crossorigin="anonymous"> 21 ಕಿಮೀ ಉದ್ಧದ ಸೇತುವೆ ದಾಟಲು 250 ರೂ ಶುಲ್ಕ : ದುಬಾರಿ ಸಮುದ್ರ ಸೇತುವೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

21 ಕಿಮೀ ಉದ್ಧದ ಸೇತುವೆ ದಾಟಲು 250 ರೂ ಶುಲ್ಕ : ದುಬಾರಿ ಸಮುದ್ರ ಸೇತುವೆ

ಇದಕ್ಕೆ ತಗುಲಿದ ವೆಚ್ಚ ಎಷ್ಟು ಸಾವಿರ ಕೋಟಿ ಗೊತ್ತಾ?

Radhakrishna Anegundi by Radhakrishna Anegundi
05-01-24, 11 : 20 am
in ಟಾಪ್ ನ್ಯೂಸ್, ದೇಶ
mumbai-trans-harbour-link-toll-rate-rs-250-per-trip
Share on FacebookShare on TwitterWhatsAppTelegram

ಸಮುದ್ರ ಸೇತುವೆ ದಾಟಲು ಮಹಾರಾಷ್ಟ್ರ ಸರ್ಕಾರ ಇದೀಗ ಟೋಲ್ ದರ ನಿಗದಿ ಮಾಡಿದೆ

ದೇಶದ ಅತಿ ಉದ್ದದ ಸಮುದ್ರ ಸೇತುವೆ ಅನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಮುಂಬೈ ಟ್ರಾನ್ಸ್  ಹಾರ್ಬರ್ ಲಿಂಕ್ (Mumbai Trans-Harbour Link) ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಇದೇ ಜನವರಿ 12ರಂದು ಉದ್ಘಾಟಿಸಲಿದ್ದಾರೆ.

ಈ ನಡುವೆ ಸೇತುವೆಯನ್ನು ಬಳಸುವವರಿಗೆ ಶುಲ್ಕ ವಿಧಿಸುವ ಕುರಿತಂತೆ ಮಹಾರಾಷ್ಟ್ರ ಸರ್ಕಾರ ತೀರ್ಮಾನ ಕೈಗೊಂಡಿದ್ದು,  ಕಾರುಗಳಲ್ಲಿ ಸಂಚರಿಸುವವರಿಗೆ ಒಂದು ಕಡೆ ಪ್ರಯಾಣಕ್ಕೆ 250 ರೂಪಾಯಿ ನಿಗದಿ ಮಾಡಲಾಗಿದೆ. ಈ ಸಂಬಂಧ ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ : ಜ್ಯೋತಿಷಿ ಹೇಳಿದ ಮಾತಿನಿಂದ ಖಿನ್ನತೆಗೆ ಜಾರಿದ್ರ ಪ್ರತಾಪ್ 

ಕಾರಿಗೆ ಏಕಮುಖ ಟೋಲ್ 250 ರೂಪಾಯಿಗಳಾಗಿದ್ದು, ವಾಪಾಸ್ ಪ್ರಯಾಣ ಹಾಗೂ ದೈನಂದಿನ ನಿರಂತರ ಪ್ರಯಾಣಕ್ಕೆ ಬೇರೆ ಬೇರೆ ಶುಲ್ಕಗಳನ್ನು ನಿಗದಿಗೊಳಿಸಲಾಗಿದೆ. ಈ ದರ ದುಬಾರಿಯಾಯ್ತು ಅನ್ನುವ ಆಕ್ರೋಶದ ನಡುವೆ, ನಿಯಮಗಳ ಪ್ರಕಾರ ಒಟ್ಟು ಶುಲ್ಕದ ಅರ್ಧದಷ್ಟು ಮೊತ್ತವನ್ನು ಮಾತ್ರ ವಿಧಿಸಲಾಗುತ್ತಿದ್ದು, ಪ್ರಯಾಣದ ಸಮಯ ಎರಡು ಗಂಟೆಗಳಿಂದ 20 ನಿಮಿಷಕ್ಕೆ ಇಳಿಯುತ್ತದೆ. ಮಾತ್ರವಲ್ಲದೆ ಪ್ರತೀ ಪ್ರಯಾಣಿಕ 500 ರೂಪಾಯಿ ಮೊತ್ತದ  ಇಂಧನ ಉಳಿಸಲಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

prime-minister-modi-will-arrive-in-bangalore-on-august-26-to-congratulate-isro-scientists

