crossorigin="anonymous"> ಶ್ರೀಮಂತ ಸಂಪುಟದಲ್ಲಿ ಬಡ ಸಚಿವ : ಮೋದಿ ಸಂಪುಟದಲ್ಲೇ ಮೋಡಿ ಮಾಡ್ತಾರ ಮತ್ತೊಬ್ಬ ಮೋದಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶ್ರೀಮಂತ ಸಂಪುಟದಲ್ಲಿ ಬಡ ಸಚಿವ : ಮೋದಿ ಸಂಪುಟದಲ್ಲೇ ಮೋಡಿ ಮಾಡ್ತಾರ ಮತ್ತೊಬ್ಬ ಮೋದಿ

Radhakrishna Anegundi by Radhakrishna Anegundi
31-05-19, 8 : 17 pm
in ದೇಶ
Share on FacebookShare on TwitterWhatsAppTelegram

ಒಡಿಶಾದ ಬಲಾಸೋರ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಾರಂಗಿ ಆವರಿಗೆ ‘ಒಡಿಶಾ ಮೋದಿ’ ಎಂದೇ ಹೆಸರು! ಸರಳತೆಯನ್ನೇ ಬದುಕು ಎಂದುಕೊಂಡ ಇವರೆಗೆ ಇಡೀ ದೇಶವೂ ಕುಟುಂಬವೇ. ಸಂಸ್ಕೃತ ಪಂಡಿತರಾಗಿರುವ ಸಾರಂಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿನ್ನೆಲೆಯಿಂದ ಬಂದು, ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಬಿಜೆಡಿ ಅಭ್ಯರ್ಥಿ ರಬೀಂದ್ರ ಜೇನಾ ಅವರನ್ನು 12,956 ಮತಗಳಿಂದ ಸೋಲಿಸಿ ಸಂಸದರಾದ ಸಾರಂಗಿ ಬಡ ಸಂಸದರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ!

ಒಡಿಶಾದ ಬಾಲಸೋರ್‌ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ತನ್ನ ಸರಳ ಜೀವನ ಶೈಲಿಯಿಂದಲೇ ಮನೆಮಾತಾದ ಪ್ರತಾಪ್‌ ಚಂದ್ರ ಸಾರಂಗಿ ಸಹಾಯಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

modi mother

ಮೊದಲ ಬಾರಿಗೆ ಸಂಸತ್‌ಗೆ ಆಯ್ಕೆ ಆಗಿರುವ ಪ್ರತಾಪ್ ಚಂದ್ರ ಸಾರಂಗಿ ಅವರಿಗೆ ಎರಡು ರಾಜ್ಯ ಖಾತೆಗಳು ದೊರೆತಿವೆ. ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಖಾತೆ ಸಚಿವ ಹಾಗೂ ಪಶುಸಂಗೋಪನೆ ಮತ್ತು ಹೈನುಗಾರಿಗೆ ಮತ್ತು ಮೀನುಗಾರಿಕೆ ಖಾತೆ ರಾಜ್ಯ ಸಚಿವರಾಗಿ ಅವರು ಕಾರ್ಯ ನಿರ್ವಹಿಸಲಿದ್ದಾರೆ.

sarangi mother

ಒಡಿಶಾದಲ್ಲಿ ಇವರು ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವೆಗೆ ಹೆಸರಾದವರು. ಪ್ರಖರ ವಾಗ್ಮಿ, ಸಂಸ್ಕೃತ ಪಂಡಿತ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತ ಸಾರಂಗಿ ಸೈಕಲ್ನಲ್ಲೇ ಹಳ್ಳಿಗಳಿಗೆ ಸುತ್ತುವ ಸರಳ ಜೀವಿ. ಇವರ ಎದುರು ಬಾಲಸೋರ್‌ನಲ್ಲಿ ಬಿಜೆಡಿಯಿಂದ ಮಾಧ್ಯಮ ದೊರೆ, ಕೋಟ್ಯಧಿಪತಿ ಎಂದೇ ಕರೆಯಲ್ಪಟ್ಟ ರವೀಂದ್ರ ಕುಮಾರ್‌ ಜೇನಾ ವಿರುದ್ಧ 12 ಸಾವಿರ ಮತಗಳಿಂದ ಜೇನಾರನ್ನು ಸೋಲಿಸಿದ್ದಾರೆ. ಕಾಂಗ್ರೆಸ್‌ನಿಂದ ಜ್ಯೋತಿ ಪಟ್ನಾಯಕ್‌ ಕೂಡ ಕಣಕ್ಕೆ ಇಳಿದಿದ್ದರು.

