ಹೈದರಬಾದ್ ನ ಉಷಾರಾಮ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದ ಗನ್ನವರಂ ಮಂಡಲ ತೆಂಪಲ್ಲಿ ನಿವಾಸಿ ಗೌತಮಿ (28) ಗೆ ಅದೇ ಕಾಲೇಜಿನಲ್ಲಿ ಪಾಲಿಟೆಕ್ನಿಕ್ ವ್ಯಾಸಂಗ ಮಾಡುತ್ತಿದ್ದ ಲೋಕೇಶ್ ಜೊತೆ ಪ್ರೀತಿಯಾಗಿತ್ತು. ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿರ್ಧರಿಸಿದ್ದರು.
ಈ ಬಗ್ಗೆ ತಮ್ಮ ತಮ್ಮ ಮನೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಆದರೆ ಇಬ್ಬರ ಮಧ್ಯೆ ವಯಸ್ಸಿನ ಅಂತರ ಮದುವೆಗೆ ಅಡ್ಡಿಯಾಗಿತ್ತು. ಹೀಗಾಗಿ ಎರಡೂ ಕುಟುಂಬದವರು ಈ ಮದುವೆಗೆ ಸಮ್ಮತಿಸಿರಲಿಲ್ಲ.
ಈ ನಡುವೆ ಗೌತಮಿಗೆ ಮನೆ ಮಂದಿ ನೋಡಿದ ಹುಡುಗನ ಜೊತೆ ನಿಶ್ಚಿತಾರ್ಥ ಆಗಿತ್ತು. ಮುಂದಿನ ತಿಂಗಳು ಮದುವೆ ಕೂಡ ಫಿಕ್ಸ್ ಆಗಿತ್ತು.
ಯಾವಾಗ ತಮ್ಮ ಪ್ರೀತಿ ಸೋಲುತ್ತದೆ ಎಂದು ಗೊತ್ತಾಯ್ತೋ ಇಬ್ಬರೂ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಜಯವಾಡದ ಗಾಂಧಿನಗರದ ಜಗಪತಿ ಲಾಡ್ಜ್ಗೆ ಹೋಗಿ ರೂಮ್ ಬುಕ್ ಮಾಡಿದ್ದಾರೆ. ಹಬ್ಬಕ್ಕೆ ಶಾಪಿಂಗ್ ಮಾಡಲು ಆಗಮಿಸಿದ್ದಾಗಿ ಹೋಟೆಲ್ ಸಿಬ್ಬಂದಿಗೆ ತಿಳಿಸಿದ್ದರು. ರೂಮಿಗೆ ತೆರಳಿದ್ದ ಇಬ್ಬರು ಜ್ಯೂಸಿನಲ್ಲಿ ಕೀಟನಾಶಕ ಔಷಧಿಯನ್ನು ಬೆರೆಸಿಕೊಂಡು ಕುಡಿದಿದ್ದಾರೆ.
ಇನ್ನು ರೂಮಿನಿಂದ ಇಬ್ಬರು ಹೊರ ಬಾರದೇ ಇರುವುದನ್ನು ಗಮನಿಸಿ ಹೋಟೆಲ್ನ ಸಿಬ್ಬಂದಿ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಬಂದು ಬಾಗಿಲು ಮುರಿದು ಒಳ ಪ್ರವೇಶಿಸಿದರೆ ಇಬ್ಬರು ಸಾವು ಬದುಕಿನ ನಡುವೆ ಒತ್ತಾಡುತ್ತಿದ್ದರು.
ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗೌತಮಿ ಪ್ರಾಣ ಪಕ್ಷಿ ಆಗಾಗಲೇ ಹಾರಿ ಹೋಗಿತ್ತು. ಇನ್ನು ಲೋಕೇಶ್ ಪರಿಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
Discussion about this post