crossorigin="anonymous"> ಮಂತ್ರಿಗಳ ಹಾದಿಯಲ್ಲಿ ಮುಖ್ಯಮಂತ್ರಿ : ಬೊಮ್ಮಾಯಿ ಸರಳತೆಯ ಹಿಂದಿದೆ ರಣತಂತ್ರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಂತ್ರಿಗಳ ಹಾದಿಯಲ್ಲಿ ಮುಖ್ಯಮಂತ್ರಿ : ಬೊಮ್ಮಾಯಿ ಸರಳತೆಯ ಹಿಂದಿದೆ ರಣತಂತ್ರ

Radhakrishna Anegundi by Radhakrishna Anegundi
15-08-21, 6 : 05 am
in ರಾಜ್ಯ
bommai meeting
Share on FacebookShare on TwitterWhatsAppTelegram

ಬೆಂಗಳೂರು : ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ ಹೊಸದಾಗಿ ಬೊಮ್ಮಾಯಿ ಸಂಪುಟಕ್ಕೆ ಸೇರಿದ ಸಚಿವರು ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದಾರೆ. ಆದರೆ ಈಗಾಗಲೇ ಮಂತ್ರಿ ಭಾಗ್ಯ ಅನುಭವಿಸಿದವರು ಈ ಸರಳತೆ ಅನ್ನುವ ಪದದ ಕಡೆ ತಲೆ ಹಾಕಲೇ ಇಲ್ಲ. ಅವರಿಗೂ ಗೊತ್ತಿದೆ ನುಡಿದಂತೆ ನಡೆಯುವುದು ಕಷ್ಟ. ಹೀಗಾಗಿ ಸುಮ್ನೆ ಸರಳತೆ ಘೋಷಣೆ ಮಾಡಿ ಸಿಕ್ಕಿ ಹಾಕಿಕೊಳ್ಳುವುದ್ಯಾಕೆ, ಸಿಕ್ಕ ಭಾಗ್ಯವನ್ನು ಅನುಭವಿಸೋದು ಒಳ್ಳೆಯದ್ದಲ್ವ ಅಂತಾ. ಇಲ್ಲವಾದ್ರೆ ಮೋದಿ ಹೆಸರಲ್ಲಿ ಗೆದ್ದು ಮಂದಿ ಮೋದಿಯವರ ಒಂದಿಷ್ಟು ಆದರ್ಶಗಳನ್ನು ಅಳವಡಿಸಿಕೊಳ್ಳುತ್ತಿದ್ರು.

ಮಂತ್ರಿಗಳ ಮನವಿಯನ್ನು ಆದೇಶ ರೂಪಕ್ಕಿಳಿಸಿದ ಸಿಎಂ

ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಖಾತೆಯ ಸಚಿವರಾಗ ಕಾರ್ಕಳ ಸುನಿಲ್ ಕುಮಾರ್, ಪುಸ್ತಕವನ್ನು ಉಡುಗೊರೆಯಾಗಿ ಕೊಡಿ, ನನ್ನ ಕ್ಷೇತ್ರದ ಗ್ರಂಥಾಲಯಗಳಿಗೆ ಅನುಕೂಲವಾಗುತ್ತದೆ ಅಂದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳು ಸುನಿಲ್ ಕುಮಾರ್ ಜನರಲ್ಲಿ ಮಾಡಿದ ಮನವಿಯನ್ನು ಆದೇಶ ರೂಪಕ್ಕೆ ತಂದರು. ಜೊತೆಗೆ ಗೌರವ ವಂದನೆ ಸಲ್ಲಿಸುವ ಬ್ರಿಟಿಷರ ಕಾಲದ ಪದ್ಧತಿಯನ್ನೂ ಪಕ್ಕಕ್ಕೆ ಸರಿಸಿ ಒಂದೊಳ್ಳೆ ಕೆಲಸ ಮಾಡಿದರು.

