crossorigin="anonymous"> ಮೋದಿ ಭಾಷಣವನ್ನು ನೇರ ಪ್ರಸಾರ ಮಾಡದ ದೂರದರ್ಶನದ ಅಧಿಕಾರಿಗೆ ಅಮಾನತು ಶಿಕ್ಷೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೋದಿ ಭಾಷಣವನ್ನು ನೇರ ಪ್ರಸಾರ ಮಾಡದ ದೂರದರ್ಶನದ ಅಧಿಕಾರಿಗೆ ಅಮಾನತು ಶಿಕ್ಷೆ

Radhakrishna Anegundi by Radhakrishna Anegundi
02-10-19, 6 : 26 pm
in ದೇಶ
Share on FacebookShare on TwitterWhatsAppTelegram

ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣನ್ನು ನೇರ ಪ್ರಸಾರ ಮಾಡಿಲ್ಲ ಅನ್ನುವ ಕಾರಣಕ್ಕೆ ತಮಿಳುನಾಡಿನ ದೂರದರ್ಶನ ಕೇಂದ್ರದ ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಿ ಪ್ರಸಾರ ಮಾಡಿ ಆದೇಶ ಹೊರಡಿಸಿದೆ.

ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಪ್ಟಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ನೀಡಿದ್ದರು. ಅಂದು ಅವರು ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

https://www.youtube.com/watch?v=JMTQOGETH2Y

ಐಐಟಿ ಮದ್ರಾಸ್ ನಲ್ಲಿ ಅವರು ಮಾಡಿದ ಭಾಷಣವನ್ನು ನೇರ ಪ್ರಸಾರ ಮಾಡಿಲ್ಲ ಅನ್ನುವ ಕಾರಣಕ್ಕೆ ದೂರದರ್ಶನ ಕೇಂದ್ರದ ಸಹಾಯಕ ನಿರ್ದೇಶಕಿ ಆರ್ ವಸುಮತಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಆದರೆ ಅಮಾನತು ಆದೇಶದಲ್ಲಿ ಇದನ್ನು ಉಲ್ಲೇಖಿಸದಿದ್ದರೂ, ಇದೇ ಕಾರಣಕ್ಕೆ ಅವರಿಗೆ ಅಮಾನತು ಶಿಕ್ಷೆ ವಿಧಿಸಲಾಗಿದೆ ಅನ್ನುವುದು ಸ್ಪಷ್ಟವಾಗಿದೆ. ಅಮಾನತು ಆದೇಶ ಬರುವುದಕ್ಕೂ ಮುನ್ನ ವಸುಮತಿ ಅವರಿಗೆ ಪ್ರಸಾರ ಭಾರತಿಯ ಹಿರಿಯ ಅಧಿಕಾರಿಗಳು ಮೇಲ್ ಒಂದನ್ನು ಕಳುಹಿಸಿದ್ದು, ಮೋದಿಯವರು ಸಪ್ಟಂಬರ್ 30ರಂದು ತಮಿಳುನಾಡಿನಲ್ಲಿ ಪ್ರವಾಸ ಕೈಗೊಂಡಿದ್ದ ವೇಳೆ ಅವರ ಅಧಿಕೃತ ಕಾರ್ಯಕ್ರಮಗಳನ್ನು ನೇರ ಪ್ರಸಾರ ಮಾಡಲಾಗಿದೆಯೇ ಎಂದು ವಿವರಣೆ ಕೇಳಿದ್ದರು.

q? encoding=UTF8&MarketPlace=IN&ASIN=B011IMA5X0&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638

ಪ್ರಸಾರ ಭಾರತಿಯ ಮೂಲಗಳ ಪ್ರಕಾರ ಸ್ಪಷ್ಟ ಆದೇಶವಿದ್ದರೂ ಕೂಡಾ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮವನ್ನು ವಸುಮತಿಯವರು ನೇರ ಪ್ರಸಾರ ಮಾಡಿಲ್ಲ ಎನ್ನಲಾಗಿದೆ.

ಹೀಗಾಗಿ ಮೋದಿಯವರು ಪಾಲ್ಗೊಂಡಿದ್ದ ಕಾರ್ಯಕ್ರಮವೊಂದು ಪ್ರಸಾರವಾಗಿಲ್ಲ ಅನ್ನುವುದನ್ನು ಗಮನಿಸಿದ ಪ್ರಧಾನಮಂತ್ರಿ ಸಚಿವಾಲಯ ಮಾಹಿತಿ ಮತ್ತು  ಪ್ರಸಾರ ಸಚಿವಾಲಯದಿಂದ ವಿವರಣೆ ಬಯಸಿತ್ತು. ಇದು ಪ್ರಸಾರ ಭಾರತಿಗೂ ತಲುಪಿತ್ತು. ಬಳಿಕ ಈ ಬೆಳವಣಿಗೆ ನಡೆದಿದೆ.

