ಬೆಂಗಳೂರು : ಶಾಸಕ ಸಾರಾ ಮಹೇಶ್ ವಿರುದ್ಧ ಗುಡುಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರಿಗೆ ಈಜುಕೊಳ ನಿರ್ಮಾಣ ಪ್ರಕರಣ ಸಂಕಷ್ಟ ತಂದೊಡ್ಡುವ ಸಾಧ್ಯತೆಗಳಿದೆ.

ಮೈಸೂರು ಜಿಲ್ಲಾಧಿಕಾರಿ ಆಗಿದ್ದ ವೇಳೆ ಮನೆಯಲ್ಲೇ ಈಜುಕೊಳ ನಿರ್ಮಿಸಿಕೊಂಡಿದ್ದ ಪ್ರಕರಣದ ತನಿಖೆಯನ್ನು ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ಸಲ್ಲಿಸಿದ್ದು, ಜಿಲ್ಲಾಧಿಕಾರಿ ನಿವಾಸ ಜಲಸನ್ನಿಧಿಯಲ್ಲಿ ಈಜುಕೊಳ ನಿರ್ಮಾಣಕ್ಕೆ ಪಾರಂಪರಿಕ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆದಿಲ್ಲ ಅಂದಿದ್ದಾರೆ.

ಈಜುಕೊಳ ನಿರ್ಮಾಣಕ್ಕೆ 32 ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ, ಲೋಕೋಪಯೋಗಿ ಇಲಾಖೆಯಿಂದ ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದಿಲ್ಲ ಎಂದು ತನಿಖಾ ವರದಿಯಲ್ಲಿ 6 ನ್ಯೂನತೆಗಳನ್ನು ಪತ್ತೆ ಹಚ್ಚಲಾಗಿದೆ.

ಈ ಹಿಂದೆ ಈಜುಕೊಳದ ವಿಷಯದಲ್ಲಿ ಆರೋಪಗಳು ಕೇಳಿ ಬಂದಾಗ ಪ್ರತಿಕ್ರಿಯಿಸಿದ್ದ ಸಿಂಧೂರು 50 ಲಕ್ಷ ರೂ. ಖರ್ಚಾಗಿದೆ ಅನ್ನೋದು ಸುಳ್ಳು. ಇದು 28.72 ಲಕ್ಷ ರೂ. ವೆಚ್ಚದ ಯೋಜನೆಯಾಗಿದೆ.
ಕಡಿಮೆ ವೆಚ್ಚದಲ್ಲಿ ಈಜುಕೊಳಗಳನ್ನು ನಿರ್ಮಿಸಲು ನಿರ್ಮಿತಿ ಕೇಂದ್ರ 5 ವರ್ಷಗಳ ಹಿಂದೆ ಯೋಜನೆ ರೂಪಿಸಿತ್ತು. ಅದರ ಪ್ರಾಯೋಗಿಕ ಯೋಜನೆಯಾಗಿ ಈಜುಕೊಳವನ್ನು ನಿರ್ಮಿಸಲಾಗಿದೆ. ಈ ವರ್ಷ ಜನವರಿ ತಿಂಗಳಿಂದ ನಿರ್ಮಾಣ ಕಾಮಗಾರಿ ಶುರುವಾಗಿದೆ. ಈ ಈಜುಕೊಳವನ್ನು ಸ್ಥಾಪಿಸಲು ನಿರ್ಮಿತಿ ಕೇಂದ್ರದ ಕ್ಯಾಂಪಸ್ನಲ್ಲಿ ಸ್ಥಳವಿಲ್ಲದ ಕಾರಣಕ್ಕೆ ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿ ನಿರ್ಮಿಸಲಾಗಿದೆ ಎಂದು ತಿಳಿಸಿದ್ದರು.
Discussion about this post