crossorigin="anonymous"> ಸಂಕಷ್ಟಕ್ಕೆ ಸಿಲುಕಿದ್ದ ಸಿಟಿ ರವಿಗೆ ಹಣದ ಸಹಾಯ ಮಾಡಿದ್ರ ಕುಮಾರಸ್ವಾಮಿ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಂಕಷ್ಟಕ್ಕೆ ಸಿಲುಕಿದ್ದ ಸಿಟಿ ರವಿಗೆ ಹಣದ ಸಹಾಯ ಮಾಡಿದ್ರ ಕುಮಾರಸ್ವಾಮಿ..?

Radhakrishna Anegundi by Radhakrishna Anegundi
08-10-21, 6 : 23 pm
in ರಾಜ್ಯ
hdk ctravi
Share on FacebookShare on TwitterWhatsAppTelegram

ಬೆಂಗಳೂರು :  ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬೊಮ್ಮಾಯಿಯವರನ್ನು ಸಿಎಂ ಮಾಡಿದ ಮೇಲೆ ಬಿಜೆಪಿಯನ್ನು ಟೀಕಿಸಲು ಪ್ರತಿಪಕ್ಷಗಳ ಬಳಿ ಅಸ್ತ್ರಗಳಿರಲಿಲ್ಲ. ಯಡಿಯೂರಪ್ಪ ಸಿಎಂ ಆಗಿದಷ್ಟು ದಿನ ಅವರ ಮಕ್ಕಳು, ಜೈಲಿಗೆ ಹೋಗಿ ಬಂದವರು ಎಂದೆಲ್ಲಾ ಟೀಕಿಸಲಾಗುತ್ತಿತ್ತು. ಆದರೆ ಬೊಮ್ಮಾಯಿ ಬಂದ ಮೇಲೆ ಸಮಸ್ಯೆಯಾಗಿತ್ತು.

ಈ ವೇಳೆ ಕಾಂಗ್ರೆಸ್ ಕೈಗೆತ್ತಿಕೊಂಡಿದ್ದು ಆರ್ ಎಸ್ ಎಸ್ ವಿಚಾರ. ಬಿಜೆಪಿ ಪಕ್ಷ ಅದರ ಆಡಳಿತ, ಬಿಜೆಪಿ ನಾಯಕರ ಭ್ರಷ್ಟಚಾರ ವಿಚಾರ, ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರಗಳನ್ನು ಹೊರ ಜಗತ್ತಿಗೆ ತೆರೆದಿಡಬೇಕಾಗಿದ್ದ ಕಾಂಗ್ರೆಸ್ ಅವೆಲ್ಲವನ್ನೂ ಸೈಡಿಗಿಟ್ಟು ಆರ್.ಎಸ್.ಎಸ್ ಕಡೆಗೆ ಗುರಿಯಿಟ್ಟಿದೆ. ಅಲ್ಪಸಂಖ್ಯಾತರ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಈ ವಿಚಾರ ಪ್ರಸ್ತಾಪಿಸಲಾಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ.

ಕಾಂಗ್ರೆಸ್ ಆರ್.ಎಸ್.ಎಸ್ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಜೆಡಿಎಸ್ ಕೂಡಾ ಅಲ್ಪಸಂಖ್ಯಾತರ ಒಲೈಕೆಗೆ ಮುಂದಾಗಿದ್ದು, ದಳಪತಿಗಳು ಸಂಘ ಪರಿವಾರ ವಿರುದ್ಧ ವಾಗ್ದಾಳಿ ಪ್ರಾರಂಭಿಸಿದ್ದಾರೆ. ಕುಮಾರಸ್ವಾಮಿ ಸಂಘವನ್ನು ಟೀಕಿಸಲು ಪ್ರಾರಂಭಿಸುತ್ತಿದ್ದಂತೆ ಅದನ್ನು ಎದುರಿಸಬೇಕಾಗಿದ್ದ ಬಿಜೆಪಿ ನಾಯಕರು ಎರಡು ದಿನ ಟ್ವೀಟ್ ಮಾಡಿ ಶಸ್ತ್ರತ್ಯಾಗ ಮಾಡಿ ಕೂತಿದ್ದಾರೆ. ತಮ್ಮನ್ನು ಬೆಳೆಸಿದ ಸಂಘದ ರಕ್ಷಣೆಗೆ ಧಾವಿಸಬೇಕಾಗಿದ್ದ ಬಿಜೆಪಿ ಲೀಡರ್ ಗಳು ಮೌನಕ್ಕೆ ಶರಣಾಗಿದ್ದಾರೆ. ಕುಮಾರಸ್ವಾಮಿಯವರನ್ನು ಕಟ್ಟಿ ಹಾಕುವ ಒಂದೇ ಒಂದು ಹೇಳಿಕೆ ನೀಡಲು ಕಮಲ ಪಕ್ಷದ ನಾಯಕರಿಗೆ ಸಾಧ್ಯವಾಗಿಲ್ಲ.