ಸೇತುವೆಯ ಹೈಲೈಟ್ಸ್

  • ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋ ಮೀಟರ್ ಉದ್ದದ ಈ ಸೇತುವೆ
  • ಪ್ರಯಾಣದ ಅವಧಿ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಇಳಿಕೆ
  • ಸರಿಸುಮಾರು 22 ಕಿಲೋ ಮೀಟರ್‌ ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆ
  • ಈ ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸಲಿದೆ.
  • ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಈ ಯೋಜನೆಯನ್ನು 1962ರಲ್ಲಿ ರೂಪಿಸಲಾಗಿತ್ತು.
  • 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನ
  • ಯೋಜನೆಯಲ್ಲಿ ರಾಜಕೀಯ ಪ್ರಾರಂಭ ಹಾಗೂ ಯೋಜನೆಗೆ ಟೀಕೆ ಬಂದ ಹಿನ್ನೆಲೆಯಲ್ಲಿ ಸ್ಥಗಿತ
  • 2016ರ ಡಿಸೆಂಬರ್‌ 24ರಂದು ಪ್ರಧಾನಿ ಮೋದಿ ಅವರಿಂದ ಈ ಯೋಜನೆಗೆ ಶಂಕುಸ್ಥಾಪನೆ
  • 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭ
  • ಸೆಪ್ಟೆಂಬರ್‌ 22, 2022ಕ್ಕೆ ಯೋಜನೆ ಮುಕ್ತಾಯಕ್ಕೆ ಗಡುವು, ಕೋವಿಡ್‌ ಕಾರಣ ಕಾರ್ಮಿಕರ ಕೊರತೆ ಕಾಮಗಾರಿ ವಿಳಂಭ
  • ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂಪಾಯಿ ಅಂದಾಜು ವೆಚ್ಚ
modi2 1

ಇದೀಗ ಈ ವೆಚ್ಚ 16,904.43 ಕೋಟಿ ರೂಪಾಯಿಗೆ ಏರಿಕೆ ಈ ಯೋಜನೆಯನ್ನು ಮೂರು ಪ್ಯಾಕೇಜ್‌ಗಳಾಗಿ ವಿಂಗಡಿಸಲಾಗಿತ್ತು. ಮೊದಲ ಪ್ಯಾಕೇಜ್ ಅನ್ನು ಸೆವ್ರಿಯಿಂದ ಥಾಣೆ ಕ್ರೀಕ್‌ಗೆ 10.38 ಕಿಮೀ. ಇದನ್ನು L&T ಮತ್ತು IHI ಕಾರ್ಪೊರೇಷನ್ ಕಂಪನಿಗಳು ಅಭಿವೃದ್ಧಿಪಡಿಸುತ್ತಿದೆ. ಎರಡನೇ ಪ್ಯಾಕೇಜ್ ಥಾಣೆಯ ಕ್ರೀಕ್‌ನಿಂದ ಶಿವಾಜಿ ನಗರದವರೆಗೆ 7.8 ಕಿಮೀಗಳಷ್ಟಿದ್ದು, ಇದನ್ನು ಟಾಟಾ ಪ್ರಾಜೆಕ್ಟ್‌ ಮತ್ತು ಡೇವೂ E&C ಕಂಪನಿಗಳು ಅಭಿವೃದ್ಧಿಪಡಿಸಿದೆ. ಮೂರನೇ ಪ್ಯಾಕೇಜ್ 3.6 ಕಿಲೋಮೀಟರ್‌ಗಳನ್ನು L&T ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್