ಈ ನಡುವೆ ನೂತನ ಗೃಹ ಸಚಿವ ಅಗರ ಜ್ಞಾನೇಂದ್ರ ನನಗೆ ಝೀರೋ ಟ್ರಾಪಿಕ್ ಬೇಡ, ಹಿಂದೊಂದು, ಮುಂದೊಂದು ವಾಹನವೂ ಬೇಡ ಅನ್ನುವ ಮೂಲಕ ಮಂತ್ರಿಯಂದ್ರೆ ಹೀಗಿರಬೇಕಪ್ಪ ಅನ್ನಿಸಿಕೊಂಡರು. ಇದೀಗ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ನನಗೂ ಝೀರೋ ಟ್ರಾಫಿಕ್ ಬೇಡ ಅನ್ನುವ ಮೂಲಕ ಗೃಹ ಸಚಿವರ ಹಾದಿಯಲ್ಲಿ ಹೆಜ್ಜೆ ಇಟ್ಟಿದ್ದಾರೆ. ಇದೀಗ ಮುಖ್ಯಮಂತ್ರಿಗಳ ಝೀರೋ ಟ್ರಾಫಿಕ್ ಅನ್ನು ರದ್ದುಗೊಳಿಸುವ ಕುರಿತಂತೆ ಪೊಲೀಸ್ ಇಲಾಖೆ ಆದೇಶವನ್ನೂ ಕೂಡಾ ಹೊರಡಿಸಿದೆ. ಹಾಗಂತ ಮುಖ್ಯಮಂತ್ರಿಗಳಿಗೆ ಸಿಗ್ನಲ್ ಫ್ರೀ ವ್ಯವಸ್ಥೆ ಜಾರಿಯಲ್ಲಿರುತ್ತದೆ. ಜನ ಸಾಮಾನ್ಯರ ಟ್ರಾಫಿಕ್ ನಲ್ಲಿ ಅವರು ಕಾಯಬೇಕಾಗಿಲ್ಲ.

ಜಿಲ್ಲೆಗಳಲ್ಲಿ ರದ್ದಾಗುವುದಿಲ್ಲ ಝೀರೋ ಟ್ರಾಫಿಕ್

ಆದರೆ ಮುಖ್ಯಮಂತ್ರಿಗಳು ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ಅನ್ನು ನೀಡಬೇಕಾಗುತ್ತದೆ. ಮುಖ್ಯಮಂತ್ರಿಗಳ ಭದ್ರತೆ ಸಾಕಷ್ಟು ಮುಖ್ಯ ವಿಷಯ ಆಗಿರುವುದರಿಂದ ಈ ಬಗ್ಗೆ ಗೃಹ ಇಲಾಖೆ ನಿರ್ಲಕ್ಷ್ಯ ವಹಿಸುವಂತಿಲ್ಲ.

ಹಾಗಾದ್ರೆ ಮಂತ್ರಿಗಳು, ಮುಖ್ಯಮಂತ್ರಿಗಳು ಹೀಗೆ ಸರಳತೆ ಘೋಷಣೆ ಮಾಡುವ ಮೂಲಕ ಶಾಕ್ ಕೊಡುತ್ತಿರುವುದ್ಯಾಕೆ ಅಂದ್ರೆ, ಕಾಂಗ್ರೆಸ್ ಅನ್ನು ಮಣಿಸುವ ಎಲ್ಲಾ ತಂತ್ರಗಳು ಅಡಗಿದೆ. ಅರಗ ಹಾಗೂ ಸುನಿಲ್ ಕುಮಾರ್ ಅವರು ತಮಗಿರುವ ಕಿರು ಅವಧಿಯಲ್ಲಿ ಸಾಧನೆ ಮಾಡಲೇಬೇಕಾದ ಒತ್ತಡದಲ್ಲಿದ್ದಾರೆ. ರಾಜ್ಯ ನೆನಪಿಟ್ಟುಕೊಳ್ಳುವ ಕೆಲಸ ಮಾಡಲೇಬೇಕು ಎಂದು ಅವರ ಪಣ ತೊಟ್ಟಿದ್ದಾರೆ.

