crossorigin="anonymous"> ಕೋರಮಂಗಲದ ಆಡಿ ಕಾರು ಅಪಘಾತ ಪ್ರಕರಣ : ಆಕ್ಸಿಡೆಂಟ್ ಗೆ ಕೊನೆಗೂ ಕಾರಣ ಪತ್ತೆ ಮಾಡಿದ ಪೊಲೀಸರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
ಬೆಂಗಳೂರು

ಕೋರಮಂಗಲದ ಆಡಿ ಕಾರು ಅಪಘಾತ ಪ್ರಕರಣ : ಆಕ್ಸಿಡೆಂಟ್ ಗೆ ಕೊನೆಗೂ ಕಾರಣ ಪತ್ತೆ ಮಾಡಿದ ಪೊಲೀಸರು

ಆಗ್ಲೇ ಪೊಲೀಸರು ಎಲ್ಲರನ್ನೂ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದ್ರೆ ಸರಿ ಇರೋದು. ಪಾಪ ಅವರೆಲ್ಲಾ ದೊಡ್ಡವರ ಮಕ್ಕಳು ದೊಡ್ಡ ಕಾರಿನಲ್ಲಿ ಬಂದವರಲ್ವ.

Radhakrishna Anegundi by Radhakrishna Anegundi
02-10-21, 6 : 53 am
in ಕ್ರೈಮ್
audi accident
Share on FacebookShare on TwitterWhatsAppTelegram

ಬೆಂಗಳೂರು : ಕೋರಮಂಗಲದಲ್ಲಿ ನಡೆದ ಕಾರು ಅಪಘಾತ ಪ್ರಕರಣದಲ್ಲಿ ಹೊಸೂರು ಶಾಸಕರ ಪುತ್ರ ಸೇರಿ 7 ಜನ ಮೃತಪಟ್ಟಿದ್ದರು. ದುಬಾರಿ ಕಾರು ಮತ್ತು ಶ್ರೀಮಂತರ ಮಕ್ಕಳು ಮಾಡಿದ ಈ ಅನಾಹುತ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.

ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕಾರಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸೂಕ್ಷ್ಮವಾಗಿ ತನಿಖೆ ನಡೆಸಿದ್ದಾರೆ. ಇದೀಗ ಅಪಘಾತಕ್ಕೆ ಕಾರಣ ಸಿಕ್ಕಿದ್ದು, ಅತೀಯಾದ ಮದ್ಯಪಾನವೇ ಇವರೆಲ್ಲರ ಪ್ರಾಣ ಕಸಿಯಿತು ಎಂದು ಗೊತ್ತಾಗಿದೆ.

ಅಪಘಾತ ಕುರಿತಂತೆ ಬಹುತೇಕ ಎಲ್ಲಾ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದು, ಅಪಘಾತದ ವೇಳೆ ವಾಹನ ಚಲಾಯಿಸುತ್ತಿದ್ದ ಹೊಸೂರು ಶಾಸಕನ ಪುತ್ರನ ಕರುಣಾಸಾಗರ್ ಮದ್ಯಪಾನ ಮಾಡಿದ್ದ ಎಂದು ಗೊತ್ತಾಗಿದೆ. ಇದೇ ವೇಳೆ ಕಾರಿನಲ್ಲಿದ್ದವರು ಅಂದಿನ ಟ್ರಾವೆಲ್ ಹಿಸ್ಟರಿ ಕೂಡಾ ಪೊಲೀಸರ ಕೈಗೆ ಸಿಕ್ಕಿದೆ.

audi accident1

ಕರುಣಾಸಾಗರ್ ಸ್ನೇಹಿತೆಯರು ಕೋರಮಂಗಲದ ಪಿಜಿ ಬಳಿಯ ಅಂಗಡಿಯಿಂದ ಮದ್ಯ ಖರೀದಿಸಿದ್ದಾರೆ. ರಾತ್ರಿ 8.45ಕ್ಕೆ ಇವರು ಮದ್ಯದೊಂದಿಗೆ ಪಿಜಿ ಸೇರಿದ್ದಾರೆ. ನಂತ್ರ 11.45ರ ತನಕ ಪಿಜಿಯಲ್ಲೇ ಪಾರ್ಟಿ ಮಾಡಿದ ಗೆಳೆಯರ ಗ್ಯಾಂಗ್ ಕುಡಿದ ನಶೆಯಲ್ಲಿ ನೈಟ್ ರೌಂಡ್ಸ್ ಹೊರಟಿದ್ದಾರೆ.

