crossorigin="anonymous"> 1.5 ಕೋಟಿ ರೂಪಾಯಿ ಗೆದ್ದ ಪೊಲೀಸ್ ಅಧಿಕಾರಿ ಅಮಾನತು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

1.5 ಕೋಟಿ ರೂಪಾಯಿ ಗೆದ್ದ ಪೊಲೀಸ್ ಅಧಿಕಾರಿ ಅಮಾನತು

ಪ್ರಸ್ತುತ ಪ್ರಾಥಮಿಕ ತನಿಖೆ ವರದಿ ಆಧಾರದಲ್ಲಿ ಸೋಮನಾಥ್‌ ಜೆಂಡೆ ಅವರನ್ನು ಅಮಾನತುಗೊಳಿಸಲಾಗಿದೆ

Radhakrishna Anegundi by Radhakrishna Anegundi
18-10-23, 5 : 27 pm
in ಟಾಪ್ ನ್ಯೂಸ್, ದೇಶ
pune-pimpri-chinchwad-police-sub-inspector-somnath-zendeonline-game-controversy
Share on FacebookShare on TwitterWhatsAppTelegram

ಇದೀಗ ಬಹುಮಾನ ಗೆದ್ದ ಕರ್ಮಕ್ಕೆ ಪೊಲೀಸ್ ಅಮಾನತುಗೊಂಡಿದ್ದಾರೆ. ಬಹುಮಾನ ಗೆದ್ರೆ ಸನ್ಮಾನಿಸಬೇಕು, ಅದನ್ನು ಬಿಟ್ಟು ಮನೆಗೆ ಕಳುಹಿಸೋದ

ಈ ಕ್ರಿಕೆಟ್ ಶುರುವಾದ್ರೆ ಸಾಕು, ಬೆಟ್ಟಿಂಗ್ ದಂಧೆ ಎದ್ದು ನಿಂತುಕೊಳ್ಳುತ್ತದೆ. ಕೆಲವು ಕಡೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ತಾರೆ, ಮತ್ತೆ ಕೆಲವು ಕಡೆ ಪೊಲೀಸರ ಕಣ್ಣಿದ್ದೂ ಕುರುಡಾಗ್ತಾರೆ. ಹಿಂದೊಮ್ಮೆ ಇದೇ ಬೆಟ್ಟಿಂಗ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳ ಹೆಸರು ಕೇಳಿ ಬಂದಿತ್ತು ಕೂಡಾ.

ಈಗ ಈ ವಿಷಯ ಯಾಕಪ್ಪ ಅಂದ್ರೆ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಯೊಬ್ಬರು ಅವರು ಡ್ರೀಮ್‌ 11 ಆಡಿ 1.5 ಕೋಟಿ ರೂ. ಗೆದ್ದಿದ್ದಾರೆ. ವಿಷಯ ಅವರು ಗೆದ್ದಿರೋದಲ್ಲ, ಬದಲಾಗಿ ಇದೀಗ ಬಹುಮಾನ ಗೆದ್ದ ಕರ್ಮಕ್ಕೆ ಅವರು ಅಮಾನತುಗೊಂಡಿದ್ದಾರೆ. ಬಹುಮಾನ ಗೆದ್ರೆ ಸನ್ಮಾನಿಸಬೇಕು, ಅದನ್ನು ಬಿಟ್ಟು ಮನೆಗೆ ಕಳುಹಿಸೋದ, ಅಲ್ಲೇ ಆಗಿರೋದು ಎಡವಟ್ಟು.

Read More : ಇಪ್ಪತ್ತಾರು ವಾರದ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ನಕಾರ

