ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್, ಪಕ್ಷದ ನಿಷ್ಠಾವಂತ ನಾಯಕ ಎಂದು ಹೆಸರಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ.
ಮಾಜಿ ಪ್ರಧಾನಮಂತ್ರಿ ಡಾ. ಮನ್ ಮೋಹನ್ ಸಿಂಗ್ ಕೂಡಾ ಕಾರ್ಯಕ್ರಮದಲ್ಲಿ ಕಾಣಲಿಲ್ಲ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗಿತ್ತು. ಆದಾಗ್ಯೂ ಅವರು ಏಕೆ ಕಾರ್ಯಕ್ರಮದಿಂದ ದೂರ ಉಳಿದರು ಎಂಬುದಕ್ಕೆ ಕಾರಣ ತಿಳಿದುಬಂದಿಲ್ಲ.
ಕಾಂಗ್ರೆಸ್ ಪಕ್ಷದ ಇತರ ನಾಯಕರಾದ ಆನಂದ್ ಶರ್ಮಾ, ಅಹ್ಮದ್ ಪಟೇಲ್, ಭೂಪೇಂದ್ರ ಸಿಂಗ್ ಹೂಡಾ, ಜನಾರ್ದನ್ ದ್ವಿವೇದಿ, ಆರ್ ಪಿಎನ್ ಸಿಂಗ್, ಮತ್ತಿತರರು ಪಾಲ್ಗೊಂಡಿದ್ದರು.
ಹಾಗೇ ನೋಡಿದ್ರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪಕ್ಷವನ್ನು ಕಟ್ಟಿ ಬೆಳೆಸಿದ ನಾಯಕನಿಗೆ ದೇಶದ ಅತ್ಯುನ್ನತ ಗೌರವ ಸಿಗುತ್ತಿರುವ ಸಂದರ್ಭದಲ್ಲಿ ಹಾಜರಾಗಬೇಕಾಗಿತ್ತು. ಪ್ರಣಬ್ ಅವರು ಅಂದು ಕಾಂಗ್ರೆಸ್ ಅನ್ನು ಕಟ್ಟಿ ಬೆಳೆಸಲು ಶ್ರಮ ಪಡದಿರುತ್ತಿದ್ದರೆ ಇಂದು ಪಕ್ಷ ಈ ಮಟ್ಟದಲ್ಲಿ ಖಂಡಿತಾ ಇರುತ್ತಿರಲಿಲ್ಲ.
ಕಾಂಗ್ರೆಸ್ ಪಕ್ಷದ ಪರಮೋಚ್ಛ ನಾಯಕರ ಇಂತಹ ವರ್ತನೆಗಳೇ ಪಕ್ಷವನ್ನು ಹಳ್ಳ ಹಿಡಿಸುತ್ತಿದೆ ಅನ್ನುವುದರಲ್ಲಿ ಎರಡು ಮಾತಿಲ್ಲ.
Discussion about this post