ಈ ವೇಳೆ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಾಗ ನಾನು ಶಾಸಕರ ಮಗ ಎಂದು ಕರುಣಾಸಾಗರ್ ಹೇಳಿದ್ದಾನೆ. ಆಗ್ಲೇ ಪೊಲೀಸರು ಎಲ್ಲರನ್ನೂ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದ್ರೆ ಸರಿ ಇರೋದು. ಪಾಪ ಅವರೆಲ್ಲಾ ದೊಡ್ಡವರ ಮಕ್ಕಳು ದೊಡ್ಡ ಕಾರಿನಲ್ಲಿ ಬಂದವರಲ್ವ.

ಇದಾದ ಬಳಿಕ ಕರುಣಾಸಾಗರ್ ಗ್ಯಾಂಗ್ ವೆಂಕಟಾಪುರದ ಸ್ನೇಹಿತರ ಮನೆಗೆ ತೆರಳಿ ಅಲ್ಲಿ ಊಟ ತರಿಸಿ ಊಟ ಮಾಡಿದ್ದಾರೆ.. ನಂತರ ರಾತ್ರಿ 1.35ರ ಸುಮಾರಿಗೆ ಮತ್ತೆ ನೈಟ್ ರೌಂಡ್ಸ್ ಮುಂದುವರಿಸಿದ್ದಾರೆ. ಈ ವೇಳೆ ಎಣ್ಣೆ ಏಟಿನಲ್ಲಿ ಕಾರು ನಿಯಂತ್ರಣಕ್ಕೆ ಸಿಗದೆ ಅಪಘಾತ ಸಂಭವಿಸಿದೆ.

ಕಾರು ಓಡಿಸುತ್ತಿದ್ದ ಶಾಸಕರ ಪುತ್ರ ಕರುಣಾಸಾಗರ್ ವಿಪರೀತ ಕುಡಿದಿದ್ದ ಜೊತೆಗೆ ಇನ್ನಿಬ್ಬರು ಕೂಡ ಕಂಠ ಪೂರ್ತಿ ಕುಡಿದಿದ್ದರು ಅನ್ನುವುದು ಸಾಬೀತಾಗಿದೆ. ಈ ಮೂಲಕ ಅಪಘಾತಕ್ಕೂ ಮುನ್ನ ಕರುಣಾಸಾಗರ್ ಮತ್ತು ಆತನ ಸ್ನೇಹಿತರು ಪಾರ್ಟಿ ಮಾಡಿರುವುದು ಸ್ಪಷ್ಟವಾಗಿದೆ. ನೈಟ್ ಕರ್ಫ್ಯೂ ಇದ್ದರೂ ಇವರೆಲ್ಲರೂ ಪಾರ್ಟಿ ಮಾಡಿದ್ದಾರೆ ಅಂದ್ರೆ ಎಲ್ಲೋ ವ್ಯವಸ್ಥೆಯ ಲೋಪದ ವಾಸನೆ ಬಡಿಯುತ್ತಿದೆ. ಇನ್ನು ಮೃತರು ಡ್ರಗ್ಸ್ ಸೇವನೆ ಮಾಡಿದ್ದರೋ ಇಲ್ಲವೋ ಅನ್ನುವುದರ ವರದಿಯನ್ನು ಪೊಲೀಸರು ನಿರೀಕ್ಷಿಸುತ್ತಿದ್ದಾರೆ.

Tags: audi carkoramangalaMAIN
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್