crossorigin="anonymous"> Nalin kumar kateel ಗೆ ಟಿಕೆಟ್ ಕೊಡೋದಿಲ್ಲ ಅನ್ನಿ : ರಾಜೀನಾಮೆ ಹಿಂಪಡೆಯುತ್ತೇವೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Nalin kumar kateel ಗೆ ಟಿಕೆಟ್ ಕೊಡೋದಿಲ್ಲ ಅನ್ನಿ : ರಾಜೀನಾಮೆ ಹಿಂಪಡೆಯುತ್ತೇವೆ

Radhakrishna Anegundi by Radhakrishna Anegundi
29-07-22, 9 : 47 am
in ರಾಜ್ಯ
nalin kumar kateel party worker upset mangaluru
Share on FacebookShare on TwitterWhatsAppTelegram

ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ತಳಮಟ್ಟದ ಅನೇಕ ಕಾರ್ಯಕರ್ತರು ಪಕ್ಷದ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಅಧಿಕಾರ ಸ್ಥಾನದಲ್ಲಿ ಕೂತ ಯಾರೊಬ್ಬರಿಗೂ ನೆಟ್ಟಾರು ಸಾವಿನ ಬಿಸಿ ತಟ್ಟಿಲ್ಲ.(Nalin kumar kateel) ಈ ನಡುವೆ ಕಾರ್ಯಕರ್ತರ ಮನವೊಲಿಕೆ ನಾಯಕರು ಮುಂದಾಗಿದ್ದಾರೆ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಬಿಜೆಪಿ ನಾಯಕರ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. (Nalin kumar kateel)ನಮ್ಮ ಆಕ್ರೋಶ ಪಕ್ಷದ ವಿರುದ್ಧವಲ್ಲ, ಕೆಲವೇ ಕೆಲವು ನಾಯಕರ ನಡವಳಿಕೆ ವಿರುದ್ಧ. ನಮ್ಮ ಆಕ್ರೋಶ ಈ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಎಂದು ಸ್ಪಷ್ಟ ಪಡಿಸಿರುವ ಕಾರ್ಯಕರ್ತರು ರಾಜೀನಾಮೆ ಕೊಟ್ಟಿದ್ದಾರೆ.

ಈ ನಡುವೆ ಕರ್ನಾಟಕದಲ್ಲಿ ಪ್ರಾರಂಭವಾಗಿರುವ ರಾಜೀನಾಮೆ ಪರ್ವದ ಸುದ್ದಿ ದೆಹಲಿಗೂ ತಲುಪಿದ್ದು, ಕಾರ್ಯಕರ್ತರ ಆಕ್ರೋಶದ ಪರಿ ಕಂಡು ಹೈಕಮಾಂಡ್ ಕೂಡಾ ಗಾಬರಿಯಾಗಿದೆ. ಚುನಾವಣಾ ವರ್ಷದಲ್ಲಿ ರಾಜ್ಯ ನಾಯಕರು ಮಾಡಿಕೊಂಡ ಎಡವಟ್ಟಿನ ಬಗ್ಗೆ ಡೆಲ್ಲಿ ನಾಯಕರು ಕಿಡಿ ಕಾರಿದ್ದಾರೆ. ಜೊತೆಗೆ ತಕ್ಷಣ ಕಾರ್ಯಕರ್ತರ ಮನವೊಲಿಸಿ ಅಂದಿದ್ದಾರೆ.(Nalin kumar kateel)

ಇದನ್ನೂ ಓದಿ : ra ra rakkamma : ರಾ ರಾ ರಕ್ಕಮ್ಮ ತಂದಿಟ್ಲು ಸಂಕಷ್ಟ

ದೆಹಲಿಯ ಸೂಚನೆ ಹಿನ್ನಲೆಯಲ್ಲಿ ಕಾರ್ಯಕರ್ತರ ಮನವೊಲಿಕೆ ಪ್ರಾರಂಭಗೊಂಡಿದೆ. ಆದರೆ ನಾಯಕರ ಮನವೊಲಿಕೆಗೆ ತಂತ್ರಗಳು ಫಲ ನೀಡುವ ಲಕ್ಷಣಗಳಿಲ್ಲ. ಮೊದಲು ಪಕ್ಷಕ್ಕಾಗಿ ಪ್ರಾಣ ತೆತ್ತವರಿಗೆ ನ್ಯಾಯ ಕೊಡಿಸಿ ಆಮೇಲೆ ಉಳಿದ ಮಾತು ಅಂದಿದ್ದಾರೆ.