ಇನ್ನು ಮುಖ್ಯಮಂತ್ರಿಗಳ ವಿಷಯಕ್ಕೆ ಬಂದ್ರೆ ಮುಂದಿನ ಚುನಾವಣೆಯನ್ನು ಬೊಮ್ಮಾಯಿಯವರ ನೇತೃತ್ವದಲ್ಲೇ ಎದುರಿಸಲು ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಈ ಹಿಂದೆ ಕೇಳಿ ಬಂದಿರುವ ಆರೋಪಗಳನ್ನು ತೊಡೆದು ಹಾಕುವ ಕೆಲಸವನ್ನು ಬೊಮ್ಮಾಯಿಯವರು ಮಾಡಬೇಕಿದೆ. ಜೊತೆಗೆ ಮುಂದಿನ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರೋಧಿ ಅಲೆ ಕಾಣಿಸಿಕೊಳ್ಳುವ ಎಲ್ಲಾ ಲಕ್ಷಣಗಳಿದ್ದು, ಆಡಳಿತದಲ್ಲಿ ಆಗಿರುವ ಲೋಪಗಳನ್ನು ಡಿಕೆಶಿ ಟೀಂ ಜನತೆಯ ಮುಂದಿಡಲಿದೆ. ಇದರ ವಿರುದ್ಧ ಬಿಜೆಪಿಯಲ್ಲಿ ಅಸ್ತ್ರವಿಲ್ಲ. ಹೀಗಾಗಿಯೇ ಬೊಮ್ಮಾಯಿವರ ಸರಳತೆಯ ಘೋಷಣೆಗಳನ್ನು ಪ್ರಾರಂಭಿಸಿದ್ದಾರೆ. ಆಗ ಸಹಜವಾಗಿಯೇ ಜನ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಹೇಗಿತ್ತು ಆಡಂಭರ ಅನ್ನುವುದನ್ನು ನೆನಪಿಸಿಕೊಳ್ಳುತ್ತಾರೆ. ಒಂದು ವೇಳೆ ಜನ ಮರೆತರೆ ಬಿಜೆಪಿ ಅದನ್ನು ನೆನಪಿಸುತ್ತದೆ.

ಇನ್ನು ಹೇಳಿ ಕೇಳಿ ಕುಮಾರಸ್ವಾಮಿಯವರು ಜನರ ಕೈಗೆ ಸಿಗುವ ಜನಪ್ರತಿನಿಧಿ, ಜೊತೆಗೆ ಅವರು ಸಹಜವಾಗಿಯೇ ಸರಳ ಜೀವಿ ಅನ್ನುವುದು ಜನರಿಗೂ ಗೊತ್ತಿದೆ. ಈ ಎಲ್ಲಾ ಕಾರಣಗಳಿಂದ ಇದರ ಮುನ್ಸೂಚನೆ ಅನ್ನುವಂತೆ ಬಸವರಾಜ್ ಬೊಮ್ಮಾಯಿವರು ನಾನು ನಾಡಿನ ಸೇವಕ ಅನ್ನುವ ಘೋಷಣೆಯೊದನ್ನು ಬಿಟ್ಟಿದ್ದಾರೆ. ನರೇಂದ್ರ ಮೋದಿಯವರ ಪ್ರದಾನ ಸೇವಕ ಶಬ್ಧದಿಂದ ಪ್ರೇರಣೆ ಪಡೆದ ಪದವೇ ನಾಡಿನ ಸೇವಕ.

ಒಟ್ಟಿನಲ್ಲಿ ಮುಖ್ಯಮಂತ್ರಿಗಳು ಪ್ರಾರಂಭಿಸಿರುವ ಸರಳತೆ ಹಾದಿ ಜನರಿಗೆ ಹಿಡಿಸುವುದರಲ್ಲಿ ಅನುಮಾನವಿಲ್ಲ. ಆದರೆ ಅದನ್ನು ಅವರ ಸಂಪುಟದ ಸಹೋದ್ಯಗಿಗಳು ಎಷ್ಟರ ಮಟ್ಟಿಗೆ ಅನುಸರಿಸುತ್ತಾರೆ ಅನ್ನುವುದೇ ಪ್ರಶ್ನೆ.

Tags: Basavaraj Bommai
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್