಣ ಮಾರಾಟ ಮಳಿಗೆಯ ದರೋಡೆಗೆ ನೀಲನಕ್ಷೆ ಸಿದ್ದಪಡಿಸಿದ್ದರು.

ಇವರಿಬ್ಬರ ಪ್ಲಾನ್ ಗೆ ಮೋಂಬತ್ತಿ ತಯಾರಿಕ ಘಟಕವೊಂದರ ಮಾಲೀಕ ಸುನಿಲ್ ಮತ್ತು ನಗರ್ತಪೇಟೆಯ ಮತ್ತೊಬ್ಬ ವ್ಯಾಪಾರಿ ಧೀರಜ್ ನೆರವು ನೀಡಿದ್ದರು. ಹೀಗೆ 5 ಜನ ಜೊತೆ ಸೇರಿ ರಾಜಸ್ಥಾನದ ಕ್ರಿಮಿನಲ್ ಗಳಾದ ಸುಗುಣ ಮತ್ತು ರವೀಂದ್ರಪಾಲ್ ರನ್ನು ಸಂಪರ್ಕಿಸಿದ್ದಾರೆ. ಸಪ್ಟಂಬರ್ ನಲ್ಲಿ ನಗರಕ್ಕೆ ಬಂದ ಅವರಿಗೆ ದೇವರಾಮ್ ಮತ್ತು ಸುನಿಲ್ ಆಶ್ರಯ ಕಲ್ಪಿಸಿದ್ದರು.

ನಂತರ ಬೆಂಗಳೂರು ಹೊರವಲಯದಲ್ಲಿ ಸುತ್ತಾಟ ನಡೆಸಿದ್ದ ಇವರು ಭದ್ರತೆ ಇಲ್ಲದ ಚಿನ್ನಾಭರಣ ಮಳಿಗೆಯ ಪತ್ತೆ ಕಾರ್ಯ ನಡೆಸಿ, ಬೊಮ್ಮಹಳ್ಳಿಯಲ್ಲಿ ಒಂದು ಚಿನ್ನಾಭರಣ ಅಂಗಡಿ ಹಾಗೂ ಬಟ್ಟೆ ಅಂಗಡಿ ಉಳಿದಂತೆ ಚಂದಾಪುರ ಮತ್ತು ನಗರ್ತಪೇಟೆಯಲ್ಲಿ ಮೂರು ಚಿನ್ನಾಭರಣ ಅಂಗಡಿ ದೋಚಲು ನಿರ್ಧರಿಸಿದ್ದರು.

ಅದರಂತೆ ಚಿಕ್ಕಪೇಟೆಯ ಮಕ್ಕಳ ಸ್ಟ್ರೀಟ್ ನಲ್ಲಿದ್ದ ಮಹರಾಷ್ಟ್ರ ಮೂಲದ ಗಣೇಶ್ ಪವಾರ್ ಅಂಗಡಿಯನ್ನು ಅಕ್ಟೋಬರ್ 10ರಂದು ದರೋಡೆ ಮಾಡಿದ್ದರು. ಗ್ಯಾಸ್ ಕಟ್ಟರ್ ಬಳಸಿ ಶೆಟರ್ ಮುರಿದ ಖದೀಮರು 750 ಗ್ರಾಮ್ ಚಿನ್ನದ ಗಟ್ಟಿ, 7.5 ಲಕ್ಷ ರೂಪಾಯಿ ನಗದು ಹಾಗೂ 1 ಕೆಜಿ ಬೆಳ್ಳಿ ಕದ್ದು ಪರಾರಿಯಾಗಿದ್ದರು.

ಗಣೇಶ್ ಕಾರ್ಪ್ ಕಳ್ಳತನ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡ ಹಲಸೂರು ಗೇಟ್ ಪೊಲೀಸರು ತನಿಖೆ ಪ್ರಾರಂಭಿಸಿದ ವೇಳೆ ಮಹತ್ವದ ಮಾಹಿತಿಗಳು ಸಿಗಲಿಲ್ಲ. ಹೀಗಾಗಿ ಇದೊಂದು ಕಠಿಣ ಪ್ರಕರಣವಾಗಿ ಪರಿಣಮಿಸಿತ್ತು. ಹಾಗಿದ್ದರೂ ಪಟ್ಟು ಬಿಡದ ಪೊಲೀಸರು ತಾಂತ್ರಿಕ ಮಾಹಿತಿಗಳ ಮೊರೆ ಹೋಗಿ ಮೊಬೈಲ್ ಮತ್ತು ಸಿಸಿಟಿವಿಗಳ ಬೆನ್ನು ಹತ್ತಿದರು.

ಅದರಂತೆ ಕೃತ್ಯ ನಡೆದ ಬಳಿಕ ನಗರ್ತಪೇಟೆ, ಹಲಸೂರು ಗೇಟ್ ಮತ್ತು ಸಿಟಿ ಮಾರುಕಟ್ಟೆಯ ಸಿಸಿಟಿವಿ ದೃಶ್ಯ ಪರಿಶೀಲನೆ ವೇಳೆ ಸುನಿಲ್ ಕಾರು ಓಡಾಟದ ದೃಶ್ಯಗಳ ಮೇಲೆ ಅನುಮಾನ ಬಂದಿದೆ. ಹೀಗಾಗಿ ಅದೇ ಪ್ರದೇಶದ ಮೊಬೈಲ್ ಕರೆಗಳ ಮಾಹಿತಿ ತೆಗೆದ್ರೆ ಸುನಿಲ್ ಜೊತೆಗೆ ದೇವರಾಮ್, ಡವರ್ ಲಾಲ್ ಸಂಪರ್ಕ ಸಿಕ್ಕಿದೆ. ಹೀಗಾಗಿ ಸುನಿಲ್ ನನ್ನು ವಿಚಾರಣೆ ನಡೆಸಿದಾಗ ಅಸಲಿ ವಿಷಯ ಹೊರಬಿದ್ದಿದೆ.

ಆದರೆ ಅಷ್ಟು ಹೊತ್ತಿಗೆ ಸುಗುಣ, ವಿನೋದ್, ರವೀಂದ್ರನಾಥ್ ರಾಜಸ್ಥಾನ ಸೇರಿದ್ದರು. ಉಳಿದವರು ಚಂದಾಪುರದ ಅಂಗಡಿ ದೋಚುವ ಸಲುವಾಗಿ ನಗರದಲ್ಲೇ ಉಳಿದುಕೊಂಡಿದ್ದರು. ಹೀಗಾಗಿ ಇದೀಗ ದೇವರಾಮ್, ಡವರ್ ಲಾಲ್, ಸುನಿಲ್ ಮತ್ತು ದರೋಡೆ ತಂಡದ ಧೀರಜ್,ದಿನೇಶ್,ರಾಜೇಂದ್ರ, ಅಶೋಕ್ ಕುಮಾರ್, ಗೋವರ್ಧನ್ ಸಿಂಗ್ ಮತ್ತು ಶ್ರೀರಾಮ್ ನನ್ನು ಬಂಧಿಸಲಾಗಿದೆ. ಬಂಧಿತರಿಂದ 450 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

Ulsoor Gate police have arrested the accused of theft and conspiracy at a gold shop in Supari.

Tags: arrest
Share9TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್