crossorigin="anonymous"> ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು : ಇದು ಒಮಿಕ್ರೋನ್ ರೂಪಾಂತರಿಯೇ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು : ಇದು ಒಮಿಕ್ರೋನ್ ರೂಪಾಂತರಿಯೇ…?

ಒಮಿಕ್ರೋನ್ ಅಪಾಯವೋ ಇಲ್ಲವೋ ಅನ್ನುವುದು ಬೇರೆ ಪ್ರಶ್ನೆ. ಮಾಸ್ಕ್ ಸಾಮಾಜಿಕ ಅಂತರ ಮರೆತರೆ ಒಮಿಕ್ರೋನ್ ಅಪಾಯವಾಗುವುದರಲ್ಲಿ ಸಂಶಯವಿಲ್ಲ

Radhakrishna Anegundi by Radhakrishna Anegundi
30-11-21, 6 : 34 am
in ರಾಜ್ಯ
omiricon
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ಅಬ್ಬರ ಕಡಿಮೆಯಾಯ್ತು, ಭಾರತಕ್ಕಿಲ್ಲ ಕೊರೋನಾ ಮೂರನೇ ಅಲೆ ಭೀತಿ ಅನ್ನುವ ಹೆಡ್ ಲೈನ್ ನಡುವೆ ನೆಮ್ಮದಿಯ ನಿಟ್ಟುಸಿರು ಬಿಟ್ರೆ, ಒಮಿಕ್ರೋನ್ ರೂಪಾಂತರಿ ವೈರಸ್ ಆತಂಕ ಹೆಚ್ಚಿಸಿದೆ. ಈ ಬಗ್ಗೆ ತಜ್ಞರಲ್ಲೂ ಸ್ಪಷ್ಟತೆಗಳಿಲ್ಲದಿರುವುದು ಮತ್ತು ಮತ್ತಷ್ಟು ಸಂಶೋಧನೆಯ ಅಗತ್ಯವಿರುವ ಕಾರಣ ಈ ಹೊಸ ಶತ್ರುವಿನ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ.

ಈ ನಡುವೆ ನವೆಂಬರ್ 2 ರಂದು ನವೆಂಬರ್ 20ರ ಅವಧಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ 94 ಮಂದಿ ಆಗಮಿಸಿದ್ದಾರೆ. ಈ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ ಒಬ್ಬರಲ್ಲಿ ಡೆಲ್ಟಾ ಮಾದರಿ ಖಚಿತಪಟ್ಟಿದ್ದು ಮತ್ತೊಬ್ಬರಲ್ಲಿ ಡೆಲ್ಟಾಗಿಂದ ಭಿನ್ನವಾದ ವಂಶವಾಹಿಗಳು ಗುಣಗಳು ಪತ್ತೆಯಾಗಿವೆ. ಜಿನೋಮಿಕ್ ಸೀಕ್ವೆನ್ಸ್ ವರದಿಯಲ್ಲಿ ಇದು ಉಲ್ಲೇಖಿತವಾಗಿದ್ದು, ಹೀಗಾಗಿ ಈ ಮಾದರಿಯನ್ನು ಮತ್ತಷ್ಟು ಅಧ್ಯಯನ ಸಲುವಾಗಿ ಕೇಂದ್ರ ಸರ್ಕಾರದ ಪ್ರಯೋಗಾಲಯಕ್ಕೆ ಕಳುಹಿಸಿದೆ. ಈ ಮೂಲಕ ಅದು ರೂಪಾಂತರಿ ವೈರಾಣು ಅನ್ನುವುದನ್ನು ಪತ್ತೆ ಹಚ್ಚಲು ನಿರ್ಧರಿಸಲಾಗಿದೆ. ಇದನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರೇ ಸ್ಪಷ್ಟಪಡಿಸಿದ್ದಾರೆ.

ಮತ್ತೊಂದು ಗುಡ್ ನ್ಯೂಸ್ ಅಂದ್ರೆ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಸೋಂಕಿತರ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿದ್ದು, 224 ಸಂಪರ್ಕಿತರಿಗೂ ಸೋಂಕು ದೃಢಪಟ್ಟಿಲ್ಲ.

