crossorigin="anonymous"> Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Radhakrishna Anegundi by Radhakrishna Anegundi
31-08-22, 7 : 46 pm
in ಕ್ರೈಮ್
Kerala honey trap
Share on FacebookShare on TwitterWhatsAppTelegram

Kerala honey trap ವ್ಯವಹಾರ ಬದಲಾಗಿದೆ. ಪಂಚೆ ಗಟ್ಟಿ ಇಲ್ಲ ಅಂದ್ರೆ ಸುಂದರಿಯರು ಬೀಸಿದ ಬಲೆಗೆ ಬೀಳಲೇಬೇಕು

ಪಾಲಕ್ಕಾಡ್ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಿಲ್ಲದ ಸುಂದರಿಯ ಫೋಟೋಗಳಿಗೆ ಕಮೆಂಟ್ ಹಾಕುವ ಮುನ್ನ ಎಚ್ಚರವಾಗಿರಿ. ನಿಮ್ಮ ಪೋಟೋಗಳಿಗೆ ಬರುವ ಲೈಕ್ ಕಮೆಂಟ್ ಗಳಿಗೆ ಮಾರು ಹೋಗುವ ಮುನ್ನವೂ ಎಚ್ಚರವಾಗಿರಿ. ಸುಂದರವಾದ ಹೆಣ್ಮಕ್ಕಳ ದನಿ ಎಂದು ಮಾರು ಹೋದ್ರಿ ಕಥೆ ಮುಗಿಯಿತು, ಯಾಕಂದ್ರೆ ಅದು ಗಂಡು ಮಕ್ಕಳೇ ಮಾಡುವ ಕಿತಾಪತಿಯಾಗಿರುತ್ತದೆ. ಹೀಗೆ ಬಕ್ರ ಆದ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.( Kerala honey trap)

ಇರಿಂಜಲಕುಡ ಮೂಲದ ಉದ್ಯಮಿಯೊಬ್ಬರನ್ನು ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಗ್ಯಾಂಗ್, ವೀಕ್ನೆಸ್ ಅನ್ನು ಬಳಸಿಕೊಂಡಿದೆ. ನಕಲಿ ಖಾತೆಯಲ್ಲಿ ಚಾಟ್ ಮಾಡಿ ಮೋಡಿ ಮಾಡಿದೆ. ಇದೇ ವೇಳೆ ಗ್ಯಾಂಗ್ ನ ಸದಸ್ಯ ಶರತ್ ಎಂಬಾತ ಉದ್ಯಮಿಯಿಂದ ನಂಬರ್ ಪಡೆದು ಹೆಣ್ಣಿನ ದನಿಯಲ್ಲಿ ಮಾತನಾಡಿ ನಂಬಿಸಿದ್ದಾನೆ. ತನ್ನ ಪತಿ ಗಲ್ಫ್‌ನಲ್ಲಿದ್ದಾನೆ ಮತ್ತು ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾಳೆ ಎಂದು ಹರಟೆ ಹೊಡೆಯುತ್ತಿದ್ದ.

Read More : Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

ತನ್ನ ಜೊತೆ ಮಾತನಾಡುತ್ತಿರುವುದು ಮಹಿಳೆ ಎಂದು ನಂಬಿದ ಉದ್ಯಮಿ ಭೇಟಿಯಾಗಲು ಬಯಸಿದ್ದಾನೆ. ಮಿಕ ಬಲೆಗೆ ಬಿತ್ತು ಎಂದು ಅರಿತುಕೊಂಡ ಶರತ್, ದೇವು ಮತ್ತು ಗೋಕುಲ್ ದೀಪ್ ( Devu Gokul Deep) ಅನ್ನುವ ದಂಪತಿಯನ್ನು ಬಾಡಿಗೆಗೆ ಪಡೆದಿದ್ದಾನೆ. ಇನ್ಸ್ಟಾ ಖಾತೆಯಲ್ಲಿ 50 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ಈ ಜೋಡಿ ಇದೇ ದಂಧೆಯಲ್ಲಿ ಪಳಗಿದವರು.

