crossorigin="anonymous"> ಮಂಡ್ಯದಲ್ಲಿ ಸುಮಲತಾ ಮನೆ ಕಟ್ಟಿದ್ರೆ ಕುಮಾರಣ್ಣಂಗೆ ಅದ್ಯಾಕೆ ಹೊಟ್ಟೆಯುರಿ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
ಮೈಸೂರು

ಮಂಡ್ಯದಲ್ಲಿ ಸುಮಲತಾ ಮನೆ ಕಟ್ಟಿದ್ರೆ ಕುಮಾರಣ್ಣಂಗೆ ಅದ್ಯಾಕೆ ಹೊಟ್ಟೆಯುರಿ…

ಇನ್ನು ಕುಮಾರಸ್ವಾಮಿಯ ಶುಭ ಹಾರೈಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಅವರು ಮನೆ ಕಟ್ಟುವ ಸಂದರ್ಭದಲ್ಲಿ  ಹೃದಯವಂತಿಕೆ ಇರುವವರು ಒಳ್ಳೆಯದಾಗ್ಲಿ ಎಂದು ಹಾರೈಸಿದ್ದಾರೆ, ಧನ್ಯವಾದಗಳು, ನಮ್ಮ ಕೆಲಸ ಎಂದಿಗೂ ಮಾತನಾಡಬೇಕು ಅಂದಿದ್ದಾರೆ.

Radhakrishna Anegundi by Radhakrishna Anegundi
01-09-21, 3 : 17 pm
in ರಾಜ್ಯ
sumaltha kumaraswamy
Share on FacebookShare on TwitterWhatsAppTelegram

ಮೈಸೂರು : ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಿಸಲು ಮುಂದಾಗಿರುವುದು ಜೆಡಿಎಸ್ ನಾಯಕರಲ್ಲಿ ಒಂದಿಷ್ಟು ಗಲಿಬಿಲಿ ಮೂಡಿಸಿದೆ ಅನ್ನುವುದು ಸ್ಪಷ್ಟ. ಈಗಾಗಲೇ ಅಕ್ರಮ ಗಣಿಗಾರಿಕೆ ವಿರುದ್ಧ ಸುಮಲತಾ ಸಾರಿರುವ ಸಮರ ಯಾವೆಲ್ಲಾ ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಿದೆ ಅನ್ನುವುದು ರಾಜ್ಯದ ಜನತೆಗೆ ಗೊತ್ತಾಗಿದೆ. ಇದೀಗ ಮಂಡ್ಯದಲ್ಲಿ ಅದರಲ್ಲೂ ಮದ್ದೂರಿನಲ್ಲಿ ಸುಮಲತಾ ಸ್ವಂತ ಮನೆ ನಿರ್ಮಿಸುವ ಮೂಲಕ ಮತ್ತೊಂದು ಸಂದೇಶ ರವಾನಿಸಿದ್ದಾರೆ.

ಈ ಹಿಂದೆ ರಮ್ಯ ಕೂಡಾ ಹೀಗೆ ಮನೆ ಮಾಡಿದ್ರು, ಎನಾಯ್ತು ಗೊತ್ತಿಲ್ವ ಅಂದವರಿಗೆ ಖಡಕ್ ಉತ್ತರ ಕೊಟ್ಟಿರುವ ಅಭಿಷೇಕ್ ಅಂಬರೀಶ್ ಹೇಳೋದಿಲ್ಲ, ಮಾಡಿ ತೋರಿಸುತ್ತೇವೆ ಅಂದಿದ್ದಾರೆ. ಈ ಮೂಲಕ ಹೊಸದಾಗಿ ನಿರ್ಮಾಣವಾಗಲಿರುವ ಮನೆ, ಮಂಡ್ಯ ರಾಜಕೀಯ ಇತಿಹಾಸದಲ್ಲೊಂದು ಕ್ರಾಂತಿಯ ಸುಳಿವು ನೀಡಿದೆ.

