crossorigin="anonymous"> ಗ್ಯಾಸ್ ಪೆಟ್ರೋಲ್ ಮಾತ್ರವಲ್ಲ ಇನ್ಮುಂದೆ ದೇವರ ಸೇವೆಯೂ ದುಬಾರಿ : ಶಿರಸಿ ಮಾರಿಕಾಂಬೆಗೆ ಕೈಮುಗಿದು ಬರಬೇಕಷ್ಟೇ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Uthara kannada

ಗ್ಯಾಸ್ ಪೆಟ್ರೋಲ್ ಮಾತ್ರವಲ್ಲ ಇನ್ಮುಂದೆ ದೇವರ ಸೇವೆಯೂ ದುಬಾರಿ : ಶಿರಸಿ ಮಾರಿಕಾಂಬೆಗೆ ಕೈಮುಗಿದು ಬರಬೇಕಷ್ಟೇ

ಶಿರಸಿ ಮಾರಿಕಾಂಬೆಗೆ ಇನ್ನು ಮುಂದೆ ಕೈ ಮುಗಿಯುವ ಹರಕೆ ಹೊತ್ತುಕೊಳ್ಳಬೇಕಷ್ಟೇ. ಶ್ರೀಮಂತರು ಮಾತ್ರ ಈ ದೇವಸ್ಥಾನದಲ್ಲಿ ಸೇವೆ ಸಲ್ಲಿಸಬಹುದಾಗಿದ್ದು ಮಧ್ಯಮ ವರ್ಗದ ಮಂದಿಗೆ ಸೇವಾ ದರವನ್ನು ಭರಿಸಲು ಸಾಧ್ಯವೇ ಇಲ್ಲ. ದೇವಸ್ಥಾನಗಳು ಕೂಡಾ ಕಮರ್ಷಿಯಲ್ ಸೆಂಟರ್ ಗಳಾಗುತ್ತಿರುವುದು ದುರಂತವೇ ಸರಿ.

Radhakrishna Anegundi by Radhakrishna Anegundi
02-09-21, 8 : 39 am
in ರಾಜ್ಯ
marikamba temple
Share on FacebookShare on TwitterWhatsAppTelegram

ಶಿರಸಿ : ಈಗಾಗಲೇ ಗ್ಯಾಸ್ ಪೆಟ್ರೋಲ್ ಅಡುಗೆ ಎಣ್ಣೆ ಹೀಗೆ ಅಗತ್ಯ ವಸ್ತುಗಳ ದರ ಗಗನಮುಖಿಯಾಗಿದೆ. ಬರೋ ಸಂಬಳಕ್ಕಿಂತ ತಿಂಗಳ ಖರ್ಚು ಅಧಿಕವಾಗುತ್ತಿದೆ. ಹೋಗ್ಲಿ ಸಂಕಷ್ಟ ಪರಿಹರಿಸು ಎಂದು ದೇವರಿಗೆ ಹರಕೆ ಹೊತ್ತುಕೊಳ್ಳೋಣ ಅಂದ್ರೆ ಅದು ಕೂಡಾ ದುಬಾರಿಯಾಗಿದೆ. 10 ರೂಪಾಯಿ ಇದ್ದ ರುದ್ರಾಭಿಷೇಕಕ್ಕೆ ಇದೀಗ 100 ರೂಪಾಯಿಯಾಗಿದೆ. ಹೀಗೆ ದರ ಏರಿಸಿದ್ರೆ ಕೈ ಮುಗಿಯುವ ಹರಕೆ ಹೊತ್ತುಕೊಳ್ಳಬೇಕಷ್ಟೆ.

ಅಂದ ಹಾಗೇ ವಿಪರೀತ ಪೂಜಾ ದರಗಳು ಏರಿಕೆಯಾಗಿರುವುದು ನಾಡಿನ ಶಕ್ತಿಪೀಠದಲ್ಲಿ ಒಂದೆನಿಸಿ ಲಕ್ಷಾಂತರ ಭಕ್ತರನ್ನು ಸೆಳೆಯುವ ಶಿರಸಿ ಮಾರಿಕಾಂಬಾ ದೇವಾಲಯದಲ್ಲಿ. ಏಕಾಏಕಿ ಪೂಜಾ ಸೇವೆಗಳ ದರವನ್ನು 100 ಪಟ್ಟು ಹೆಚ್ಚಿಸಲಾಗಿದ್ದು , ಹೊಸ ಕರಡು ದರ ಪಟ್ಟಿ ಕಂಡ ಭಕ್ತರು ಗಾಬರಿಯಾಗಿದ್ದಾರೆ.

