crossorigin="anonymous"> ಕೇರಳದ ರೆಸ್ಟೊರೆಂಟ್ ಗಳ ತಟ್ಟೆಯಿಂದ ಚಿಕನ್ ಐಟಂ ಮಾಯ... ಕಾರಣ ಗೊತ್ತಾ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೇರಳದ ರೆಸ್ಟೊರೆಂಟ್ ಗಳ ತಟ್ಟೆಯಿಂದ ಚಿಕನ್ ಐಟಂ ಮಾಯ… ಕಾರಣ ಗೊತ್ತಾ..?

Radhakrishna Anegundi by Radhakrishna Anegundi
18-07-21, 10 : 56 am
in ದೇಶ
kerala chicken
Share on FacebookShare on TwitterWhatsAppTelegram

ಕೊಚ್ಚಿ :  ಇಡೀ ದೇಶದಲ್ಲಿ ಕೊರೋನಾ ಸೋಂಕು ಅಬ್ಬರಿಸುತ್ತಿದ್ದ ಸಂದರ್ಭದಲ್ಲಿ ವುಹಾನ ವೈರಸ್ ಅನ್ನು ಕಟ್ಟಿ ಹಾಕಿದ್ದ ಕೇರಳದಲ್ಲಿ ಇದೀಗ ಸೋಂಕು ಅಬ್ಬರಿಸುತ್ತಿದೆ. ಪರಿಸ್ಥಿತಿ ನೋಡಿದರೆ ಎರಡನೆ ಅಲೆಯ ಅಂತ್ಯವಾಗುವ ಮುನ್ನವೇ ಮೂರನೇ ಅಲೆ ಎದ್ದು ನಿಂತಿದೆ ಅನ್ನುವಂತಿದೆ ಪರಿಸ್ಥಿತಿ.  ಇದೇ ಕಾರಣದಿಂದ ಕೇರಳದ ಅನೇಕ ಕಡೆಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದೆ. ಹೀಗಾಗಿ ಹೊಟೇಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ.

ಈ ನಡುವೆ ಏರುತ್ತಿರುವ ಕೋಳಿಮಾಂಸದ ದರ ಹೋಟೆಲ್ ಮಾಲೀಕರನ್ನು ಕಂಗಾಲು ಮಾಡಿದೆ. ದರ ಏರಿಕೆಯ ಹೊಡೆತದಿಂದ ತತ್ತರಿಸಿರುವ ಹೊಟೇಲ್ ಮಾಲೀಕರು ಇದೀಗ ಚಿಕನ್ ಐಟಂಗಳನ್ನು ಮೆನುವಿನಿಂದ ಡಿಲೀಟ್ ಮಾಡಿದ್ದಾರೆ. Kerala Hotel and Restaurant Association ಹೇಳುವ ಪ್ರಕಾರ ಕಳೆದ ಎರಡು ವಾರಗಳಿಗೆ ಹೋಲಿಸಿದರೆ ಕೋಳಿಮಾಂಸದ ದರ ದುಪ್ಪಟಾಗಿದೆ.

ಕೇರಳದ ಹೊಟೇಲ್ ಗಳೇ ಕೋಳಿಮಾಂಸದ ಖರೀದಿಯಲ್ಲಿ ಮುಂಚೂಣಿಯಲ್ಲಿದೆ.ಶೇ80ರಷ್ಟು ಕೋಳಿ ಮಾಂಸವನ್ನು ಹೊಟೇಲ್ ಗಳಿಗೆ ಖರೀದಿಸುತ್ತವೆ. ಆದರೆ ಲಾಕ್ ಡೌನ್ ಕಾರಣದಿಂದ ಗ್ರಾಹಕರು ಕೂತು ತಿನ್ನುವಂತಿಲ್ಲ. ಕೇವಲ ಪಾರ್ಸೆಲ್ ಗಳಿಗೆ ಅವಕಾಶ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಗ್ರಾಹಕರು ಕೂಡಾ ಸಿಗುತ್ತಿಲ್ಲ. ಈ ವೇಳೆ ಏರುತ್ತಿರುವ ಕೋಳಿ ಮಾಂಸದ ದರ ಹೊಟೇಲ್ ಮಾಲೀಕರನ್ನು ಮತ್ತಷ್ಟು ನಷ್ಟಕ್ಕೆ ದೂಡುವಂತೆ ಮಾಡಿದೆ. ಏರಿದ ಕೋಳಿ ಮಾಂಸದ ದರಕ್ಕೆ ಅನುಗುಣವಾಗಿ ಫುಡ್ ಐಟಂ ದರ ಏರಿಸಿದರೆ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿ ಕಾಡುತ್ತಿದೆ. ಹೀಗಾಗಿ ಚಿಕನ್ ಐಟಂಗಳನ್ನೇ ಮೆನುವಿನಿನಿಂದ ತಾತ್ಕಾಲಿಕವಾಗಿ ತೆಗೆಯಲಾಗಿದೆ.

ಆದರೆ ಪೌಲ್ಟಿ ಫಾರಂ ಮಾಲೀಕರ ವಾದವೇ ಬೇರೆ, ದರ ಏರಿಕೆ ಅನ್ನುವುದು ತಾತ್ಕಾಲಿಕ, ದರ ಏರಿದೆ ಎಂದು ಹೋಟೇಲ್ ಮಾಲೀಕರು ನಮ್ಮತ್ತ ಬೊಟ್ಟು ಮಾಡುತ್ತಿದ್ದಾರೆ. ಕೋಳಿ ಮಾಂಸದ ದರ ನೆಲ ಕಚ್ಚಿದ ಸಂದರ್ಭದಲ್ಲಿ ಯಾವುದಾದರೂ ಹೊಟೇಲ್ ಮಾಲೀಕರು ಚಿಕನ್ ಐಟಂ ದರವನ್ನು ಕಡಿಮೆ ಮಾಡಿದ ಉದಾಹರಣೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಕೇರಳದಲ್ಲಿ ಕೊರೋನಾ ಸೋಂಕಿನ ಅಲೆ ಭೀತಿ ಶುರುವಾಗಿದೆ. ಹೀಗಾಗಿ ಕೋಳಿ ಸಾಕಾಣಿಕೆದಾರರು ಹೊಸ ಮರಿಗಳ ಸಾಕಾಣಿಕೆ ಪ್ರಾರಂಭಿಸಿಲ್ಲ. ಒಂದು ವೇಳೆ ಮೂರನೇ ಅಲೆ ಅಬ್ಬರಿಸಿದರೆ ಬಂಡವಾಳ ನಷ್ಟವಾಗುವ ಭಯ ಅವರಲ್ಲಿದೆ. ಹೀಗಾಗಿ ದರ ಏರಿಕೆಯಾಗಿದೆ ಹೊರತು ಇದರಲ್ಲಿ ಯಾಲ ಲಾಭಿಗಳಿಲ್ಲ ಅಂದಿದ್ದಾರೆ.

Tags: Kerala
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್