crossorigin="anonymous"> No vaccination No ration ತಂದ ಆವಾಂತರ : ಒಂದೇ ನಿಮಿಷದ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದ ವ್ಯಕ್ತಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Trending

No vaccination No ration ತಂದ ಆವಾಂತರ : ಒಂದೇ ನಿಮಿಷದ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದ ವ್ಯಕ್ತಿ

ತಲೆಯಲ್ಲಿ ಲದ್ದಿ ತುಂಬಿದ ಅಧಿಕಾರಿಗಳು ಹೊರಡಿಸಿದ ಆದೇಶ ಅನೇಕ ಯಡವಟ್ಟುಗಳಿಗೆ ಕಾರಣವಾಗಿದೆ

Radhakrishna Anegundi by Radhakrishna Anegundi
04-09-21, 7 : 20 am
in ದಕ್ಷಿಣ ಕನ್ನಡ, ರಾಜ್ಯ
corona alert Health ministry sounds alarm as weekly Covid positivity rate exceeds 10% in 7 states
Share on FacebookShare on TwitterWhatsAppTelegram

ಮಂಗಳೂರು : ಲಸಿಕೆ ಪಡೆಯದಿದ್ರೆ ರೇಷನ್ ಇಲ್ಲ, ಪೆನ್ಸನ್ ಇಲ್ಲ ಎಂದು ತಲೆಯಲ್ಲಿ ಲದ್ದಿ ತುಂಬಿದ ಅಧಿಕಾರಿಗಳು ಹೊರಡಿಸಿದ ಆದೇಶ ಅನೇಕ ಯಡವಟ್ಟುಗಳಿಗೆ ಕಾರಣವಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಲಭ್ಯವಿದ್ದು, ಜನ ಲಸಿಕೆ ಪಡೆಯುತ್ತಿಲ್ಲ ಅಂದಾಗ ಇಂತಹ ಆದೇಶ ಹೊರಡಿಸುವುದರಲ್ಲಿ ಅರ್ಥವಿಲ್ಲ. ಪ್ರಸ್ತುತ ಪರಿಸ್ಥಿತಿಯಲ್ಲಿ ಬೆಳಗ್ಗೆ ಹೋಗಿ ಕ್ಯೂ ನಿಂತವರಿಗೆ ಲಸಿಕೆ ಸಿಗೋದಿಲ್ಲ ಅಂದ ಮೇಲೆ ಲಸಿಕೆ ಹಾಕಿಸಿಲ್ಲ ಅಂದ್ರೆ ರೇಷನ್ ಕೊಡೋದಿಲ್ಲ ಅನ್ನುವುದು ಅಧಿಕಾರಿಗಳ ಮೂರ್ಖತನವೇ ಸರಿ.

ಹೀಗೆ ಅಧಿಕಾರಿಗಳು ಹೊರಡಿಸಿದ ಆದೇಶದಿಂದ ಭಯಗೊಂಡ ವ್ಯಕ್ತಿಯೊಬ್ಬರು ಒಂದೇ ನಿಮಿಷದ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ತಾಲೂಕಿನ ದುಗ್ಗಲಡ್ಕ ಗ್ರಾಮದಲ್ಲಿ ಈ ಘಟನೆ ಬುಧವಾರ ನಡೆದಿದೆ.

ಬುಧವಾರ ಈ ಗ್ರಾಮ ವ್ಯಾಪ್ತಿಯಲ್ಲಿ ಮೆಗಾ ಲಸಿಕಾ ವಿತರಣಾ ಕ್ಯಾಂಪ್ ಹಮ್ಮಿಕೊಳ್ಳಲಾಗಿತ್ತು. ಸಾಕಷ್ಟು ಜನ ಕೂಡಾ ಆಗಮಿಸಿದ್ದರು. ಈ ವೇಳೆ ಗ್ರಾಮದ ವ್ಯಕ್ತಿಯೊಬ್ಬರು ಮೊದಲ ಡೋಸ್ ಪಡೆದ ಬಳಿಕ ಲಸಿಕಾ ಕೊಠಡಿಯಿಂದ ವಿಶ್ರಾಂತಿ ಕೊಠಡಿಗೆ ತೆರಳಿರಲಿಲ್ಲ. ಒತ್ತಡ ಸಾಕಷ್ಟಿದ್ದ ಕಾರಣ ಲಸಿಕೆ ನೀಡುತ್ತಿದ್ದ ನರ್ಸ್ ಇದೇ ವ್ಯಕ್ತಿಗೆ ಮತ್ತೊಂದು ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಚುಚ್ಚಿದ್ದಾರೆ. ಸೂಜಿ ಹೊರ ತೆಗೆಯಬೇಕು ಅನ್ನುವಷ್ಟರಲ್ಲಿ ಮಾಡಿರುವ ಯಡವಟ್ಟು ನರ್ಸ್ ಗೆ ಗೊತ್ತಾಗಿದೆ. ತಕ್ಷಣ ಎಚ್ಚೆತ್ತುಕೊಂಡು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ.

