crossorigin="anonymous"> Karnataka politics : ರಾಜ್ಯಪಾಲರಿಗೆ ಯಡಿಯೂರಪ್ಪ : ಆಫರ್ ಒಪ್ಪಿಕೊಳ್ತಾರ ರಾಜಾಹುಲಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Karnataka politics : ರಾಜ್ಯಪಾಲರಿಗೆ ಯಡಿಯೂರಪ್ಪ : ಆಫರ್ ಒಪ್ಪಿಕೊಳ್ತಾರ ರಾಜಾಹುಲಿ

Radhakrishna Anegundi by Radhakrishna Anegundi
23-07-22, 8 : 45 am
in ಟಾಪ್ ನ್ಯೂಸ್
Karnataka politics yediyurappa next governor
Share on FacebookShare on TwitterWhatsAppTelegram

ಸೈಕಲ್ ಹತ್ತಿ ಪಕ್ಷ ಕಟ್ಟಿದ ನಾಯಕನಿಗೆ ದೊಡ್ಡ ಪಟ ಕೊಡಲು ಬಿಜೆಪಿ ಸಿದ್ದವಾಗಿದೆ.(Karnataka politics) ಆದರೆ ಅವರು ಒಪ್ಪಿಕೊಳ್ಳುವುದೇ ಅನುಮಾನವಂತೆ

ಬೆಂಗಳೂರು :  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಮಾಜಿ ಸಿಎಂ ಯಡಿಯೂರಪ್ಪ ಬಿಜೆಪಿಯಲ್ಲಿ (Karnataka politics) ಸಕ್ರಿಯವಾಗಿರುವುದಾಗಿ ಹೇಳಿದ್ದಾರೆ. ಆದರೆ ರಾಜ್ಯ ನಾಯಕರು ಅದೆಷ್ಟರ ಮಟ್ಟಿಗೆ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಾರೆ ಅನ್ನುವುದು ಗೊತ್ತಿಲ್ಲ. ಈಗಾಗಲೇ ಯಡಿಯೂರಪ್ಪ ಬೆಂಬಲಿಗ ಶಾಸಕರನ್ನು ಯಶಸ್ವಿಯಾಗಿ ಸೈಡಿಗೆ ಸರಿಸಲಾಗಿದೆ. ಮಾತ್ರವಲ್ಲದೆ ರಾಜ್ಯ ಬಿಜೆಪಿ ಸಮನ್ವಯತೆ ಇಲ್ಲದೆ ಒದ್ದಾಡುತ್ತಿದೆ. ಮೂಲ ಮತ್ತು ವಲಸೆ ಕಿತ್ತಾಟ ಇನ್ನೂ ಜೀವಂತವಿದೆ.ಆದರೆ ರಾಷ್ಟ್ರೀಯ ಮಟ್ಟದಲ್ಲಿ ಯಡಿಯೂರಪ್ಪ ಖದರ್ ಇನ್ನೂ ಇದೆ.

ಹೀಗಾಗಿಯೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಯಡಿಯೂರಪ್ಪ ಅವರನ್ನು ರಾಜ್ಯಪಾಲರನ್ನಾಗಿ ನೇಮಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ. (Karnataka politics) ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ದಕ್ಷಿಣ ಭಾರತದ ರಾಜ್ಯವೊಂದಕ್ಕೆ ಅವರನ್ನು ರಾಜ್ಯಪಾಲರನ್ನಾಗಿ ಕಳುಹಿಸಿರುವ ಸಾಧ್ಯತೆಗಳಿದೆ.

