crossorigin="anonymous"> Karnataka BJP : ಹಿಂದೂ ಕಾರ್ಯಕರ್ತರಿಗೆ ಮೋಸ : ವಲಸೆ ಬಂದವರನ್ನು ಸಿಎಂ ಮಾಡಿ ಕೈ ಸುಟ್ಟುಕೊಂಡ ಬಿಜೆಪಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Karnataka BJP : ಹಿಂದೂ ಕಾರ್ಯಕರ್ತರಿಗೆ ಮೋಸ : ವಲಸೆ ಬಂದವರನ್ನು ಸಿಎಂ ಮಾಡಿ ಕೈ ಸುಟ್ಟುಕೊಂಡ ಬಿಜೆಪಿ

Radhakrishna Anegundi by Radhakrishna Anegundi
28-07-22, 8 : 43 pm
in ರಾಜ್ಯ
karnataka-bjp-dakshina kannada bjp worker protest reason behind
Share on FacebookShare on TwitterWhatsAppTelegram

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಹಿಂದೂ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. Karnataka BJP ಕಾರ್ಯಕರ್ತರ ನೋವು ನಲಿವುಗಳಿಗೆ ಸ್ಥಳೀಯ ನಾಯಕರು ಸ್ಪಂದಿಸುವುದನ್ನು ಮರೆತಿರುವ ಕರ್ಮಕ್ಕೆ ಹೀಗಾಗಿದೆ

ಮಂಗಳೂರು : ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಕೊಲೆಯ ವಿಚಾರವನ್ನೇ ಮುಂದಿಟ್ಟುಕೊಂಡ ಬಿಜೆಪಿ ಆ ಕಾಲದಲ್ಲಿ ನಡೆಸಿದ್ದ ರಾಜಕೀಯದ ಫಲವಾಗಿ ಬಿಜೆಪಿ ಗೆಲುವಿನ ದಡಕ್ಕೆ ಬಂದು ನಿಂತಿತ್ತು. ಆಗ ರಾಜಕೀಯ ನಾಯಕರು ಮಾಡಿದ ಭಾಷಣ ಫಲವಾಗಿ ಬಿಜೆಪಿ ವಿಧಾನಸೌಧದ ಮೂರನೇ ಮೆಟ್ಟಿಲು ಹತ್ತಿತ್ತು.

ಆದರೆ ಈ ನಡುವೆ ಬಿಜೆಪಿ ದೊಡ್ಡ ಮಟ್ಟದಲ್ಲಿ ಆಪರೇಷನ್ ಕಮಲ ನಡೆಸಿತ್ತು. ಬಿಜೆಪಿ, ಸಂಘ ಪರಿವಾರ ಹೀಗೆ ಹಿಂದೂ ಸಂಘಟನೆಗಳ ಆಳ ಅರಿವು ಇಲ್ಲದ ಮಂದಿ ಪಕ್ಷದೊಳಗೆ ಎಂಟ್ರಿ ಕೊಟ್ಟಿದ್ದರು. ಇದೇ ಕಾರ್ಯಕರ್ತರ ವಿರುದ್ಧ ಸೆಣಸಾಡಿದ ಮಂದಿಯೇ ಸಚಿವರಾದರು. ಆಗ್ಲೇ ಬಿಜೆಪಿಯ ತಳಮಟ್ಟದಲ್ಲಿ ಅಸಮಾಧಾನ ಪ್ರಾರಂಭವಾಗಿತ್ತು.

