ಮಂಗಳೂರು : ದುಬೈನಿಂದ ಮಂಗಳೂರಿಗೆ ಬಂದಿದ್ದ ಸೋಂಕಿತ ವ್ಯಕ್ತಿಯೊಬ್ಬರಲ್ಲಿ ಇಟಾ ರೂಪಾಂತರಿ ವೈರಸ್ ತಗುಲಿರೋದು, ಜಿನೋಮಿಕ್ ಅಧ್ಯಯನದಿಂದಾಗಿ ಗೊತ್ತಾಗಿದೆ. ಈ ವ್ಯಕ್ತಿ ನಾಲ್ಕು ತಿಂಗಳ ಹಿಂದೆ ಬಂದಿದ್ದು ಈಗ ಗುಣಮುಖರಾಗಿದ್ದಾರೆ ಅನ್ನುವ ಶುಭ ಸುದ್ದಿಯನ್ನು ಕೂಡಾ ಆರೋಗ್ಯ ಇಲಾಖೆ ಕೊಟ್ಟಿದೆ.
ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಮಾತನಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರಿಗೆ ನಾಲ್ಕು ತಿಂಗಳ ಹಿಂದೆ ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೋನಾ ಪತ್ತೆಯಾಗಿತ್ತು. ಬಳಿಕ ಅವರು ಸೋಂಕಿನಿಂದ ಮುಕ್ತರಾಗಿದ್ದರು.
ಇನ್ನು ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿದ್ದ 120ಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ, ಆದರೆ ಯಾರಿಗೂ ಸೋಂಕು ಪಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಕೊರೋನಾ ಸೋಂಕಿತ ವ್ಯಕ್ತಿಯ ಮಾದರಿಯನ್ನು ಜಿನೋಮಿಕ್ ಪರೀಕ್ಷೆಗೂ ಕಳುಹಿಸಲಾಗಿತ್ತು. ಆ ವ್ಯಕ್ತಿಯಲ್ಲಿ ಇಟಾ ರೂಪಾಂತರಿ ಸೋಂಕು ಇರೋದು ಪತ್ತೆಯಾಗಿದೆ. ಆದ್ರೇ ಕೊರೋನಾದಿಂದ ಗುಣಮುಖರಾದ ನಂತ್ರ, ಅವರು ಮರಳಿ ದುಬೈಗೆ ತೆರಳಿದ್ದಾರೆ ಎಂದು ಡಾ. ಕಿಶೋರ್ ಕುಮಾರ್ ಹೇಳಿದ್ದಾರೆ.
ಇಟಾ ರೂಪಾಂತರಿ ಮೊದಲು ಇಂಗ್ಲೆಂಡ್ ನಲ್ಲಿ ಪತ್ತೆಯಾಗಿತ್ತು. ಬಳಿಕ ಇದು ಅಲ್ಲಲ್ಲಿ ಪತ್ತೆಯಾಗಿದ್ದು ಬಿಟ್ಟರೆ, ಡೆಲ್ಟಾ ರೀತಿ ವ್ಯಾಪಕವಾಗಿರಲಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೂಪಾಂತರಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ ಆಂತಕ ಪಡುವ ಅಗತ್ಯವಿಲ್ಲ ಅನ್ನುವುದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಮಾತು.
Discussion about this post