crossorigin="anonymous"> ಲಗೇಜು ಕಳೆದುಕೊಂಡ ಪ್ರಯಾಣಿಕನಿಗೆ 17.5 ಲಕ್ಷ ರೂಪಾಯಿ ಪಾವತಿಸಿ : ರೈಲ್ವೆಗೆ ಕೋರ್ಟ್ ಸೂಚನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲಗೇಜು ಕಳೆದುಕೊಂಡ ಪ್ರಯಾಣಿಕನಿಗೆ 17.5 ಲಕ್ಷ ರೂಪಾಯಿ ಪಾವತಿಸಿ : ರೈಲ್ವೆಗೆ ಕೋರ್ಟ್ ಸೂಚನೆ

Radhakrishna Anegundi by Radhakrishna Anegundi
09-08-21, 6 : 26 am
in ದೇಶ
indian railways
Share on FacebookShare on TwitterWhatsAppTelegram

2017ರಲ್ಲಿ ರೈಲಿನಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಗೆ 17.5 ಲಕ್ಷ ರೂಪಾಯಿ ಹಣವನ್ನು ಪಾವತಿಸುವಂತೆ South Central Railway ಇಲಾಖೆಗೆ ಹೈದ್ರಬಾದ್ ಜಿಲ್ಲಾ ಗ್ರಾಹಕರ ನ್ಯಾಯಾಲಯವೊಂದು ಆದೇಶಿಸಿದೆ.

ಹೈದರಾಬಾದ್ ಮೂಲದ ಶೀತಲ್ ಕುಲಕರ್ಣಿ ತಮ್ಮ ಸಂಬಂಧಿಕರ ಮದುವೆ ಕಾರ್ಯದಲ್ಲಿ ಪಾಲ್ಗೊಳ್ಳುವ ಸಲುವಾಗಿ 2017ರ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆಗಸ್ಟ್ 11 ರಂದು ಕಾಚಿಗುಡ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಹತ್ತಿದ ಅವರು ಆಗಸ್ಟ್ 12  ರಂದು ಮನೆಗೆ ತಲುಪಿದ ಬಳಿಕ  ಬ್ಯಾಗ್ ತೆರೆದ್ರೆ ಸುಮಾರು 15 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 3 ಲಕ್ಷ ಮೌಲ್ಯದ ಬಂಗಾರ ಕಳುವಾಗಿತ್ತು.

ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಶೀತಲ್ ಕುಲಕರ್ಣಿ ದೂರು ಕೂಡಾ ದಾಖಲಿಸಿದರು. ಆದರೆ ಆ ಬಳಿಕ ರೈಲ್ವೆ ಪೊಲೀಸರ ವರ್ತನೆ ತೀವ್ರ ನಿರ್ಲಕ್ಷ್ಯದಿಂದ ಕೂಡಿತ್ತು. ದೊಡ್ಡ ಮೊತ್ತದ ಚಿನ್ನಾಭರಣ ಕಳುವಾಗಿದ್ದರೂ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಹೀಗಾಗಿ ಬೇಸತ್ತ ಶೀತಲ್ Consumer Protection Act,1986 ಪ್ರಕಾರ ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದರು. ಪರಿಹಾರಕ್ಕಾಗಿ ಮನವಿ ಮಾಡಿಕೊಂಡರು.