ಹೀಗಾಗಿ ಏಕ ಕಾಲಕ್ಕೆ ಎರಡು ಡೋಸ್ ಲಸಿಕೆ ಪಡೆದ ವ್ಯಕ್ತಿಯನ್ನು 3 ಗಂಟೆಗಳ ಕಾಲ ಲಸಿಕಾ ಕೇಂದ್ರದಲ್ಲೇ ಇರಿಸಲಾಗಿತ್ತು. ಯಾವುದೇ ಅಡ್ಡ ಪರಿಣಾಮಗಳು ಕಂಡು ಬಾರದ ಕಾರಣ ಅವರನ್ನು ಮನೆಗೆ ಕಳುಹಿಸಿಕೊಡಲಾಗಿದೆ. ಆರೋಗ್ಯ ಅಧಿಕಾರಿಗಳು ಈ ವ್ಯಕ್ತಿಯ ಮೇಲೆ 24 ಗಂಟೆಗಳ ಕಾಲ ನಿಗಾ ವಹಿಸಿದ್ದು, ಯಾವುದೇ ತೊಂದರೆಗಳು ಕಾಣಿಸಿಲ್ಲ. ಅವರು ಎಂದಿನಂತೆ ಆರೋಗ್ಯವಾಗಿರುವುದು ಅಧಿಕಾರಿಗಳ ನೆಮ್ಮದಿಗೆ ಕಾರಣವಾಗಿದೆ.

ಇನ್ನು ಈ ಘಟನೆ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಪ್ರತಿಕ್ರಿಯಿಸಿದ್ದು, ಲಸಿಕೆ ಪಡೆದ ತಕ್ಷಣ ಅವರು ವಿಶ್ರಾಂತಿ ಕೊಠಡಿಗೆ ತೆರಳಬೇಕಿತ್ತು. ಆದರೆ ಹೋಗಿರಲಿಲ್ಲ. ಹೀಗಾಗಿ ಲಸಿಕೆ ನೀಡುವವರು ಮತ್ತೊಂದು ಡೋಸ್ ಕೊಟ್ಟಿದ್ದಾರೆ. ಇದು ನಿರ್ಲಕ್ಷ್ಯದಿಂದ ಆಗಿರುವ ಘಟನೆಯಲ್ಲ. ಜೊತೆಗೆ ಈ ವ್ಯಕ್ತಿ ಪೂರ್ತಿಯಾಗಿ ಲಸಿಕೆ ( ಎರಡು ಡೋಸ್ ) ಹಾಕಿಸಿಲ್ಲ ಅಂದ್ರೆ ರೇಷನ್, ಪೆನ್ಸನ್ ಸಿಗೋದಿಲ್ಲ ಎಂದು ನಂಬಿದ್ದರು. ಹೀಗಾಗಿ ಎರಡು ಸಲ ಲಸಿಕೆ ಪಡೆಯಬೇಕು ಅನ್ನುವುದು ಅವರ ಭಾವನೆಯಾಗಿತ್ತು. ಇನ್ನು 84 ದಿನ ಕಳೆದ ಬಳಿಕ ಅವರಿಗೆ ಮತ್ತೊಂದು ಡೋಸ್ ಲಸಿಕೆ ನೀಡುವುದಾಗಿ ಹೇಳಿದ್ದಾರೆ.   

Tags: cornaFEATUREDsulliaಕೊರೋನಾಮಂಗಳೂರುಲಸಿಕೆಸುಳ್ಯ
Share4TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್