crossorigin="anonymous"> parappana agrahara jail : ಮಹಿಳೆಯರ ಗುಪ್ತಾಂಗದ ಮೂಲಕ ಜೈಲಿಗೆ ಡ್ರಗ್ಸ್ :  ಗುಪ್ತಾಂಗಕ್ಕೆ 50 ML ಕೊಬ್ಬರಿ ಎಣ್ಣೆ ಬಾಟಲಿ ತುರುಕಿದ್ದ ಕಿಲಾಡಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

parappana agrahara jail : ಮಹಿಳೆಯರ ಗುಪ್ತಾಂಗದ ಮೂಲಕ ಜೈಲಿಗೆ ಡ್ರಗ್ಸ್ :  ಗುಪ್ತಾಂಗಕ್ಕೆ 50 ML ಕೊಬ್ಬರಿ ಎಣ್ಣೆ ಬಾಟಲಿ ತುರುಕಿದ್ದ ಕಿಲಾಡಿ

Radhakrishna Anegundi by Radhakrishna Anegundi
15-07-22, 7 : 53 am
in ಟ್ರೆಂಡಿಂಗ್
bangalore central jail
Share on FacebookShare on TwitterWhatsAppTelegram

ಶಿವಮೊಗ್ಗ ಹರ್ಷನ ಕೊಲೆ ಪ್ರಕರಣದ ಆರೋಪಿ ಅಟ್ಟಹಾಸ ವೈರಲ್ ಆದ ಬೆನ್ನಲ್ಲೇ ಪರಪ್ಪನ ಆಗ್ರಹಾರದಲ್ಲಿ ( parappana agrahara jail ) ಇದೀಗ ಎಲ್ಲವೂ ಕಟ್ಟುನಿಟ್ಟಾಗಿದೆ. ಗೃಹ ಸಚಿವರ ಭೇಟಿಯ ಬಳಿಕ ಭಿಕ್ಷೆ ಬೇಡುತ್ತಿದ್ದ ಜೈಲು ಸಿಬ್ಬಂದಿಯೂ ಇದೀಗ ಬದಲಾಗಿದ್ದಾರೆ

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನೊಳಗೆ ಅನೇಕ ಮಾರ್ಗಗಳಲ್ಲಿ ಡ್ರಗ್ಸ್ ಪೂರೈಕೆಯಾಗುತ್ತಿತ್ತು. ಕಾಸಿನಾಸೆಗೆ ಬಿದ್ದ ಜೈಲು ಸಿಬ್ಬಂದಿ ಇದಕ್ಕೆ ಅವಕಾಶವನ್ನೂ ಕೊಟ್ಟಿದ್ದರು. ಆದರೆ ಇದೀಗ ಕೇಂದ್ರ ಕಾರಾಗೃಹದ ( parappana agrahara jail ) ಭ್ರಷ್ಟರನ್ನು ಬೇರೆ ಕಡೆಗೆ ವರ್ಗಾಯಿಸಲಾಗಿದೆ. ಹೀಗಾಗಿ ಇದೀಗ ಒಂದು ಹಂತಕ್ಕೆ ಎಲ್ಲವೂ ಕಟ್ಟುನಿಟ್ಟಾಗಿದೆ. ಎಷ್ಟು ದಿನಗಳ ಕಾಲ ಈ ಕಟ್ಟು ನಿಟ್ಟು ಅನ್ನುವುದೇ ಪ್ರಶ್ನೆ.

ಈ ನಡುವೆ ವಿಚಾರಣಾಧೀನ ಖೈದಿಗಳಿಗೆ ಗುಪ್ತಾಂಗದಲ್ಲಿ ಬಚ್ಚಿಟ್ಟು ಡ್ರಗ್ಸ್ ತಂದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಾಮರಾಜಪೇಟೆಯ ಸಂಗೀತಾ ಮತ್ತು ಶಿವಮೊಗ್ಗದ ಛಾಯಾ ಎಂದು ಗುರುತಿಸಲಾಗಿದೆ. ಬಂಧಿತರಿಂದ 20 ಲಕ್ಷ ಮೌಲ್ಯದ 270 ಗ್ರಾಂ ಹಶೀಶ್ ಆಯಿಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : kerala monkeypox : ಭಾರತಕ್ಕೆ ಕಾಲಿಟ್ಟ ಮಂಕಿಪಾಕ್ಸ್ : ಕೇರಳದಲ್ಲಿ ದೃಢಪಟ್ಟ ಸೋಂಕು : ಕರ್ನಾಟಕಕ್ಕೂ ಕಾದಿದೆ ಆತಂಕ

