crossorigin="anonymous"> kesari shawl : ಶಾಸಕರ ಆಟದ ನಡುವೆ ವಿಧಾನಸೌಧದಲ್ಲಿ ನಲುಗಿದ ಕೇಸರಿ ಶಾಲು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

kesari shawl : ಶಾಸಕರ ಆಟದ ನಡುವೆ ವಿಧಾನಸೌಧದಲ್ಲಿ ನಲುಗಿದ ಕೇಸರಿ ಶಾಲು

ಬೈರತಿ ಸುರೇಶ್​ಗೆ ಕೇಸರಿ ಶಾಲು ಹಾಕಿದ BJP ಶಾಸಕರು

Radhakrishna Anegundi by Radhakrishna Anegundi
18-07-22, 3 : 01 pm
in ರಾಜ್ಯ
kesari shawl
Share on FacebookShare on TwitterWhatsAppTelegram

ಕೇಸರಿ ಶಾಲಿನ ( kesari shawl ) ಮೂಲಕವೇ ಅಧಿಕಾರ ಪಡೆದುಕೊಂಡ ಮಂದಿ ವಿಧಾನಸೌಧದಲ್ಲಿ ನಡೆದುಕೊಂಡ ರೀತಿ ಟೀಕೆ ಗುರಿಯಾಗಿದೆ

ಬೆಂಗಳೂರು : ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದು ನಿಂತು ಹಲವು ವರ್ಷಗಳಾಯ್ತು. ಇದೀಗ ಜಾತಿ, ಬಣ್ಣದ ವಿಚಾರದಲ್ಲಿ ರಾಜಕೀಯ ಮಾಡುತ್ತೇವೆ.ಅದರಲ್ಲೂ ಕೇಸರಿಯನ್ನು ಭಾವನಾತ್ಮಕವಾಗಿ ಬಳಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಹಾಗೇ ನೋಡಿದರೆ ಹಿಂದೂ ಸಮಾಜದ ಪ್ರತಿಯೊಂದು ಹಬ್ಬ ಹರಿದಿನಗಳಂದು ( kesari shawl ) ಕೇಸರಿ ಧ್ವಜ, ಕೇಸರಿ ಬಾವುಟ, ಕೇಸರಿ ಬಟ್ಟೆ ಬಳಸುವುದು ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದು ರಾಜಕೀಯವಾಗಿ ಬಳಕೆಯಾಗಿತ್ತು ಇತ್ತೀಚಿನ ವರ್ಷಗಳಿಂದ. ಕರಾವಳಿಯ ಜಾತ್ರೆ, ನೇಮ ಕೋಲಗಳ ಸಂದರ್ಭದಲ್ಲಿ ಕೇಸರಿ ಬಣ್ಣದ ವಸ್ತುಗಳಿಂದಲೇ ಅಲಂಕರಿಸಲಾಗುತ್ತಿತ್ತು. ಅದಕ್ಕೆ ಪಕ್ಷ ಬೇಧವಿರಲಿಲ್ಲ.

ಆದರೆ ಇಂದು ವಿಧಾನಸೌಧದಲ್ಲಿ ಬಿಜೆಪಿಯ ಶಾಸಕರು ಕೇಸರಿ ಶಾಲನ್ನು ಮೋಜಿಗೆ ಬಳಸಿದ್ದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಹಲವಾರು ಮಂದಿ ಕಮೆಂಟ್ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆ ಸಲುವಾಗಿ ಶಾಸಕರು ವಿಧಾನಸೌಧಕ್ಕೆ ಬಂದಿದ್ದರು. ಬಹುತೇಕ ಬಿಜೆಪಿಯ ಶಾಸಕರು ಕೇಸರಿ ಶಾಲಿನೊಂದಿಗೆ ಪ್ರವೇಶ ಕೊಟ್ಟಿದ್ದರು.

ಇದನ್ನೂ ಓದಿ : Mangalsutra madras high court : ಮಾಂಗಲ್ಯ ಬಿಚ್ಚಿಡುವುದು ಪತಿಗೆ ನೀಡುವ ಮಾನಸಿಕ ಹಿಂಸೆ : ತಮಿಳುನಾಡು ಹೈಕೋರ್ಟ್

ಇದೇ ಸಂದರ್ಭದಲ್ಲಿ ಮತದಾನ ಮುಗಿಸಿ ಬಂದ ಹೆಬ್ಬಾಳ ವಿಧಾನಸಬಾ ಕ್ಷೇತ್ರ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಹಾಗೂ ಬಿಜೆಪಿ ಶಾಸಕರು ಮುಖಾಮುಖಿಯಾಗಿದ್ದಾರೆ. ಹಾಗೇ ಮಾತುಕತೆ ಮುಗಿಸಿ ಹೋಗಿದ್ರೆ ಪರವಾಗಿರಲಿಲ್ಲ. ಬದಲಾಗಿ ಸುರೇಶ್ ಅವರ ಹೆಗಲಿಗೆ ಕೇಸರಿ ಶಾಲು ಹಾಕಿ ಎಳೆದಾಡಲಾರಂಭಿಸಿದ್ದಾರೆ. ರಾಜು ಗೌಡ ಮೊದಲು ಕೇಸರಿ ಶಾಲು ಹಾಕಿದ್ರೆ ಬಳಿಕ ಗೂಳಿಹಟ್ಟಿ ಶೇಖರ್ ಸರದಿ, ಇದಕ್ಕೆ ರೇಣುಕಾಚಾರ್ಯ ಸಾಥ್ ಕೊಟ್ಟಿದ್ದಾರೆ. ಬೈರತಿ ಸುರೇಶ್ ಕೇಸರಿ ಶಾಲು ಬೇಡ ಬೇಡ ಅಂದ್ರು ಒತ್ತಾಯ ಪೂರ್ವಕವಾಗಿ ಹಾಕಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ ಶಾಸಕರ ಆಟದಲ್ಲಿ ಕೇಸರಿ ಶಾಲು ನಲುಗಿದ್ದು ಮಾತ್ರ ಸತ್ಯ. ಕೇಸರಿ ಶಾಲು ಆಟಿದ ವಸ್ತುವಾಗಿದ್ದು ಮಾತ್ರ ವಿಪರ್ಯಾಸ.