ಒಮಿಕ್ರೋನ್ ಬಲು ಅಪಾಯಕಾರಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಬಂತು ಎಚ್ಚರಿಕೆ

ನವದೆಹಲಿ : ವಿಶ್ವಕ್ಕೆ ಮತ್ತೊಂದು ಕಂಟಕ ತಂದೊಡ್ಡಲಿದೆ ಎಂದು ಭಾವಿಸಲಾಗಿರುವ ಒಮಿಕ್ರೋನ್ ರೂಪಾಂತರಿ ತಳಿ ಕುರಿತಂತೆ ಕೆಲವೇ ಕೆಲವು ವೈದ್ಯರು ಉಡಾಫೆಯ ಹೇಳಿಕೆ ನೀಡುತ್ತಿದ್ದಾರೆ. ಇದೇನು ಗಂಭೀರವಲ್ಲ. ಈಗಾಗಲೇ ಕೊರೋನಾ ಸೋಂಕು ತಗುಲಿದವರಿಗೆ ಮತ್ತೆ ತಗುಲುವುದಿಲ್ಲ ಅನ್ನುತ್ತಿದ್ದಾರೆ. ಇಂತಹ ಹೇಳಿಕೆಗಳಿಂದ ಜನ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಮತ್ತಷ್ಟು ಮರೆಯುವಂತಾಗಿದೆ. ಆದರೆ ಇದೀಗ ವಿಶ್ವ ಆರೋಗ್ಯ ಸಂಸ್ಥೆಯೇ ಒಮಿಕ್ರೋನ್ ರೂಪಾಂತರಿ ವೈರಸ್ ಜಗತ್ತಿಗೆ ಅತ್ಯಂತ ಅಪಾಯಕಾರಿ ವೈರಸ್ ಅಂದಿದೆ.

ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ WHO,  ಒಮಿಕ್ರೋನ್ ನ ಪ್ರೋಟಿನ್ ಗಳು ಭಾರೀ ಪ್ರಮಾಣದಲ್ಲಿ ರೂಪಾಂತರಗೊಂಡಿದೆ. ಹೀಗಾಗಿ ಜಗತ್ತಿನಲ್ಲಿ ಈ ವೈರಸ್ ಹರಡುವ ಸಾಧ್ಯತೆಗಳಿದೆ. ಜೊತೆಗೆ ಇದು ಅಪಾಯಕಾರಿಯಾಗಿಯೂ ಪರಿಣಮಿಸಬಹುದು. ರೂಪಾಂತರಿ ತಳಿ ಎಲ್ಲಿ ಹರಡುತ್ತದೆ ಅನ್ನುವ ಆಧಾರದಲ್ಲಿ ಅದರ ಗಂಭೀರತೆಯೂ ಬದಲಾಗಬಹುದು. ಹಾಗಿದ್ದರೂ ಹೊಸ ಸೋಂಕಿನಿಂದ ಎಲ್ಲೂ ಸಾವು ಸಂಭವಿಸಿಲ್ಲ ಎಂದು ಹೇಳಿದೆ.

ಆದರೆ ಲಸಿಕೆ ಪಡೆದವರು ಹಾಗೂ ಒಮ್ಮೆ ಸೋಂಕು ತಗುಲಿದವರಿಗೆ ಒಮಿಕ್ರೋನ್ ಅಪಾಯಕಾರಿಯೇ ಅನ್ನುವ ಕುರಿತಂತೆ ವಿಶ್ವಸಂಸ್ಥೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಒಮ್ಮೆ ಕೊರೋನಾ ಸೋಂಕು ತಗುಲಿದ ಬಳಿಕ ಉತ್ಪಾದನೆಯಾಗಿರುವ ರೋಗ ನಿರೋಧ ಶಕ್ತಿಯನ್ನು ಈ ಒಮಿಕ್ರೋನ್ ಭೇದಿಸಬಲ್ಲುದೇ ಅನ್ನುವ ಕುರಿತಂತೆ ಮತ್ತಷ್ಟು ಅಧ್ಯಯಮ ಅಗತ್ಯವಿದೆ ಎಂದು WHO ಹೇಳಿದೆ.

ಇನ್ನು ಆಫ್ರಿಕಾದ ಬೋಟ್ಸ್ ವಾನಾ ದೇಶದಲ್ಲಿ ಪತ್ತೆಯಾಗಿರುವ ಈ ಹೊಸ ರೂಪಾಂತರಿ ವೈರಸ್ 13 ದೇಶಗಳಿಗೆ ಹರಡಿದೆ.

Tags: CoronaMAIN
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್