ಈ ಆನ್ ಲೈನ್ ಆಟಗಳ ಕುರಿತಂತೆ ಈಗಾಗಲೇ ಸಾಕಷ್ಚು ಚರ್ಚೆಗಳು ನಡೆಯುತ್ತಿದೆ. ಆನ್ ಲೈನ್ ಲಾಟರಿಗೇನೂ ಕಡಿಮೆ ಇಲ್ಲದಂತೆ ಚಟ ಹತ್ತಿಸಿಕೊಂಡವರನ್ನು ಬೀದಿಗೆ ತಂದು ನಿಲ್ಲಿಸುತ್ತಿದೆ ಈ ಆನ್ ಲೈನ್ ಆಟಗಳು.
ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್‌ ಪೊಲೀಸ್‌ ಠಾಣೆಯ ಪಿಎಸ್‌ಐ ಸೋಮನಾಥ್‌ ಜೆಂಡೆ ಡ್ರೀಮ್‌ 11 ಆಡಿ 1.5 ಕೋಟಿ ರೂ. ಗೆದ್ದಿದ್ದಾರೆ. ಗೆದ್ದ ವಿಷಯವನ್ನು ಹೆಂಡ್ತಿ ಮಕ್ಕಳ ಜೊತೆಗೆ ಹಂಚಿಕೊಂಡು ಮೌನವಾಗಿದ್ರೆ ಸಮಸ್ಯೆಯೇನು ಆಗ್ತಾ ಇರಲಿಲ್ಲ. ಆದರೆ ಕೋಟಿ ಬಂದ ಖುಷಿಯಲ್ಲಿ ವಿಷಯವನ್ನು ಊರೆಲ್ಲಾ ಹಂಚಿದ್ದಾರೆ. ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದೆ.

pune-pimpri-chinchwad-police-sub-inspector-somnath-zendeonline-game-controversy ಪೊಲೀಸ್
Image Credit To Original Source

ಅಷ್ಟೇ ಪ್ರಜ್ಞಾವಂತ ನಾಗರಿಕರು ತಿರುಗಿ ಬಿದ್ದಿದ್ದಾರೆ. ಪೊಲೀಸ್ ಅಧಿಕಾರಿ ಹೀಗೆ ಅನ್ ಲೈನ್ ಗೇಮ್ ಆಡ್ತಾ ಕೂತ್ರೆ ಕೆಲಸ ಮಾಡೋದು ಯಾವಾಗ, ಸರ್ಕಾರಿ ಸಂಬಳ ತಿಂದು ದಾರಿ ತಪ್ಪಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಆಗ್ರಹಿಸಿದ್ದಾರೆ. ಅಷ್ಟೇ ಡ್ರೀಮ್‌ 11 ಆಡಿ 1.5 ಕೋಟಿ ರೂ. ಗೆದ್ದ ಸೋಮನಾಥ್‌ ಜೆಂಡೆ ಅವರನ್ನು ಇದೀಗ ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಪಿಂಪ್ರಿ ಚಿಂಚ್‌ವಾಡ್‌ ಪೊಲೀಸ್‌ ಆಯುಕ್ತ ವಿನಯ್‌ ಕುಮಾರ್‌ ಚೌಬೆ ಪ್ರತಿಕ್ರಿಯಿಸಿದ್ದು , ಜೆಂಡೆ ವಿರುದ್ಧ ತನಿಖೆಗೆ ಆದೇಶಿಸಲಾಗಿದ್ದು, ಡಿಸಿಪಿ ಶ್ರೇಣಿಯ ಅಧಿಕಾರಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಪ್ರಸ್ತುತ ಪ್ರಾಥಮಿಕ ತನಿಖೆ ವರದಿ ಆಧಾರದಲ್ಲಿ ಸೋಮನಾಥ್‌ ಜೆಂಡೆ ಅವರನ್ನು ಅಮಾನತುಗೊಳಿಸಲಾಗಿದೆ ಅಂದಿದ್ದಾರೆ.

ಅಂದ ಹಾಗೇ ಸೋಮನಾಥ್‌ ಜೆಂಡೆ ಅವರು ಹಿಂದೆ ನಡೆದ ಇಂಗ್ಲೆಂಡ್‌ ಹಾಗೂ ಬಾಂಗ್ಲಾದೇಶ ಪಂದ್ಯದ ವೇಳೆ ಫ್ಯಾಂಟಸಿ ಗೇಮ್‌ ಆಡಿ 1.5 ಕೋಟಿ ರೂ. ಗೆದ್ದಿದ್ದರು. ಹಾಗಂತ ಕೆಲಸ ಹೋದ್ರು ಚಿಂತೆ ಇಲ್ಲ ತೆರಿಗೆ ಕಳೆದು ದೊಡ್ಡ ಮೊತ್ತವನ್ನೇ ಜೆಂಡೆ ಪಡೆಯಲಿದ್ದಾರೆ. ಮನಸ್ಸು ಮಾಡಿದ್ರೆ ಪಿಎಸ್‌ಐ ಕೆಲಸವನ್ನು ಮೀರುವಂತ ಸಾಧನೆ ಮಾಡಬಹುದು.

Tags: CricketFEATUREDonlinePolice
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್