ಕಳ್ಳತನ ಪ್ರಕರಣವೊಂದರಲ್ಲಿ ಬಂಧಿತನಾಗಿರುವ ಚಾಮರಾಜಪೇಟೆಯ ಲೋಹಿತ್ ಕೇಂದ್ರ ಕಾರಾಗೃಹದಲ್ಲಿದ್ದು ಆತನ ಸಂದರ್ಶನಕ್ಕೆ ಸ್ನೇಹಿತೆ ಸಂಗೀತಾ ಬಂದಿದ್ದಾಳೆ. ಜೈಲು ಪ್ರವೇಶ ದ್ವಾರದಲ್ಲಿ ಆಕೆ ನಡೆಯುವ ಶೈಲಿ ನೋಡಿದ ಜೈಲು ಸಿಬ್ಬಂದಿಗೆ ಅನುಮಾನ ಬಂದಿದೆ. ತಕ್ಷಣ ಮಹಿಳಾ ಸಿಬ್ಬಂದಿ ಸಂಗೀತಾಳನ್ನು ಪರಿಶೀಲನೆ ನಡೆಸಿದಾಗ ಗುಪ್ತಾಂಗದಲ್ಲಿ 250 ಗ್ರಾಂ ಹಶೀಶ್ ಎಣ್ಣೆ ಪ್ಯಾಕೆಟ್ ಪತ್ತೆಯಾಗಿದೆ.

ಮನೆಗಳ್ಳತನ ಪ್ರಕರಣದಲ್ಲಿ ಜೈಲು ಸೇರಿರುವ ಕಾಳಪ್ಪ ಎಂಬಾತನನ್ನು ನೋಡಲು ಶಿವಮೊಗ್ಗದ ಭದ್ರಾವತಿ ತಾಲೂಕಿನ ಛಾಯಾ ಕೇಂದ್ರ ಕಾರಾಗೃಹಕ್ಕೆ ಬಂದಿದ್ದಳು. ಈಕೆ ನಡೆಯುವ ಶೈಲಿ ಕೂಡಾ ಜೈಲು ಸಿಬ್ಬಂದಿಗೆ ಅನುಮಾನ ಮೂಡಿಸಿದೆ. ಹೀಗಾಗಿ ತಕ್ಷಣ ಮಹಿಳಾ ಸಿಬ್ಬಂದಿ ಮೂಲಕ ಪರಿಶೀಲನೆ ನಡೆಸಿದಾಗ 50ml ಕೊಬ್ಬರಿ ಎಣ್ಣೆ ಬಾಟಲಿಯಲ್ಲಿ ಹಶೀಶ್ ಆಯಿಲ್ ತುಂಬಿದ್ದ ಈಕೆ ಬಾಟಲಿಯನ್ನು ಗುಪ್ತಾಂಗಕ್ಕೆ ತುರಿಸಿಕೊಂಡಿದ್ದಳು.

ಇದೀಗ ಇಬ್ಬರ ವಿರುದ್ಧ ಪರಪ್ಪನ ಆಗ್ರಹಾರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಬಂಧಿಸಿ ಗೆಳೆಯರಿರುವ ಜಾಗಕ್ಕೆ ಕಳುಹಿಸಿಕೊಡಲಾಗಿದೆ.

ವಂಚಕ ಲಲಿತ್ ಮೋದಿ ಜೊತೆ ಸುಶ್ಮಿತಾ ಸೇನ್ ಡೇಟಿಂಗ್

ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಪರಾರಿಯಾಗಿರುವ ಲಲಿತ್ ಮೋದಿ ಲಂಡನ್ ನಲ್ಲಿ ಮಜಾ ಉಡಾಯಿಸುತ್ತಿದ್ದಾರೆ. ಇದೀಗ ಮೋದಿ ತೆಕ್ಕೆಯಲ್ಲಿ ಸುಶ್ಮಿತಾ ಸೇನ್ ಇರುವ ಸುದ್ದಿ ಬಂದಿದೆ