ಈ ನಡುವೆ ಸುಮಲತಾ ಅವರ ಮನೆ ನಿರ್ಮಾಣದ ಕಾರ್ಯದ ಕುರಿತಂತೆ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಕುಮಾರಸ್ವಾಮಿ, ಬಹಳ ಒಳ್ಳೆಯ ಕೆಲಸ, ನಮಗೂ ಒತ್ತಡ ಕಡಿಮೆಯಾಗುತ್ತದೆ. ಸಂಸದರು ನೇರವಾಗಿ ಜನರಿಗೆ ಸಿಗುತ್ತಾರೆ, ಆದಷ್ಟು ಬೇಗ ಮನೆಯನ್ನು ಕಟ್ಟಿ ಮಂಡ್ಯ ಜಿಲ್ಲೆಯ ಜನತೆಯ ಸಮಸ್ಯೆಯನ್ನು ಬಗೆ ಹರಿಸಲಿಕ್ಕೆ ಅವರು ಕ್ರಮ ಕೈಗೊಂಡ್ರೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದಿಸೋಣ ಎಂದು ಶುಭ ಹಾರೈಸಿದ್ದಾರೆ.

ಜೊತೆಗೆ ” ನಾನೇನು ರಾಮನಗರದಲ್ಲಿ ಮನೆ ಮಾಡಿದ್ದೀನಾ, ಚನ್ನಪಟ್ಟಣದಲ್ಲಿ ಮನೆ ಮಾಡಿದ್ದೀನಾ. ಜನಗಳನ್ನು ಭೇಟಿ ಮಾಡುವಂತದ್ದು ನಮ್ಮ ಕೈಯಲ್ಲಿದೆ. ನಾವು ಮನೆ ಮಾಡಿದ ತಕ್ಷಣ ಮನೆಯೊಳಗೆ ಇಲ್ಲದೆ ಜನಗಳ ಕೈಗೆ ಸಿಗದೆ ಹೋದ್ರೆ ಏನಾಗುತ್ತದೆ. ನಿರಂತರವಾಗ ಸಂಪರ್ಕದಲ್ಲಿ ಎಲ್ಲೇ ಇದ್ರು, ಇವತ್ತೇನು ಸಾರಾ ಮಹೇಶ್ ಕೆ ಆರ್ ನಗರದಲ್ಲಿ ಮನೆ ಮಾಡಿದ್ದಾರೆಯೇ. ಮೈಸೂರಿನಿಂದ ಎಲ್ಲಾ ನಿಭಾಯಿಸುತ್ತಿದ್ದಾರೆ. ಮನೆ ಮಾಡಿದ ತಕ್ಷಣ ಎನೋ ಒಂದು ಆಗುತ್ತದೆ ಅಂತ ನಾನು ಹೇಳೋದಿಲ್ಲ. ಆದರೆ ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ ಜನರೊಂದಿಗೆ ನಿರಂತರವಾದ ಸಂಪರ್ಕ, ಕಷ್ಟಗಳನ್ನು ಹೇಳಿಕೊಳ್ಳಲು ಬಂದಾಗ ಸ್ಪಂದಿಸುವ ಭಾವನೆ ಇದ್ರೆ ಅದು ಯಶಸ್ವಿಯಾಗುತ್ತದೆ.

ಇನ್ನು ಕುಮಾರಸ್ವಾಮಿಯ ಶುಭ ಹಾರೈಕೆಗೆ ಪ್ರತಿಕ್ರಿಯಿಸಿರುವ ಸುಮಲತಾ ಅವರು ಮನೆ ಕಟ್ಟುವ ಸಂದರ್ಭದಲ್ಲಿ  ಹೃದಯವಂತಿಕೆ ಇರುವವರು ಒಳ್ಳೆಯದಾಗ್ಲಿ ಎಂದು ಹಾರೈಸಿದ್ದಾರೆ, ಧನ್ಯವಾದಗಳು, ನಮ್ಮ ಕೆಲಸ ಎಂದಿಗೂ ಮಾತನಾಡಬೇಕು ಅಂದಿದ್ದಾರೆ.

ಇನ್ನು ಕುಮಾರಸ್ವಾಮಿಯವರು ಹೇಳಿಕೆ ನೋಡಿದ್ರೆ ಅಚ್ಚರಿಯಾಗುತ್ತದೆ. ಇದೇ ಕುಮಾರಸ್ವಾಮಿಯವರು ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ರು, ನಿಖಿಲ್ ಮಂಡ್ಯದಲ್ಲಿ ಮನೆ ಮಾಡ್ತೀನಿ ಅಂದಿದ್ರು. ಈ ಎರಡೂ ವಿಷಯಗಳಿಗೂ, ಕುಮಾರಸ್ವಾಮಿ ಇಂದು ಹೇಳಿದ ಮಾತಿಗೂ ಸಂಬಂಧವೇ ಇಲ್ವ..?

Tags: hdkMAINSumalatha
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್