ಬೆಂಗಳೂರು : ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಪಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಘೋಷಿಸಿದ್ದ ಜೆಡಿಎಸ್ ಇದೀಗ ಯುಟರ್ನ್ ತೆಗೆದುಕೊಂಡಿದೆ.
ಬುಧವಾರವಷ್ಟೇ ಉಪಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಹೇಳಿದ್ದರು.
ಇದೀಗ ಕುಮಾರಸ್ವಾಮಿ ಇದಕ್ಕೆ ವ್ಯತಿರಿಕ್ತ ಹೇಳಿಕೆ ಕೊಟ್ಟಿದ್ದಾರೆ.ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಇದನ್ನೂ ಓದಿ : ದಳಪತಿಗಳ ಬಳಿ ಕಾಸಿಲ್ವಂತೆ… ಚುನಾವಣೆಯಲ್ಲಿ ಸ್ಪರ್ಧಿಸದಿರಲು ದೇವೇಗೌಡರ ನಿರ್ಧಾರ
ಯಾವಾಗ ದೇವೇಗೌಡರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಅಂದರೋ, ಸಿದ್ದರಾಮಯ್ಯ ದಳಪತಿಗಳ ವಿರುದ್ಧ ಮುಗಿ ಬಿದ್ದಿದ್ದರು. ಸಿಕ್ಕಿದೆ ಛಾನ್ಸು ಅನ್ನುವಂತೆ ಟ್ವೀಟರ್ ನಲ್ಲಿ ಆರೋಪಗಳ ಸುರಿಮಳೆಗೈದಿದ್ದರು.

ಸಿದ್ದರಾಮಯ್ಯ ಅವರ ಹೇಳಿಕೆಗಳು ಜೆಡಿಎಸ್ ಗೆ ಸಂಕಷ್ಟ ತಂದೊಡ್ಡುವ ಲಕ್ಷಣ ಗೋಚರಿಸಿದ ಹಿನ್ನಲೆಯಲ್ಲಿ ಜೆಡಿಎಸ್ ಇದೀಗ ಉಲ್ಟಾ ಹೊಡೆದಿದೆ.
ಉಪಚುನಾವಣೆ ಎದುರಿಸಲು ಕಾಸಿಲ್ಲ ಎಂದು ದೇವೇಗೌಡರು ಹೇಳಿದ್ರೆ, ಸಾಲ ಮಾಡಿಯಾದರೂ ಸರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ, ಚುನಾವಣೆ ಎದುರಿಸುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಅಲ್ಲಿಗೆ ಡ್ಯಾಮೇಜ್ ಕಂಟ್ರೋಲ್ ಮಾಡಲು ದಳಪತಿಗಳು ಮುಂದಾಗಿದ್ದಾರೆ.
Discussion about this post