marikamba temple2

ಹೊಸ ದರ ಪಟ್ಟಿ ಪ್ರಕಾರ, ರುದ್ರಾಭಿಷೇಕ ಸೇವೆಗೆ ₹10ರ ಬದಲು ₹100, ಮೃತ್ಯುಂಜಯ ಶಾಂತಿಗೆ ₹1001 ಬದಲು ₹3500, ಸತ್ಯನಾರಾಯಣ ಕಥೆಗೆ ₹325ರ ಬದಲು ₹1500ಕ್ಕೆ, ನಿರಂತರ ಪಲ್ಲಕ್ಕಿ ಸೇವೆ ದರ ₹6,001 ರಿಂದ ₹25,000ಕ್ಕೆ ಏರಿಕೆ ಮಾಡಲಾಗಿದೆ. ಇನ್ನು ಈ ಹಿಂದೆ ಮಹಾಪೂಜೆಗೆ 75 ರೂಪಾಯಿ ಇತ್ತು ಈಗ 300ಕ್ಕೆ ಏರಿಸಲಾಗಿದೆ. ವಸ್ತ್ರಾಲಂಕಾರ ಪೂಜೆ ಬೆಲೆ 300 ರೂಪಾಯಿಯಿಂದ 1001 ರೂಪಾಯಿ, ಪಲ್ಲವ ಪಾರಾಯಣ ಸೇವಾ ಶುಲ್ಕ 250 ರೂಪಾಯಿಂದ 750 ರೂಪಾಯಿ, ಅನ್ನ ಸಂತರ್ಪಣೆ ದರ 2001 ರಿಂದ 5001 ರೂಪಾಯಿ, ಪಲ್ಲಕ್ಕಿ ಸೇವೆ 650 ರೂಪಾಯಿಂದ  5 ಸಾವಿರ ರೂಪಾಯಿಗೆ ಜಿಗಿದಿದೆ. ಕಾರ್ತೀಕ ದೀಪೋತ್ಸವದ ಒಂದು ದಿನದ ಸೇವೆ ಮೊತ್ತವನ್ನು ₹650 ರಿಂದ ₹5,000, ಶಾಶ್ವತ ಸೇವೆಗೆ ₹6001ರ ಬದಲು ₹10,001, ನಿರಂತರ ಸೇವೆ ಪಾರಾಯಣ ₹2001ರ ಬದಲಾಗಿ ₹5,000, ಶಾಶ್ವತ ಸೇವೆಗೆ ₹6001ರ ಬದಲು 10,000ಕ್ಕೆ ದರ ನಿಗದಿ ಮಾಡಲಾಗಿದೆ.

marikamba temple1

ಇನ್ನು ದರ ಏರಿಕೆಯನ್ನು ಸಮರ್ಥಿಸಿಕೊಂಡಿರುವ ದೇವಸ್ಥಾನ ಆಡಳಿತ ಮಂಡಳಿ ಈಗಿನ ಕಾಲಮಾನಕ್ಕೆ ಅನುಗುಣವಾಗಿ ಸೇವಾದರ ಪರಿಷ್ಕರಿಸಿದ್ದೇವೆ. ಭಕ್ತರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ಅವರ ಅಭಿಪ್ರಾಯ ಪಡೆದು ಅಂತಿಮ ನಿರ್ಣಯವಾಗುತ್ತದೆ. ನಿಯಮಾವಳಿ ಪ್ರಕಾರವೇ ಎಲ್ಲ ಕ್ರಮ ಅನುಸರಿಸಿದ್ದೇವೆ. ಭಕ್ತರು ತಮ್ಮ ಆಕ್ಷೇಪಣೆಯನ್ನು ದೇವಸ್ಥಾನದ ಕಚೇರಿಗೆ ನೇರವಾಗಿ ಸಲ್ಲಿಸಬಹುದು ಅಂದಿದೆ.

Tags: FEATUREDshri marikamba templeuttara kannada
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್