ಈ ವೇಳೆ ಶೀತಲ್ ಮನವಿಗೆ ಪ್ರತಿಯಾಗಿ ವಾದ ಮಂಡಿಸಿದ ರೈಲ್ವೆ ಇಲಾಖೆ, ಇದು ನಮ್ಮ ನಿರ್ಲಕ್ಷ್ಯದಿಂದ ಆಗಿರುವ ಕೃತ್ಯವಲ್ಲ. ಜೊತೆಗೆ ಮನವಿದಾರರು ರೈಲು ಬೆಂಗಳೂರಿಗೆ ತಲುಪಿದ 6 ಗಂಟೆಗಳ ಬಳಿಕ ದೂರು ದಾಖಲಿಸಿದ್ದಾರೆ. ಮಾತ್ರವಲ್ಲ ಈ ಕಳ್ಳತನ ನಡೆದಿರುವುದು ಅವರ ಬ್ಯಾಗ್ ಗಳು ಅವರ ಸುಪರ್ದಿಯಲ್ಲಿ ಇರುವ ಸಂದರ್ಭದಲ್ಲಿ. ಚಿನ್ನಾಭರಣವಿದ್ದ ಬ್ಯಾಗ್ ರೈಲ್ವೆ ಇಲಾಖೆಯ ಸುಪರ್ದಿಯಲ್ಲಿ ಇರಲಿಲ್ಲ. ಈ ಪ್ರಕರಣದಲ್ಲಿ  ಪ್ರಯಾಣಿಕರು ಕಾಚಿಗುಡದಿಂದ ಯಶವಂತಪುರಕ್ಕೆ ಸುರಕ್ಷಿತವಾಗಿ ಪ್ರಯಾಣಿಸುತ್ತಾರೆ ಎಂದು ಒಪ್ಪಂದವಾಗಿದೆ ಆದರೆ ಪ್ರಯಾಣಿಕರು ಸಾಗಿಸುವ ಸರಕುಗಳಿಗೆ ಸುರಕ್ಷತೆಯ ಒಪ್ಪಂದವಾಗಿಲ್ಲ ಎಂದು  ಹೇಳಿತು.

ಆದರೆ ಈ ವಾದವನ್ನು ಒಪ್ಪದ ನ್ಯಾಯಾಲಯ, ಪ್ರಯಾಣಿಕರು ಪ್ರಯಾಣಿಸುತ್ತಿದ್ದ ರೈಲ್ವೆ ಬೋಗಿಯಲ್ಲಿ ಸೂಕ್ತ ಭದ್ರತೆ ಇರಲಿಲ್ಲ ಅನ್ನುವುದನ್ನು ಮನಗಂಡಿದೆ.ಇದಕ್ಕೆ ಪೂರಕವಾಗಿ ನಿಗದಿತ ಬೋಗಿಗೆ ರೈಲ್ವೆ ಇಲಾಖೆ ಭದ್ರತೆಗಾಗಿ ನೇಮಿಸಲ್ಪಟ್ಟ ಸಿಬ್ಬಂದಿಯ ವಿವರಗಳನ್ನು ರೈಲ್ವೆ ಇಲಾಖೆ ಸಲ್ಲಿಸಿರಲಿಲ್ಲ.

ಇಡೀ ಪ್ರಕರಣದಲ್ಲಿ ರೈಲ್ವೆ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣಿಸಿದೆ ಎಂದು ಹೇಳಿರುವ ನ್ಯಾಯಾಲಯ ಪ್ರಯಾಣಿಕರಿಗೆ 17.5 ಲಕ್ಷ ಹಣವನ್ನು ಪರಿಹಾರ ರೂಪದಲ್ಲಿ ಪಾವತಿಸುವಂತೆ ಸೂಚಿಸಿದೆ. ಇದರಲ್ಲಿ 14,01,078 ಮೊತ್ತ ಕಳೆದುಕೊಂಡ ಬಂಗಾರ ಮತ್ತು ಬೆಳ್ಳಿಯ ವಸ್ತುಗಳಿಗಾಗಿ, 50 ಸಾವಿರ ಮಾನಸಿಕ ಹಿಂಸೆ ಸಲುವಾಗಿ , 5 ಸಾವಿರ ಕಾನೂನು ಹೋರಾಟದ ಮೊತ್ತ ಮತ್ತು 3 ಲಕ್ಷ ಕಳೆದುಕೊಂಡ ನಗದಿಗೆ ಎಂದು ನ್ಯಾಯಾಲಯ ಹೇಳಿದೆ.

Tags: RAILWAY
Share4TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್