ಇದನ್ನೂ ಓದಿ : Talakala swamiji : ತಲಕಳದ ಶ್ರೀ ಕೃಷ್ಣ ದೇವಿ ಪ್ರಸಾದ ತೀರ್ಥ ಸ್ವಾಮೀಜಿ ಆತ್ಮಹತ್ಯೆ

ಆದರೆ ರಾಜ್ಯಪಾಲ ಹುದ್ದೆಯನ್ನು ಯಡಿಯೂರಪ್ಪ ಒಪ್ಪಿಕೊಳ್ಳುವುದು ಅನುಮಾನ ಅನ್ನಲಾಗಿದೆ. ಈ ಹಿಂದೆಯೂ ಅವರಿಗೆ ರಾಜ್ಯಪಾಲರಾಗುವ ಅವಕಾಶ ಬಂದಿತ್ತು. ಆದರೆ ಅವರು ಅದಕ್ಕೆ ಸಮ್ಮಿತಿಸಿರಲಿಲ್ಲ. ಈ ಕಾರಣದಿಂದ ಈ ಬಾರಿಯೂ ರಾಜ್ಯಪಾಲರಾಗುವ ಆಫರ್ ತಿರಸ್ಕರಿಸುತ್ತಾರೆ ಅನ್ನಲಾಗಿದೆ. ಅವರ ಫೋಕಸ್ ಏನಿದ್ರೂ ಮಕ್ಕಳನ್ನು ರಾಜಕೀಯವಾಗಿ ಸದೃಢಗೊಳಿಸುವುದಾಗಿದೆ. ಒಂದು ವೇಳೆ ರಾಜ್ಯಪಾಲರಿಗೆ ಹೋದರೆ ರಾಜ್ಯದಲ್ಲಿ ಹಿಡಿತ ತಪ್ಪುವ ಆತಂಕ ಯಡಿಯೂರಪ್ಪ ಅವರದ್ದು.

ರಾಜ್ಯ ಬಿಜೆಪಿಗೆ ನಾನೇ ಹೈಕಮಾಂಡ್ ಅನ್ನುವುದನ್ನು ಯಡಿಯೂರಪ್ಪ ಮತ್ತೊಮ್ಮೆ ಸಾರಿದ್ದಾರಾ

ಡಿಎನ್ಎ ಆಧಾರದಲ್ಲಿ ಬಿಜೆಪಿಯಿಂದ ಮೊದಲ ಟಿಕೆಟ್ ಘೋಷಣೆ : ಶಿಕಾರಿಪುರಕ್ಕೆ ವಿಜಯೇಂದ್ರ

ಯಾರು ಯಾವ ಕ್ಷೇತ್ರಕ್ಕೆ ನಿಲ್ಲಬೇಕು ಅನ್ನುವುದನ್ನು ಪಕ್ಷಗಳು ಘೋಷಿಸುವುದು ಸಂಪ್ರದಾಯ. ಆದರೆ ಒಂದು ಹೆಜ್ಜೆ ಮುಂದೆ ಹೋಗಿರುವ ಯಡಿಯೂರಪ್ಪ ಶಿಕಾರಿಪುರದಲ್ಲಿ ತಮ್ಮ ಮಗನಿಗೆ ಟಿಕೆಟ್ ಖಚಿತ ಎಂದು ಘೋಷಿಸಿದ್ದಾರೆ.

ಬೆಂಗಳೂರು : ಅನಂತಕುಮಾರ್ ನಿಧನ ಬಳಿಕ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲು ಡಿಎನ್ಎ ಅಡ್ಡಿ ಬಂದಿತ್ತು. ಆದರೆ ಅದು ಕೇವಲ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತ. ಉಳಿದ ಸಾಕಷ್ಟು ಕ್ಷೇತ್ರಗಳಲ್ಲಿ ಡಿಎನ್ಎಗೆ ಬೆಲೆ ನೀಡಲಾಗಿದೆ.

ಇದನ್ನೂ ಓದಿ : Dio bike theft : ಡಿಯೋ ಬೈಕ್ ಕದಿಯಲೆಂದು ಬೆಂಗಳೂರಿಗೆ ಬರುತ್ತಿದ್ದ ತಮಿಳುನಾಡು ಚೋರರು ಅಂದರ್

ಈ ನಡುವೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಮಾಜಿ ಸಿಎಂ ಯಡಿಯೂರಪ್ಪ   ತಮ್ಮ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರನಿಗೆ ಬಿಟ್ಟು ಕೊಟ್ಟಿದ್ದಾರೆ. ಯಡಿಯೂರಪ್ಪ ಪಕ್ಷದ ನಾಯಕರ ಮೇಲೆ ಮುನಿಸಿಕೊಂಡು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ ಅನ್ನುವ ಸುದ್ದಿಗಳಿವೆ. ಆದರೆ ಮೂಲಗಳ ಪ್ರಕಾರ ಇದು ಹೈಕಮಾಂಡ್ ಜೊತೆ ಚರ್ಚಿಸಿಯೇ ಪ್ರಕಟಿಸಿರುವ ನಿರ್ಧಾರ.