Kerala honey trap Devu Gokul Deep instagram-phoenix-couple-official

ಈ ವೇಳೆ ಉದ್ಯಮಿ ಜೊತೆಗೆ ದೇವು ಸಂಪರ್ಕ ಸಾಧಿಸಿದ್ದಾಳೆ. ಯಕ್ಕರದಲ್ಲಿ ಬಾಡಿಗೆಗೆ ಪಡೆದಿದ್ದ ಮನೆಗೆ ಉದ್ಯಮಿಯನ್ನು ಕರೆಸಿಕೊಂಡು ಮಂಚದಾಟದ ವಿಡಿಯೋಗಳನ್ನು ಗುಪ್ತವಾಗಿ ಚಿತ್ರೀಕರಿಸಿದ್ದಾಳೆ. ಇದಾದ ಬಳಿಕ ಮನೆಗೆ ನುಗ್ಗಿದ್ದ ಶರತ್ ಅಂಡ್ ಗ್ಯಾಂಗ್ ನೈತಿಕ ಪೊಲೀಸ್ ಗಿರಿ ನಡೆಸಿ ನಗ ನಗದು ದೋಚಿದ್ದಾರೆ.

ಬಳಿಕ ತಮ್ಮದೇ ಕಾರಿನಲ್ಲಿ ಕೊಡುಂಗಲ್ಲೂರಿನ ತಮ್ಮ ಫ್ಲಾಟ್‌ಗೆ ಕರೆದುಕೊಂಡು ಹೋಗಿ ಅವರಿಂದ ಹೆಚ್ಚಿನ ಹಣ ದೋಚಲು ಯತ್ನಿಸಿದ್ದಾರೆ. ಈ ವೇಳೆ ಕೊಡುಂಗಲ್ಲೂರಿಗೆ ಕರೆದೊಯ್ಯುತ್ತಿದ್ದಾಗ ವಾಹನದಿಂದ ಹೇಗೋ ಪರಾರಿಯಾಗಿ, ಟೌನ್ ಸೌತ್ ಠಾಣೆಗೆ ದೂರು ದಾಖಲಿಸಿದ್ದರು.

ಈ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇದೇ ದೂರಿನಡಿಯಲ್ಲಿ ಮಹಿಳೆಯೊಬ್ಬಳು ಸೇರಿದಂತೆ 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ದೇವು (24), ಆಕೆಯ ಪತಿ ಗೋಕುಲ್​ ದೀಪ್​ (29), ಶರತ್​ (24), ಅಜಿತ್​ (20), ವಿನಯ್​ (24) ಮತ್ತು ಜಿಷ್ಣು (20) ಎಂದು ಗುರುತಿಸಲಾಗಿದೆ.

honey trap2

ಬಂಧಿತರಿಂದ ಉದ್ಯಮಿಯಿಂದ ದೋಚಿದ್ದ ನಾಲ್ಕು ಚಿನ್ನದ ಸರ, ಕಾರು, ಮೊಬೈಲ್​ ಫೋನ್​, ಡೆಬಿಟ್​/ಕ್ರೆಡಿಟ್​ ಕಾರ್ಡ್, ಕಚೇರಿ ದಾಖಲಾತಿಗಳು ಮತ್ತು ಹಣ, ಉದ್ಯಮಿಯ ಬೆತ್ತಲೆ ಫೋಟೋ ಮತ್ತು ವಿಡಿಯೋವನ್ನು ವಶಪಡಿಸಿಕೊಳ್ಳಲಾಗಿದೆ.

ಇದೇ ವೇಳೆ ಇನ್ಸ್ಟಾ ಜೋಡಿ ಹನಿ ಟ್ರ್ಯಾಪ್ ವ್ಯವಹಾರದಲ್ಲಿ ತೊಡಗಿಸಿಕೊಂಡ್ರೆ 40 ಸಾವಿರ ಕಮಿಷನ್ ಪಡೆಯುತ್ತಿತ್ತು ಎಂದು ಗೊತ್ತಾಗಿದೆ. ಇದೇ ರೀತಿ ಈ ಜೋಡಿ ಅನೇಕರನ್ನು ಹನಿಟ್ರ್ಯಾಪ್ ಮಾಡಿದೆ ಅನ್ನಲಾಗಿದೆ

https://www.youtube.com/watch?v=UO1XpnVXJLU&t=4s
Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್