ಉಚ್ಚೆ ಹೊಯ್ಯುವ ವಿಚಾರಕ್ಕೆ ಬಾರ್ ನಲ್ಲಿ ಕಿತ್ತಾಡಿಕೊಂಡ ಎರಡು ರೌಡಿ ಗ್ಯಾಂಗ್

ಮಚ್ಚು ಹಿಡಿದವರಿಗೆ ಕಿತ್ತಾಡಲು ಕಾರಣಗಳೇ ಬೇಕಿಲ್ಲ. ( bengaluru rowdies ) ಅದರಲ್ಲೂ ಖಾಕಿ ಭಯವಿಲ್ಲದೆ ಮರೆಯುತ್ತಿರುವ ರೌಡಿಗಳ ಅಟ್ಟಹಾಸ ಮಿತಿ ಮೀರಿದೆ

ಬೆಂಗಳೂರು : ಬಾರ್ ಒಂದರ ಶೌಚಾಲಯದಲ್ಲಿ ಮೂತ್ರ ಹೊಯ್ಯುವಾಗ ಇಬ್ಬರು ರೌಡಿಗಳ ( bengaluru rowdies ) ನಡುವೆ ಪ್ರಾರಂಭವಾದ ಜಗಳ ಅತಿರೇಕಕ್ಕೆ ಹೋದ ಘಟನೆ ನಗರದ ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪರಸ್ಪರ ಬಿಯಲ್ ಬಾಟಲಿಯಲ್ಲಿ ಹೊಡೆದಾಡಿಕೊಂಡ ರೌಡಿಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ( 25 ) ರಾಘವೇಂದ್ರ ತನ್ನ ಸ್ನೇಹಿತರಾದ ಆಕಾಶ್ ಮತ್ತು ನವೀನ್ ಜೊತೆಗೆ ಸೆವೆನ್ ಹಿಲ್ಸ್ ಬಾರ್ ಗೆ ತೆರಳಿದ್ದರು. ಇದೇ ಬಾರ್ ಗೆ ಶ್ರೀರಾಮಪುರ ಠಾಣೆಯ ರೌಡಿ ಶೀಟರ್ ಯಶವಂತ (24) ಕೂಡಾ ಬಂದಿದ್ದ.

ರಾತ್ರಿ12.15ರ ಸುಮಾರಿಗೆ ರಾಘವೇಂದ್ರ ಮೂತ್ರ ವಿಸರ್ಜನೆ ಸಲುವಾಗಿ ಶೌಚಾಲಯಕ್ಕೆ ಹೋಗಿದ್ದಾನೆ. ಅಲ್ಲಿ ಇದ್ದ ಮತ್ತೊಬ್ಬ ರೌಡಿ ಶೀಟರ್ ಯಶವಂತ್, ನನ್ನ ಯಾಕೆ ಗುರಾಯಿಸ್ತೀಯಾ ಎಂದು ಕಿರಿಕ್ ತೆಗೆದಿದ್ದಾನೆ. ಅಷ್ಟಕ್ಕೆ ಶುರುವಾದ ಜಗಳ ಮಾತಿಗೆ ಮಾತು ಬೆಳೆದು ಹೊಡೆದಾಟ ತನಕ ಬಂದಿದೆ. ಈ ವೇಳೆ ಯಶವಂತ್ ಬಿಯರ್ ಬಾಟಲಿಯಿಂದ ರಾಘವೇಂದ್ರನ ತಲೆಗೆ ಹೊಡೆದಿದ್ದಾನೆ. ಈ ವೇಳೆ ಯಶವಂತ್ ಸಹಚರರು ರಾಘವೇಂದ್ರನ ಮೇಲೆ ಹಲ್ಲೆ ಮಾಡಿದ್ದಾರೆ.

ಬಳಿಕ ರಾಘವೇಂದ್ರ ಮತ್ತು ಆತನ ಸಹಚರರು ಯಶವಂತ್ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದಿದ್ದಾರೆ. ಹೀಗೆ ಎರಡು ಗುಂಪುಗಳ ಕೆಲ ಕಾಲ ಬಾರ್ ನಲ್ಲಿ ಪ್ರದರ್ಶನ ತೋರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಗೊಂಡ ರೌಡಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ 5 ಮಂದಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್