ರಾಜ್ಯ ಬಿಜೆಪಿಯನ್ನು ಪುನರ್ ಸಂಘಟನೆ ಮಾಡಲು ಹೊರಟಿರುವ ಸಂದರ್ಭದಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನೂ ಬಳಸಿಕೊಳ್ಳಲು ಡೆಲ್ಲಿ ನಾಯಕರು ನಿರ್ಧರಿಸಿದ್ದಾರೆ. ಈ ಕಾರಣದಿಂದಲೇ ಯಡಿಯೂರಪ್ಪ, ಪುತ್ರನಿಗೆ ಕ್ಷೇತ್ರ ಘೋಷಣೆ ಮಾಡಿದ್ದಾರೆ. ಸಾಕಷ್ಟು ತಿಂಗಳ ಹಿಂದೆಯೇ ಯಡಿಯೂರಪ್ಪ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದರು. ಆದರೆ ತಡೆಯಿರಿ ಅನ್ನುವ ಸಂದೇಶ ಬಂದ ಕಾರಣ ಅವರು ತೀರ್ಮಾನ ಪ್ರಕಟಿಸಿರಲಿಲ್ಲ. ಇದೀಗ ಹಸಿರು ನಿಶಾನೆ ಸಿಕ್ಕ ಕಾರಣ ಅವರು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

ಇದನ್ನೂ ಓದಿ : Karnataka BJP : ಬಿಜೆಪಿ ರಾಜ್ಯ ಉಸ್ತುವಾರಿ ಸ್ಥಾನಕ್ಕೆ ಅಮಿತ್ ಶಾ ಆಪ್ತನ ಎಂಟ್ರಿ

ಇನ್ನು ಯಡಿಯೂರಪ್ಪ ಅವರನ್ನು ಸೈಡಿಗೆ ಸರಿಸಿ ರಾಜ್ಯದಲ್ಲಿ ಚುನಾವಣೆ ಎದುರಿಸುವುದು ಬಿಜೆಪಿಗೆ ಅಸಾಧ್ಯ. ಹೀಗಾಗಿಯೇ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆಯೊಂದು ಸಿಗುವುದು ಖಚಿತ ಅನ್ನಲಾಗಿದೆ. ಈ ಹಿಂದೆ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದ ಸಂತೋಷ್ ಜೀಯವರು ಪಾರ್ಟಿ ಮುಂದುವರಿಯಬೇಕು ಅಂದ್ರೆ ಡಿಎನ್ಎ ಆಧಾರದಲ್ಲಿ ಟಿಕೆಟ್ ಕೊಟ್ರೆ ಹೇಗೆ ಅಂದಿದ್ದರು. ಆದರೆ ಯಡಿಯೂರಪ್ಪ ಅವರ ಡಿಎನ್ಎ ಮುಂದುವರಿಯದಿದ್ರೆ ರಾಜ್ಯದಲ್ಲಿ ಬಿಜೆಪಿ ಪ್ರತಿಪಕ್ಷ ಸ್ಥಾನದಲ್ಲಿ ಕೂರಬೇಕಾಗುತ್ತದೆ. ಹೀಗಾಗಿಯೇ ಬಿಜೆಪಿಗೆ ಯಡಿಯೂರಪ್ಪ ಕುಟುಂಬ ಅನಿವಾರ್ಯವಾಗಿದೆ.

ಇದನ್ನೂ ಓದಿ : Robert Vadra : ಸಕ್ರಿಯ ರಾಜಕಾರಣ ಪ್ರವೇಶದ ಸುಳಿವು ಕೊಟ್ಟ ಸೋನಿಯಾ ಗಾಂಧಿ ಅಳಿಯ

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್