crossorigin="anonymous"> ವಿಡಿಯೋ : ಕ್ಯಾನ್ಸರ್ ಪೀಡಿತನಾಗಿ ಮೃತಪಟ್ಟ ಮಾವುತನಿಗೆ ಕಣ್ಣೀರ ವಿದಾಯ ಸಲ್ಲಿಸಿದ ಗಜರಾಜ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಡಿಯೋ : ಕ್ಯಾನ್ಸರ್ ಪೀಡಿತನಾಗಿ ಮೃತಪಟ್ಟ ಮಾವುತನಿಗೆ ಕಣ್ಣೀರ ವಿದಾಯ ಸಲ್ಲಿಸಿದ ಗಜರಾಜ

Radhakrishna Anegundi by Radhakrishna Anegundi
04-06-21, 10 : 28 pm
in ಟ್ರೆಂಡಿಂಗ್
kerala 01
Share on FacebookShare on TwitterWhatsAppTelegram

ಕರುವನ್ನು ಕೊಂದ ಬಸ್ ಬಣ್ಣ ಬದಲಾದರೂ ಇಂದಿಗೂ ಅದೇ ಬಸ್ ಅನ್ನು ಅಟ್ಟಿಸಿಕೊಂಡು ಹೋಗುವ ಹಸುವನ್ನು ನೋಡಿದ್ದೇವೆ. ಮನೆ ಮಾಲೀಕ ಮೃತಪಟ್ಟ ವೇಳೆ ಕಣ್ಣೀರು ಹಾಕೋ ನಾಯಿಯನ್ನು ನೋಡಿದ್ದೇವೆ. ಮೇಲೆ ಕೂತವ ಅಪಾಯಕ್ಕೆ ಸಿಲುಕುತ್ತಾನೆ ಅನ್ನೋದು ಅರಿವಾದ ತಕ್ಷಣ ಜಾಗೃತವಾಗುವ ಕುದುರೆಯನ್ನು ನೋಡಿದ್ದೇವೆ. ಹೀಗೆ ಮನುಷ್ಯರಿಗೆ ಹೋಲಿಸಿದರೆ ಪ್ರಾಣಿಗಳು ಎಷ್ಟೋ ಉತ್ತಮ ಅನ್ನುವ ಘಟನೆಗಳು ನಮ್ಮ ಸುತ್ತ ಮುತ್ತ ನಡೆಯುತ್ತಲೆ ಇರುತ್ತದೆ.

ಕೇರಳದಲ್ಲೂ ಇಂತಹುದೇ ಘಟನೆಯೊಂದು ನಡೆದಿದ್ದು, ತನ್ನ ನೆಚ್ಚಿನ ಮಾವುತ ಮೃತಪಟ್ಟ ಬೆನ್ನಲ್ಲೇ ಆತನ ಅಂತಿಮ ದರ್ಶನಕ್ಕಾಗಿ ಆನೆ ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಅಂಕುಶ ಹಿಡಿದ ಮಾವುತ ನೋವು ಕೊಟ್ಟಿದ್ದರೂ, ಹಸಿವಾದ ವೇಳೆ ಅನ್ನ ಕೊಟ್ಟಿದ್ದ, ಅವನು ತಿನ್ನುತ್ತಿದ್ದ ಆಹಾರದಲ್ಲಿ ಒಂದಿಷ್ಟು ಪಾಲು ನೀಡುತ್ತಿದ್ದ. ದೇವಸ್ಥಾನದ ಜಾತ್ರೆ ಅಂದಾಗ ಸಿಂಗರಿಸುತ್ತಿದ್ದ, ತಾನೇ ಮೈ ಮೇಲೆ ಮೆತ್ತಿಕೊಂಡ ಕೆಸರನ್ನು ಒಂದು ದಿನವೂ ಕೋಪ ಮಾಡದೆ ಮಾವುತ ಸ್ವಚ್ಛಗೊಳಿಸಿದ್ದಾನೆ ಅನ್ನೋ ಪ್ರೀತಿಯಿಂದ ಬಂದ ಆನೆ ತನ್ನ ಅಂತಿಮ ನಮನವನ್ನು ಸಲ್ಲಿಸಿ ಭಾರವಾದ ಹೆಜ್ಜೆಗಳೊಂದಿಗೆ ಹಿಂತಿರುಗಿದೆ.

ಅಂದ ಹಾಗೇ ಮನ ತಟ್ಟೋ ಈ ಘಟನೆ ನಡೆದಿರುವುದು ಕೇರಳದ ಕೊಟ್ಟಾಯಂನಲ್ಲಿ.

kerala 02

ಕುನ್ನಕಾಡ್ ದಾಮೋದರ್ ನಾಯರ್ ಅಲಿಯಾಸ್ ಒಮನ್ ಚೆಟ್ಟನ್ ಕಳೆದ 6 ದಶಕಗಳ ಕಾಲ ಆನೆಗಳೊಂ ದಿಗೆ ಬೆಳೆದಿದ್ದರು. ಸಣ್ಣ ವಯಸ್ಸಿನಲ್ಲೇ ಆನೆಗಳೊಂದಿಗೆ ಓಡನಾಟ ಇಟ್ಟುಕೊಂಡಿದ್ದ ದಾಮೋದರ್ ನಾಯರ್ ಮಾವುತನಾಗಿಯೂ ಕೆಲಸ ಮಾಡಿದ್ದರು. ಆದರೆ ಆರೋಗ್ಯ ಕೈ ಕೊಟ್ಟ ಕಾರಣ ಕೆಲ ವರ್ಷಗಳ ಹಿಂದೆ ಮಾವುತ ವೃತ್ತಿಯಿಂದ ನಿವೃತ್ತಿ ಪಡೆದಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಇವರು ಜೂನ್ 3 ರಂದು 74ನೇ ವಯಸ್ಸಿನಲ್ಲಿ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದರು.

ದಾಮೋದರ್ ನಾಯರ್ ಇನ್ನಿಲ್ಲ ಅನ್ನುವ ಸುದ್ದಿ ಕೇಳಿದ ಆನೆಯ ಮಾಲೀಕ ಆನೆಯೊಂದಿಗೆ ಅಂತಿಮ ನಮನ ಸಲ್ಲಿಸಲು ಬಂದಿದ್ದಾರೆ. ಈ ವೇಳೆ ಪಾರ್ಥಿವ ಶರೀರ ಕಂಡು ಸೊಂಡಿಲೆತ್ತಿ ನಮನ ಸಲ್ಲಿಸಿದ ರೀತಿ ಕಣ್ಣಲ್ಲಿ ನೀರು ತರಿಸುವಂತಿದೆ. ಬಳಿಕ ಮನೆಯ ಸದಸ್ಯರೊಬ್ಬರು ಆನೆಯನ್ನು ಸಂತೈಸಿದ ಬಳಿಕ ಅದು ಹಿಂತಿರುಗಿದೆ.

kerala 03

ಅಂದ ಹಾಗೇ ಪಲ್ಲತ್ ಬ್ರಹ್ಮದಾದನ್ ಹೆಸರಿನ ಈ ಆನೆಯ ಮಾವುತರಾಗಿಯೂ ನಾಯರ್ ಕೆಲಸ ನಿರ್ವಹಿಸಿದ್ದರಂತೆ. ಜೊತೆಗೆ ಅವರ ಕುಟುಂಬ ಸದಸ್ಯರೂ ಕೂಡಾ ಆನೆಯೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ.

Tags: Kerala
Share1TweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್