ನನ್ನ ಸೇವಾ ಗುಣ, ನಿಸ್ವಾರ್ಥತೆ ಏನೆಂಬುದು ಜನರಿಗಿಂತ ಒಮ್ಮೆ ಸಂಕಷ್ಟಕ್ಕೆ ಸಿಲುಕಿದ್ದ ನಿಮಗೇ ಚನ್ನಾಗಿ ಗೊತ್ತಿದೆ ಎಂಬುದು ನನ್ನ ಭಾವನೆ. ಅಂದು ಆರೆಸ್ಸೆಸ್ ಮೇಲಿನ ನಿಷ್ಠೆ ನಿಮ್ಮನ್ನು ರಕ್ಷಣೆ ಮಾಡಲಿಲ್ಲ. ಹೆಚ್.ಡಿ.ಕುಮಾರಸ್ವಾಮಿಯ ನಿಸ್ವಾರ್ಥತೆಯ ಫಲಾನುಭವಿ ನೀವು. ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಿ ಸಿ.ಟಿ.ರವಿಯವರೇ.3/16

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 7, 2021

ಈ ನಡುವೆ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದ ಸಿಟಿ ರವಿಯವರನ್ನು ಕಟ್ಟಿಹಾಕುವಲ್ಲಿಯೂ ಕುಮಾರಸ್ವಾಮಿ ಯಶಸ್ವಿಯಾಗಿರುವುದನ್ನು ನೋಡಿದರೆ ಮಾಜಿ ಸಿಎಂ ಬಳಿ ಸರಕು ಸಿಕ್ಕಾಪಟ್ಟೆ ಇದೆ ಅಂದಾಯ್ತು. ರವಿ ವಿರುದ್ಧ ಕುಮಾರಸ್ವಾಮಿ ಮಾಡಿದ ಒಂದೇ ಒಂದು ಟ್ವೀಟ್  JDS  ಹಾಗೂ ಬಿಜೆಪಿ ನಾಯಕರ ಗುಪ್ತ ಸಂಬಂಧಗಳ ಬಗ್ಗೆ ಪ್ರಶ್ನೆ ಮೂಡಿಸಿದೆ.

ಸ್ವಜನಪಕ್ಷಪಾತ, ಕುಟುಂಬ ರಾಜಕಾರಣವನ್ನ ಸರ್ವಸ್ವ, ಸ್ವಾರ್ಥವನ್ನು ಹಕ್ಕೆಂದು ಭಾವಿಸಿರುವವರಿಗೆ ಸಂಘದ ಸಿದ್ದಾಂತಗಳು ಅರ್ಥವಾಗುವುದಿಲ್ಲ.

ಆರ್‌ಎಸ್‌ಎಸ್‌ ನ ನಿಷ್ಠೆ, ದೇಶ ಭಕ್ತಿ, ಸಂಕಷ್ಟದಲ್ಲಿರುವ ಜನರಿಗೆ ನಿಸ್ವಾರ್ಥ ಸೇವಾ ಮನೋಭಾವ ಹೆಚ್‌ಡಿಕೆ ಅವರಿಗೆ ಅರ್ಥವಾಗುವುದಿಲ್ಲ ಬಿಡಿ.

2/14

— C T Ravi 🇮🇳 ಸಿ ಟಿ ರವಿ (@CTRavi_BJP) October 7, 2021

ಈ ನಡುವೆ ಜೆಡಿಎಸ್ ಕಾರ್ಯಕರ್ತರೊಬ್ಬರು ಸಿಟಿ ರವಿಗೆ ಕುಮಾರಸ್ವಾಮಿ ಹಣಕಾಸಿನ ಸಹಾಯ ಮಾಡಿದ್ದಾರೆ ಅನ್ನುವುದನ್ನು ಬಹಿರಂಗಗೊಳಿಸಿದ್ದಾರೆ. ಈ ಮೂಲಕ ತಳಮಟ್ಟದಲ್ಲಿ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಹೋರಾಟ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ಪಾಡೇನು ಅನ್ನುವುದನ್ನು ಬಹಿರಂಗ ಮಾಡಿದ್ದಾರೆ.

jds worker ct ravi

ಹೋಗ್ಲಿ RSS ಅನ್ನು ಹಿಗ್ಗಾಮುಗ್ಗಾ ಜಾಡಿಸುತ್ತಿರುವ ಕುಮಾರಸ್ವಾಮಿ ಮುಂದೆ ಯಾವುದೇ ರಾಜಕೀಯ ಸಂಬಂಧ ಬೆಳೆಸುವುದಿಲ್ಲ ಎಂದು ಘೋಷಿಸುವ ಎದೆಗಾರಿಕೆಯನ್ನು ಬಿಜೆಪಿ ನಾಯಕರು ತೋರಿದರೆ ಕಮಲ ಕಾರ್ಯಕರ್ತರ ಹೋರಾಟಕ್ಕಾದರೂ ಬೆಲೆ ಸಿಗುತ್ತದೆ.    

Tags: ct raviKumaraswamyMAIN
Share20TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್