ಸುಶ್ಮಿತಾ ಸೇನ್‌ ಇತ್ತೀಚೆಗೆ ರೊಹಮನ್‌ ಶ್ವಾಲ್‌ ಅನ್ನುವ ವ್ಯಕ್ತಿಯ ಜೊತೆ ಎರಡೂವರೆ ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು. ಇಬ್ಬರ ನಡುವೆ 15 ವರ್ಷಗಳ ಅಂತರವಿತ್ತು. ಸುಶ್ಮಿತಾ ಸೇನ್‌ಗೆ 46 ವರ್ಷವಾಗಿದ್ದರೆ, ರೊಹಮನ್‌ಗೆ 30 ವರ್ಷ ವಯಸ್ಸಾಗಿತ್ತು. ಎರಡೂವರೆ ವರ್ಷವೂ ಇವರು ಲಿವ್‌ ಇನ್‌ ಸಂಬಂಧದಲ್ಲಿದ್ದರು. ಆದಾದ ಬಳಿಕ ಈ ಸಂಬಂಧದಲ್ಲಿ ಬ್ರೇಕಪ್ ಆಗಿತ್ತು.

ಲಲಿತ್ ಮೋದಿ ತನ್ನ ತಾಯಿಯ ಸ್ನೇಹಿತೆಯನ್ನೇ ಮದುವೆಯಾಗುವ ಮೂಲಕ ಸುದ್ದಿಯಲ್ಲಿದ್ದರು. ತಾಯಿಯ ಆಪ್ತ ಸ್ನೇಹಿತೆ ಮೀನಲ್‌ರ ಪ್ರೀತಿಯಲ್ಲಿ ಬಿದ್ದ ಲಲಿತ್ ಮೋದಿ ತಾಯಿಯ ವಿರೋಧದ ನಡುವೆ ಮದುವೆಯಾಗಿದ್ದರು. ಮೀನಲ್ ಹಾಗೂ ಲಲಿತ್ ನಡುವೆ 9 ವರ್ಷಗಳ ಅಂತರವಿತ್ತು. ಕೆಲ ವರ್ಷಗಳ ಹಿಂದೆ ಮೀನಲ್ ತೀರಿಕೊಂಡಿದ್ದಾರೆ.

ಈ ನಡುವೆ ಇದೀಗ ಲಲಿತ್ ಮೋದಿ ಹಾಗೂ ಸುಶ್ಮಿತಾ ಸೇನ್ ಡೇಟಿಂಗ್ ಮಾಡುತ್ತಿರುವ ಸುದ್ದಿ ಬಂದಿದೆ. ಭಾರತದಲ್ಲಿ ವಂಚನೆ ಆರೋಪ ಎದುರಿಸುತ್ತಿರುವ ಲಲಿತ್ ಮೋದಿ ಲಂಡನ್ ಗೆ ಪರಾರಿಯಾಗಿದ್ದು, ಅಲ್ಲಿ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಈ ಸಂಭ್ರಮದಲ್ಲಿ ಸುಶ್ಮಿತಾ ಸೇನ್ ಪಾಲುದಾರರಾಗಿದ್ದಾರೆ.

ಈ ಸಂಬಂಧ ಲಲಿತ್ ಮೋದಿಯವರೇ ಟ್ವೀಟ್ ಮಾಡಿದ್ದು, ಸುಶ್ಮಿತಾ ಸೇನ್ ರನ್ನು ಬೆಟರ್ ಹಾಫ್ ಎಂದು ಕರೆದಿದ್ದಾರೆ. ಜೊತೆಗೆ ಸುಶ್ಮಿತಾ ಸೇನ್ ಜೊತೆಗೆ ಹೊಸ ಇನ್ನಿಂಗ್ಸ್ ಆರಂಭಿಸಿರುವುದಾಗಿಯೂ ಘೋಷಿಸಿದ್ದಾರೆ. ಹಾಗಂತ ಮದುವೆಯಾಗಿಲ್ಲ. ಲಲಿತ್ ಮೋದಿಯೇ ಹೇಳಿರುವಂತೆ ಬರೀ ಡೇಟಿಂಗ್ ಮಾಡುತ್ತಿದ್ದು, ಮುಂದೊಂದು ದಿನ ಮದುವೆಯಾದರೂ ಆಗಬಹುದು ಅಂದಿದ್ದಾರೆ.

ಐಪಿಎಲ್ ಗೆ ಸಂಬಂಧಿಸದ ತೆರಿಗೆ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ತನಿಖೆಯ ನಡುವೆ ಲಲತ್ ಮೋದಿ 2010ರಲ್ಲಿ ಲಂಡನ್ ಗೆ ಪರಾರಿಯಾಗಿದ್ದರು.

Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್