crossorigin="anonymous"> Kisan samman nidhi : ಕಿಸಾನ್ ಸಮ್ಮಾನ್ ವೆಬ್ ಸೈಟ್ ಬಗ್ಗೆ ಕರವೇ ಕೆಂಗಣ್ಣು : ಹೋರಾಟದ ಎಚ್ಚರಿಕೆ ನೀಡಿದ ನಾರಾಯಣಗೌಡ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kisan samman nidhi : ಕಿಸಾನ್ ಸಮ್ಮಾನ್ ವೆಬ್ ಸೈಟ್ ಬಗ್ಗೆ ಕರವೇ ಕೆಂಗಣ್ಣು : ಹೋರಾಟದ ಎಚ್ಚರಿಕೆ ನೀಡಿದ ನಾರಾಯಣಗೌಡ

Radhakrishna Anegundi by Radhakrishna Anegundi
05-07-22, 12 : 02 pm
in ರಾಜ್ಯ
Kisan samman nidhi website kannada neglect karave ta narayanagowda
Share on FacebookShare on TwitterWhatsAppTelegram

Kisan samman nidhi ಯೋಜನೆಯ ವೆಬ್ ಸೈಟ್ ನಲ್ಲಿ ಕನ್ನಡಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಗಾದೆ ತೆಗೆದಿದೆ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಲಾಗಿದೆ

ಬೆಂಗಳೂರು : ಲಕ್ಷಾಂತರ ರೈತರಿಗೆ ಅನುಕೂಲವಾಗಿರುವ ಕಿಸಾನ್ ಸಮ್ಮಾನ್ ನಿಧಿ ( Kisan samman nidhi ) ಯೋಜನೆಯ ವಿರುದ್ಧ ಇದೀಗ ಕರ್ನಾಟಕ ರಕ್ಷಣಾ ವೇದಿಕೆ ಕಿಡಿ ಕಾರಿದೆ. ಯೋಜನೆಯ ವೆಬ್ ಸೈಟ್ ನಲ್ಲಿ ಕನ್ನಡವನ್ನು ನಿರ್ಲಕ್ಷ್ಯ ಮಾಡಲಾಗಿದೆ ಅನ್ನುವುದು ಕರವೇ ಮುಖಂಡರ ಆಕ್ರೋಶ. pm kisan samman nidhi ವೆಬ್ ಸೈಟ್ ನಲ್ಲಿ ಹಿಂದಿ ಭಾಷೆ ಇದೆ, ಗುಜರಾತ್ ಭಾಷೆ ಇದೆ, ತಮಿಳು, ತೆಲುಗು ಸೇರಿದಂತೆ ಹಲವಾರು ಭಾಷೆಗಳಿದೆ. ಆದರೆ ಕನ್ನಡ ಮಾತ್ರ ಇಲ್ಲ ಅನ್ನುವ ಹಿನ್ನಲೆಯಲ್ಲಿ ಈ ಹೋರಾಟದ ಎಚ್ಚರಿಕೆ ನೀಡಲಾಗಿದೆ.

ಯೋಜನೆಯ ವೆಬ್ ಸೈಟ್ ನಲ್ಲಿ ಇಂಗ್ಲೀಷ್, ಅಸ್ಸಾಮಿ, ಗುಜರಾತಿ, ಮಲಯಾಳಂ, ಮರಾಠಿ, ತೆಲುಗು ಭಾಷೆಗಳನ್ನು ಮಾನ್ಯ ಮಾಡಲಾಗಿದೆ. ಆದರೆ ಕನ್ನಡಕ್ಕೆ ಮನ್ನಣೆ ನೀಡಲಾಗಿಲ್ಲ. ಹಾಗಾದ್ರೆ ಕನ್ನಡ ಬಾರದ ರೈತರು ಏನು ಮಾಡಬೇಕು. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅನ್ನದಾತರಿದ್ದೂ, ಕನ್ನಡದ ಬಗ್ಗೆ ನಿರ್ಲಕ್ಷ್ಯ ಯಾಕೆ ಎಂದು ಪ್ರಶ್ನಿಸಿರುವ ಕರವೇ, ಭಾಷಾ ನೀತಿ ಕಡೆಗಣನೆಯನ್ನು ಖಂಡಿಸಿದೆ.

ಇದನ್ನೂ ಓದಿ : ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ : ಶಾಸಕ ಜಮೀರ್ ಸಾಮ್ರಾಜ್ಯಕ್ಕೆ ಎಸಿಬಿ ದಾಳಿ

ಮಾಹಿತಿಗಳ ಪ್ರಕಾರ ಕೇರಳದಲ್ಲಿ 37 ಲಕ್ಷ ಫಲಾನುಭವಿಗಳು, ಅಸ್ಸಾಂನಲ್ಲಿ 31 ಲಕ್ಷ ಫಲಾನುಭವಿಗಳಿದ್ದು ಅಲ್ಲಿನ ಭಾಷೆಗಳಿಗೆ ಮನ್ನಣೆ ನೀಡಲಾಗಿದೆ. ಆದರೆ ಕರ್ನಾಟಕದಲ್ಲಿ 50 ಲಕ್ಷ ಫಲಾನುಭವಿಗಳಿದ್ದರೂ ಕನ್ನಡಕ್ಕೆ ವೆಬ್ ಸೈಟ್ ನಲ್ಲಿ ಜಾಗವಿಲ್ಲ. ಹೀಗಾಗಿ ತಕ್ಷಣ ವೆಬ್ ಸೈಟ್ ನಲ್ಲಿ ಯೋಜನೆಯ ಬಗ್ಗೆ ಕನ್ನಡದಲ್ಲೂ ಮಾಹಿತಿ ನೀಡುವಂತೆ ಆಗ್ರಹಿಸಿರುವ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ( TA Narayanagowda ) ತಪ್ಪಿದರೆ ಉಗ್ರ ಹೋರಾಟ ಉಂಟು ಅಂದಿದ್ದಾರೆ.