sarangi

ಬಾಲಾಸೋರ್ ನಲ್ಲಿ ಸಾಮಾನ್ಯವಾಗಿ ಯಾವಾಗಲೂ ಬೀಜು ಜನತಾ ದಳ ಅಧಿಕಾರಕ್ಕೆ ಬರುತ್ತಿತ್ತು. ಅದರಲ್ಲಿ ರವೀಂದ್ರ ಕುಮಾರ್‌ ಜೇನಾ ಅವರು ಗೆಲ್ಲುತ್ತಿದ್ದರು. ಆದ್ರೆ ಈ ಬಾರಿ ಇವರ ವಿರೋಧವಾಗಿ ನಿಂತಿದ್ದವರು ಈ ಪ್ರತಾಪ್ ಚಂದ್ರ ಸಾರಂಗಿ ಅವರು. ಇಂತ ಒಬ್ಬ ಶ್ರೀಮಂತ ಅಭ್ಯರ್ಥಿಯನ್ನ, ಒಂದು ರೂಪಾಯಿಯೂ ಇಲ್ಲದೆ, ಸಾವಿರ ಸಾವಿರ ಮತಗಳ ಅಂತರದಿಂದ ಸೋಲಿಸಿ, ದಾಖಲೆ ಸೃಷ್ಟಿಸಿದ್ದಾರೆ. ಹೌದು. ಇವರನ್ನ ಕಣಕ್ಕೆ ಇಳಿಸಿದ್ದು, ಸ್ವತಃ ಮೋದಿಯವರೇ. ಇವರು ಮಾಡುವ ಜನಸೇವೆಯನ್ನ ನೋಡಿದ ಮೋದಿಯವರು, ಇವರನ್ನ ಕಣಕ್ಕಿಳಿಸಿ ಗೆಲುವಿನ ನಗೆ ಬೀರಿದ್ದಾರೆ.

pratap sarangi 1

ಗುಡಿಸಲಿನಲ್ಲಿ ವಾಸಿಸುವ ಸಾರಂಗಿ ಮದುವೆಯಾಗಿಲ್ಲ. ಕಳೆದ ವರ್ಷ ತಮ್ಮ ತಾಯಿಯನ್ನು ಕಳೆದುಕೊಂಡ ಅವರು ತಮ್ಮ ಇಡೀ ಬದುಕನ್ನೂ ಸಮಾಜ ಸೇವೆಗಾಗಿ ಸಮರ್ಪಿಸಿಕೊಂಡಿದ್ದಾರೆ. ಅವರು ಸಂಸದರಾಗಿ ಆಯ್ಕೆಯಾಗುತ್ತಿದ್ದಂತೆಯೇ ಅವರ ಸರಳ ಬದುಕನ್ನು ತೋರಿಸುವ ಅವರ ಹಲವ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

pratap sarangi

ಚುನಾವಣೆಗಾಗಿ ಹಣವನ್ನು ಸುರಿಯದೆ, ಕಾಲ್ನಡಿಗೆಯಲ್ಲೇ ಪ್ರಚಾರ ಮಾಡಿದ ಸಾರಂಗಿ, ಹಣ ಮತ್ತು ಅದ್ಧೂರಿ ಪ್ರಚಾರವೇ ಚುನಾವಣೆಯ ಗೆಲುವಿಗೆ ಮಾನದಂಡವಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ನಾನಾ ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡು, ಹಳ್ಳಿ ಹಳ್ಳಿಗಳಿಗೆ ತೆರಳಿ ಜನರ ಕಷ್ಟ ಅರಿತಿದ್ದಾರೆ. ಅವರ ನೈಜ ಕಾಳಜಿಗೆ ಮತದಾರ ಒಲಿದು, ಅವರನ್ನು ಸಂಸತ್ತಿಗೆ ಕಳಿಸಿದ್ದಾನೆ.

sarangi2

ಸಂಸ್ಕೃತ ಪಂಡಿತರಾಗಿರುವ ಸಾರಂಗಿ, ಸಂಸ್ಕೃತ ಭಾಷೆಯಲ್ಲಿ ಸುಲಲಿತವಾಗಿ ಮಾತನಾಡಬಲ್ಲ ಏಕೈಕ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪ್ರಧಾನಿ ನರೇಂದ್ರ ಮೊದಿ ಅವರೂ ಸಾರಂಗಿ ಅವರ ಮೇಲೆ ವಿಶೇಷ ಅಕ್ಕರೆ ಹೊಂದಿದ್ದು, ಒಡಿಶಾಕ್ಕೆ ಬಂದರೆ ಸಾರಂಗಿ ಅವರನ್ನು ಭೇಟಿ ಮಾಡದೆ ಇರುವುದಿಲ್ಲ. ನಾಮಪತ್ರದ ಸಮಯದಲ್ಲಿ ಅವರು ಚುನಾವಣಾ ಆಯೋಗಕ್ಕೆ ನೀಡಿದ ಅಫಿಡವಿಟ್ ಪ್ರಜಾರ ಅವರ ಒಟ್ಟು ಆಸ್ತಿ 13,46,236 ರೂ. ಒಟ್ಟು ಏಳು ಕ್ರಿಮಿನಲ್ ಕೇಸ್ ಗಳು ಅವರ ಮೇಲಿದೆ.

sarangi1

ಬಾಲಸೋರ್ ಕ್ಷೇತ್ರದಲ್ಲಿ 1998, 1999 ಮತ್ತು 2004 ಈ ಮೂರು ಅವಧಿಯನ್ನು ಬಿಟ್ಟರೆ ಬಿಜೆಪಿ ಮತ್ತೆಂದೂ ಗೆಲುವು ಸಾಧಿಸಿರಲಿಲ್ಲ. 2014 ರಲ್ಲಿ ರಬೀಂದ್ರ ಜೈನ್ ಅವರ ವಿರುದ್ಧವೇ ಸ್ಪರ್ಧಿಸಿ ಸೋತಿದ್ದ ಸಾರಂಗಿ ಈ ಬಾರಿ ಗೆಲುವು ಸಾಧಿಸಿದರು. ಇದಕ್ಕೂ ಮುನ್ನ ಅವರು 2004 ಮತ್ತು 2009 ರಲ್ಲಿ ನಿಲಗಿರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್