ಕರಾವಳಿಯಲ್ಲಿ ಇದಕ್ಕಿಂತ ಭಿನ್ನ ಪ್ರತಿಕ್ರಿಯೆ ವ್ಯಕ್ತವಾಗಿದೆ.ಪ್ರವೀಣ್ ನೆಟ್ಟಾರು ಅಂತ್ಯ ಸಂಸ್ಕಾರ ವೇಳೆ ನಡೆದ ಲಾಠಿ ಜಾರ್ಜ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳ ಅಥವಾ ಗೃಹ ಸಚಿವರ ಸೂಚನೆ ಇಲ್ಲದೆ ಲಾಠಿ ಜಾರ್ಜ್ ನಡೆದಿದ್ದು ಹೇಗೆ, ಕಾಸರಗೋಡಿನ ಹಿರಿಯ ನಾಯಕನನ್ನು ಬಿಡದೆ ಬಾಸುಂಡೆ ಬರುವಂತೆ ಬಾರಿಸಿದ್ದು ಯಾವ ನ್ಯಾಯ ಅನ್ನುವುದು ಇವರ ಪ್ರಶ್ನೆ.

ಇದನ್ನೂ ಓದಿ : Vinay guruji : ಟ್ರೋಲ್ ಪೇಜ್ ಗಳ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ವಿನಯ್ ಗುರೂಜಿ

ಈ ನಡುವೆ ಸಂಸದ ನಳಿನ್ ಕುಮಾರ್ ಅವರು ಈ ಹಿಂದೆ ಕೊಟ್ಟ ಹೇಳಿಕೆಗಳ ವಿಡಿಯೋ ವೈರಲ್ ಆಗಲಾರಂಭಿಸಿದೆ. ಇದು ಉರಿವ ಬೆಂಕಿಗೆ ತುಪ್ಪ ಸುರಿದಂತಾಗಿದ್ದು, ಇಡೀ ಜಿಲ್ಲೆಯ ಬಿಜೆಪಿಯನ್ನು ನಳಿನ್ ನಿಯಂತ್ರಿಸುತ್ತಿದ್ದಾರೆ. ಶಾಸಕರು ಕೂಡಾ ಅವರ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಕಾರ್ಯಕರ್ತರ ಮಾತಿಗೆ ಬೆಲೆ ಇಲ್ಲದಂತಾಗಿದೆ ಅನ್ನುವ ಆಕ್ರೋಶ ವ್ಯಕ್ತವಾಗಿದೆ.

praveen nettar lathi charge kasaragod bjp p ramesh attack

2024ಕ ಲೋಕಸಭಾ ಚುನಾವಣೆಯಲ್ಲಿ ನಳಿನ್ ಗೆ ಟಿಕೆಟ್ ಕೊಡುವುದಿಲ್ಲ ಅನ್ನುವ ಭರವಸೆ ಕೊಡಿ, ನಾವು ನಮ್ಮ ರಾಜೀನಾಮೆ ಹಿಂಪಡೆದು 2023ರ ಚುನಾವಣೆಗೆ ದುಡಿಯುತ್ತೇವೆ ಅನ್ನುವ ಮಾತನ್ನು ಕಡ್ಡಿ ತುಂಡು ಮಾಡಿದಂತೆ ಆಡಿದ್ದಾರೆ. ನಳಿನ್ ಅವರನ್ನೇ ಮತ್ತೆ ನೀವು ಚುನಾವಣೆಗೆ ನಿಲ್ಲಿಸುವುದಾದರೆ ಮಾತುಕತೆ ಬೇಡ ಅನ್ನುವುದು ಕೆಲ ಕಾರ್ಯಕರ್ತರ ಅಭಿಪ್ರಾಯ.

ಪರಿಸ್ಥಿತಿ ಗಮನಿಸಿದರೆ ಕಳೆದ ಬಾರಿಯಂತೆ ಈ ಬಾರಿಯೂ ನಳಿನ್ ಹಠಾವೋ ಅಂದೋಲನ ಅಬ್ಬರಿಸಿದರೂ ಅಚ್ಚರಿ ಇಲ್ಲ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್