ರಾಜಕೀಯದಿಂದ ದೂರ ಸರಿದ ರಮ್ಯ ಬ್ಯಾಂಕಾಕ್ ನತ್ತ ಪಯಣ

ಮೋಹಕ ತಾರೆ ರಮ್ಯ ( Ramya ) ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದಾರೆ. ಆಗೊಮ್ಮೆ ಈಗೊಮ್ಮೆ ಮೋದಿ ( Naredndra modi ), ಬಿಜೆಪಿ ( BJP ) ವಿರುದ್ಧ ಟ್ವೀಟ್ ಮಾಡುತ್ತಿರುವ ರಮ್ಯ ತಮ್ಮ ಹಳೆಯ ಗೆಳೆಯರೊಂದಿಗೆ ಕಾಲ ಕಳೆಯುತ್ತಿದ್ದಾರೆ. ಜೊತೆಗೆ ಮಾಧ್ಯಮಗಳ ಕ್ಯಾಮಾರದಿಂದ ಸಂಪೂರ್ಣ ಮರೆಯಾಗಿದ್ದ ರಮ್ಯ ನಿಧಾನವಾಗಿ ಸುದ್ದಿ ವಾಹಿನಿಗಳ ( news channels) ಕ್ಯಾಮಾರ ಕಡೆಗೆ ಒಲವು ತೋರಿದ್ದಾರೆ. ಈ ನಡುವೆ ದಿವ್ಯಾ ಸ್ಪಂದನ ಯಾನೆ ರಮ್ಯ ಬ್ಯಾಂಕಾಕ್ ಗೆ ( Ramya Bangkok) ಹಾರಿರುವ ಸುದ್ದಿ ಬಂದಿದೆ   

ಇತ್ತೀಚೆಗೆಷ್ಟೇ ನಟಿ ಕಾವ್ಯಾ ಮತ್ತು ವರುಣ್ ಗೌಡ ಮದುವೆಯಲ್ಲಿ ಕಾಣಿಸಿಕೊಂಡಿದ್ದ ರಮ್ಯ ಬ್ರೇಕ್ ಸಲುವಾಗಿ ಬ್ಯಾಂಕಾಕ್‌ಗೆ ಹಾರಿದ್ದಾರೆ. ಆತ್ಮೀಯ ಗೆಳತಿಯರು ಕೂಡಾ ರಮ್ಯ ಅವರಿಗೆ ಕಂಪನಿ ನೀಡಿದ್ದಾರೆ ಅನ್ನಲಾಗಿದೆ.

ಈ ನಡುವೆ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಲು ಮುಂದಾಗಿರುವ ರಮ್ಯಾ, ಕಥೆಗಳನ್ನು ಕೇಳುತ್ತಿದ್ದಾರಂತೆ. ದೊಡ್ಡ ಗ್ಯಾಪ್ ನಂತ್ರ ತೆರೆಗೆ ಮರಳುತ್ತಿರುವ ಕಾರಣ ಕಥೆ ಭಿನ್ನವಾಗಿರಬೇಕು ಅನ್ನುವುದು ರಮ್ಯಾ ಆಸೆಯಂತೆ. ಹೀಗಾಗಿ ಸಿನಿಮಾ ಮಾಡಲು ಕಥೆಗಳನ್ನು ಅವರು ಕೇಳುತ್ತಿದ್ದಾರೆ.

ಅಭಿ ಸಿನಿಮಾದ ಮೂಲಕ ಚಂದನವನಕ್ಕೆ ಬಂದ ರಮ್ಯ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ರಾಜಕೀಯದ ಕಡೆಗೆ ಹೆಜ್ಜೆ ಹಾಕಿದ ರಮ್ಯ ಅಲ್ಲಿ ಯಶಸ್ಸು ಕಾಣಲಿಲ್ಲ. ಚಿತ್ರರಂಗದಲ್ಲೇ ಇರುತ್ತಿದ್ರೆ ರಮ್ಯಾ ಇಷ್ಟು ಹೊತ್ತಿಗೆ ದೊಡ್ಡ ಮಟ್ಟದಲ್ಲಿ ಬೆಳೆದಿರುತ್ತಿದ್ದರು. ಆದರೆ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗಿಳಿದು ತಪ್ಪು ಮಾಡಿದ್ರ ಅನ್ನುವ ಪ್ರಶ್ನೆ ಈಗ್ಲೂ ಹಲವರನ್ನು ಕಾಡುತ್ತಿದೆ.

ಒಟ್ಟಿನಲ್ಲಿ ಇದೀಗ  ಸಿನಿಮಾ, ರಾಜಕೀಯ ಆದಾದ ಬಳಿಕ ಕೆಲದಿನ ಸಿನಿಮಾ ಮತ್ತು ರಾಜಕೀಯ ಎರಡು ರಂಗದಿಂದಲೂ ದೂರ ಸರಿದಿದ್ದ ರಮ್ಯ ಈಗ ರಮ್ಯಾ ಚೈತ್ರ ಕಾಲ  ಶುರುವಾಗುವ ಮುನ್ಸೂಚನೆ ನೀಡಿದ್ದಾರೆ. ಸಿನಿಮಾ ಸಮಾರಂಭಗಳಲ್ಲಿ, ಆತ್ಮೀಯರ ಕುಟುಂಬದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್