ಆದರೆ ಅದೇ ದಿನ ಮೋದಿಯವರು ಚೆನೈ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಬಿಜೆಪಿ ಕಾರ್ಯಕರ್ತರನ್ನು ದ್ದೇಶಿಸಿ ಮಾತನಾಡಿದ್ದರು. ಅದನ್ನು ತಮಿಳುನಾಡು ದೂರದರ್ಶನ ಕೇಂದ್ರ ನೇರ ಪ್ರಸಾರ ಮಾಡಿತ್ತು.

ಇದಾದ ಬಳಿಕ ಚೆನ್ನೈಯ ಐಐಟಿ ಮದ್ರಾಸ್ ನಲ್ಲಿ ಮೋದಿಯವರು ಸಿಂಗಾಪುರ-ಭಾರತ ಹ್ಯಾಕಥಾನ್ 2019ರಲ್ಲಿ ಪಾಲ್ಗೊಂಡು ಸಾಧಕರನ್ನು ಸನ್ಮಾನಿಸಿದ್ದರು. ಈ ಕಾರ್ಯಕ್ರಮವನ್ನು ಕೂಡಾ ನೇರ ಪ್ರಸಾರ ಮಾಡಲಾಗಿತ್ತು.

ನಂತರ ಪ್ರಧಾನಿಯವರು ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಯ 56ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ್ದರು. ಇದನ್ನು ನೇರ ಪ್ರಸಾರ ಮಾಡಿರಲಿಲ್ಲ. ಬದಲಿಗೆ ಸುದ್ದಿಯಲ್ಲಿ ಇದರ ತುಣುಕೊಂದು ಪ್ರಸಾರವಾಗಿತ್ತು.

https://www.youtube.com/watch?v=sxSSe-fJ2_s&t=6s

ಮೂಲಗಳ ಪ್ರಕಾರ ಪ್ರಸಾರ ಭಾರತಿ ಕೇಳಿದ್ದ ಪ್ರಶ್ನೆಗಳಿಗೆ ಉತ್ತರಿಸಿರುವ ತಮಿಳುನಾಡು ದೂರದರ್ಶನ ಕೇಂದ್ರದ ಅಧಿಕಾರಿಗಳು, ಐಐಟಿ ಕಾರ್ಯಕ್ರಮ ರಾಷ್ಟ್ರೀಯ ಇವೆಂಟ್ ಆಗಿತ್ತು ಅದನ್ನು ಡಿಡಿ ನ್ಯಾಷನಲ್ ಪ್ರಸಾರ ಮಾಡಿತ್ತು. ಈ ಕಾರ್ಯಕ್ರಮ ಪ್ರಸಾರ ಮಾಡಲು ಅಗತ್ಯವಾಗಿದ್ದ ಅನುಮತಿಗಳು ತಮಿಳುನಾಡು ದೂರದರ್ಶನ ಕೇಂದ್ರ ಇರಲಿಲ್ಲ ಅಂದಿದ್ದಾರಂತೆ.

ಇನ್ನೊಂದು ಮೂಲದ ಪ್ರಕಾರ  ಕೆಲವೊಂದು ಕಾರಣಗಳಿಂದ ತಮಿಳುನಾಡು ದೂರದರ್ಶನದ ಸಿಬ್ಬಂದಿಗೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತಲುಪಲಾಗಿಲ್ಲ ಎನ್ನಲಾಗಿದೆ.

Doordarshan @DDNewsLive asst Director R Vasumathi is suspended for dereliction of her duty in blacking out @narendramodi @pmo live telecast in Chennai IIT at Hackathon. Best by CEO @PBNS_India.Bureaucracy taught a lesson. How can she @DDPodhigaiTV not telecast PM speech live? pic.twitter.com/l9zfZ11v8n

— R. RAJAGOPALAN (@RAJAGOPALAN1951) October 2, 2019

Why @DDPodhigaiTV Doordarshan Chennai did not telecast live speech of @PMOIndia @narendramodi at Brakathon today? @MIB_India @DDNewsLive owes answer. Is there a @arivalayam DMK or @cpimspeak agent in Chennai Doordarshan Kendra? Why to blackout Narendra Modi-when 50 TV went live?

— R. RAJAGOPALAN (@RAJAGOPALAN1951) September 30, 2019
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191002160652″); document.getElementById(“div_6020191002160652”).appendChild(scpt);
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್