ಇದನ್ನೂ ಓದಿ : Prakruti Mishra – babushaan mohanty : ನಟಿ ಜೊತೆ ವಿವಾಹಿತನ ನಟನ ಪ್ರೇಮ ಪ್ರಸಂಗ : ನಡು ರಸ್ತೆಯಲ್ಲೇ ಚಳಿ ಬಿಡಿಸಿದ ಪತ್ನಿ

ಜೆಡಿಎಸ್ ಕಾಂಗ್ರೆಸ್ ನಿಂದ ಬಂದವರಿಗೆ ಕೇಡರ್ ಪಾರ್ಟಿಯಲ್ಲಿ ಹೇಗೆ ನಡೆದುಕೊಳ್ಳಬೇಕು ಅನ್ನುವುದು ಗೊತ್ತಿರಲಿಲ್ಲ. ಕಾರ್ಯಕರ್ತರೇ ಜೀವಾಳವಾಗಿರುವ ಪಕ್ಷದಲ್ಲಿ ಆಗ್ಲೇ ಹೋರಾಟದ ಕಿಚ್ಚು ಕಾಣಿಸಿಕೊಂಡಿತ್ತು. ಇದರ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪವೂ ಕೇಳಿ ಬಂತು.

ಅಲ್ಲಿ ಮೋದಿ ನೋಡಿದರೆ ಭರವಸೆ ಕೊಟ್ಟಂತೆ 370, ತ್ರಿವಳಿ ತಲಾಖ್ ಹೀಗೆ ಅನೇಕ ಕಾನೂನು ಜಾರಿಗೆ ತಂದ್ರು. ಯೋಗಿ ಆದಿತ್ಯನಾಥ್ ಕೂಡಾ ಚುನಾವಣೆಯಲ್ಲಿ ಭರವಸೆ ಕೊಟ್ಟಂತೆ ದುಷ್ಟ ಶಕ್ತಿಗಳ ವಿರುದ್ಧ ಸಮರ ಸಾರಿದರು. ಆದರೆ ಕರ್ನಾಟಕದಲ್ಲಿ ಆ ಕೆಲಸವಾಗಲಿಲ್ಲ.

ಇದನ್ನೂ ಓದಿ : Chakravarthy sulibele : ನಿರ್ವೀರ್ಯ ಸರ್ಕಾರಕ್ಕೆ ಇನ್ನೆಷ್ಟು ಪ್ರವೀಣರು ಹೆಣವಾಗಬೇಕು…

ಕರಾವಳಿಯ ಮಟ್ಟಿಗೆ ಹೇಳುವುದಾದರೆ ವಿರೋಧಿ ಸಂಘಟನೆಗಳ ವಿರುದ್ಧ ಹೋರಾಡಿದ ಅನೇಕ ಕಾರ್ಯಕರ್ತರು ಇಂದಿಗೂ ಜೈಲಿನಲ್ಲಿದ್ದಾರೆ. ಆದರೆ ಹಿಂದೂ ಸಂಘಟನೆಗಳ ವಿರುದ್ಧ ಸೈದ್ಧಾಂತಿಕ ಭಿನ್ನಾಭಿಪ್ರಾಯಕ್ಕೆ ಸಮರ ಸಾರಿದವರಿಗೆ ಬೇಲ್ ಸಿಕ್ಕಿದೆ ಅನ್ನುವ ಅಳಲು ಇಲ್ಲಿನ ಕಾರ್ಯಕರ್ತರದ್ದು. ಹಿಂದೆ ಕಾರ್ಯಕರ್ತರ ನೋವಿಗೆ ಸ್ಪಂದಿಸುವ ಮನಸ್ಥಿತಿ ನಾಯಕರಿಗಿತ್ತು. ಆದರೆ ಈಗ ಹಾಗಿಲ್ಲ.ನಮೋ ಅಂದರೆ ನಮಗೆ ಮೋಸ ಅಂದ ಕಾಂಗ್ರೆಸ್ ನಾಯಕರೇ ಬಿಜೆಪಿ ಸೇರಿದ್ದಾರೆ, ಹಾಗಿದ್ರೆ ನಮ್ಮ ಕಥೆಯೇನು ಅನ್ನುವುದು ಇವರ ಪ್ರಶ್ನೆ.

