ಬೆಂಗಳೂರು : ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಎಂದು ಆಗ್ರಹಿಸಿ, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಟ್ವೀಟರ್ ನಲ್ಲಿ ಇಂದು ಅಭಿಯಾನವೊಂದು ನಡೆಯಿತು. ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಅಭಿಯಾನಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಎಷ್ಟರ ಮಟ್ಟಿಗೆ ಸ್ಪಂದಿಸುತ್ತದೆ ಎಂದು ಕಾದು ನೋಡಬೇಕಾಗಿದೆ.
ಇದೇ ವೇಳೆ ಉದ್ಯೋಗ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ನಮ್ಮ ನೆಲದ ಉದ್ಯೋಗ ಅನ್ಯ ರಾಜ್ಯದ ಮಂದಿಯ ಪಾಲಾಗುತ್ತಿದೆ. ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರೂ ಬರೀ ಭರವಸೆ ಮಾತ್ರ ರಾಜಕಾರಣಿಗಳಿಂದ ಸಿಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕದಲ್ಲಿ ಉದ್ಯೋಗ ನೀಡಿ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡ, ಕುರಿತಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಬರಲಿ ಅನ್ನುವ ಆಗ್ರಹಗಳು ಟ್ವೀಟರ್ ನಲ್ಲಿ ಕೇಳಿ ಬಂದಿದೆ.
Discussion about this post