ಕರಾವಳಿಯ ಬಿಜೆಪಿ ಕಾರ್ಯಕರ್ತರು ಕಾಸಿನಾಸೆಗೆ ದುಡಿಯೋದಿಲ್ಲ.ಇಲ್ಲಿ ಹಿಂದುತ್ವದ ಕಿಚ್ಚಿರುತ್ತದೆ. ನಾಯಕನಾದವನು ರಸ್ತೆ ಬದಿಯಲಿ ಕಾರು ನಿಲ್ಲಿಸಿ ಕಾರ್ಯಕರ್ತರನ್ನು ಮಾತನಾಡಿಸಿದ್ರೆ ಸಾಕು. ಆದರೆ ಇತ್ತೀಚೆಗೆ ಅಧಿಕಾರದ ಮದ ಬಂದ ನಾಯಕರು ಕಾರ್ಯಕರ್ತರನ್ನು ಕಡೆಗಣಿಸಲಾರಂಭಿಸಿದ್ದಾರೆ. ಕಾರ್ಯಕರ್ತರು ಕರೆದ ಕಾರ್ಯಕ್ರಮಗಳಿಗೆ ಹೋಗುವುದನ್ನೂ ನಿಲ್ಲಿಸಿದ್ದಾರೆ. ಕಾರ್ಯಕರ್ತರ ಸಣ್ಣ ಪುಟ್ಟ ಕೆಲಸದ ಮನವಿಗೂ ನಾಯಕರು ಸೊಪ್ಪು ಹಾಕೋದಿಲ್ಲ. ಇದೆಲ್ಲದರ ಫಲವಾಗಿ ಹಿಂದೂ ಕಾರ್ಯಕರ್ತರ ಸಹನೆಯ ಕಟ್ಟೆಯೊಡಿದಿದೆ.

nalin

ಹೋಗ್ಲಿ ಕಾರ್ಯಕರ್ತರ ನೋವಿಗೆ ಸ್ಪಂದಿಸುವ ಮುಖ್ಯಮಂತ್ರಿಯಾದ್ರೂ ಇದ್ದಾರೆಯೇ, ಇವರು ಕೂಡಾ ವಲಸೆ ಬಂದವರು. ಬಸವರಾಜ್ ಬೊಮ್ಮಾಯಿಯವರಿಗೆ ಸಂಘ ಪರಿವಾರದ ಹಿನ್ನಲೆಯಿಲ್ಲ. ಒಂದು ದಿನವೂ ಅವರು ಹಿಂದೂ ಕಾರ್ಯಕರ್ತರ ಬಗ್ಗೆ ಕಾಳಜಿ ವಹಿಸಿದ ಉದಾಹರಣೆಯಿಲ್ಲ. ಮೊದಲೇ ವಲಸೆ ಬಂದವರೊಬ್ಬರಿಗೆ ಸಿಎಂ ಪಟ್ಟ ಕೊಟ್ಟಿರುವುದು ಕಾರ್ಯಕರ್ತರ ಮನಸ್ಸಿನಲ್ಲಿ ಇತ್ತು. ಇದೀಗ ಕಾರ್ಯಕರ್ತರ ಕೊಲೆಗಳಾಗುತ್ತಿದ್ರು ಕಠಿಣ ಕ್ರಮದ ಮಾತು ಕೇಳಿ ಕೇಳಿ ರೋಸಿ ಹೋದ ಕಾರ್ಯಕರ್ತರು ಕಟೀಲು ಕಾರನ್ನು ಅಲ್ಲಾಡಿಸಿದ್ದಾರೆ.

ಕಾರ್ಯಕರ್ತರನ್ನು ಬಳಸಿಕೊಳ್ಳುವುದು ಮಾತ್ರ ಇವರಿಗೆ ಗೊತ್ತು ಉಳಿಸಿಕೊಳ್ಳುವುದು ಗೊತ್ತಿಲ್ಲ. ಇಷ್ಟು ದಿನಗಳ ಕಾಲ ಭಾಷಣ ಮೋಡಿಯಲ್ಲಿ ಕಾರ್ಯಕರ್ತರನ್ನು ಮರಳು ಮಾಡಿದ್ರು. ಆದರೆ ಈಗ ಕಾರ್ಯಕರ್ತರೂ ಜಾಗೃತಿಯಾಗಿದ್ದಾರೆ.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್