ವಿಶೇಷ ಭದ್ರತಾ ಪಡೆ(ತಿದ್ದುಪಡಿ) ಮಸೂದೆ-2019 ಯನ್ನು ಇಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದ್ದು, ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿದೆ.

ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಮಸೂದೆ ಮಂಡಿಸಿದ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮಾಡಿದ ಎಲ್ಲಾ ಆರೋಪವನ್ನು ತಿರಸ್ಕರಿಸಿದರು. ಕಾಯ್ದೆಗೆ ತಿದ್ದುಪಡಿ ತರುವುದಕ್ಕೂ ಮುಂಚೆಯೇ ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿದೆ. ಗಾಂಧಿ ಕುಟುಂಬವನ್ನು ಗುರಿಯಾಗಿಸಿಕೊಂಡು ಈ ತಿದ್ದುಪಡಿ ಮಾಡಿಲ್ಲ ಅಂದಿದ್ದಾರೆ.
ಗಾಂಧಿ ಕುಟುಂಬಕ್ಕೆ ಎಸ್ಪಿಜಿ ಭದ್ರತೆ ಬೇಕು ಎಂದು ಕಾಂಗ್ರೆಸ್ ಒತ್ತಾಯಿಸುದ್ಯಾಕೆ ಅನ್ನುವುದೇ ಅರ್ಥವಾಗುತ್ತಿಲ್ಲ ಅಂದ ಶಾ, ಪ್ರತಿಷ್ಠೆಯ ಆಧಾರದ ಮೇಲೆ ಭದ್ರತಾ ವ್ಯವಸ್ಥೆಯನ್ನು ಮಾಡಿಲ್ಲ. ಕೇವಲ ಗಾಂಧಿ ಕುಟುಂಬಕ್ಕೆ ಮಾತ್ರ ಮಾತ್ರ ಎಸ್ಪಿಜಿ ಭದ್ರತೆ ಯಾಕೆ ಬೇಕು. ಈ ಭದ್ರತೆಯನ್ನು ರಾಷ್ಟ್ರದ ಮುಖ್ಯಸ್ಥರಿಗೆ ಮಾತ್ರ ನೀಡಲಾಗುತ್ತಿದೆ. ಇದರ ಹೊರತು ಮತ್ಯಾರಿಗೂ ಈ ಭದ್ರತೆಯನ್ನು ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಅಮಿತ್ ಶಾ ಉತ್ತರದಿಂದ ತೃಪರಾಗದ ಪ್ರತಿಪಕ್ಷಗಳು ಸದನದಿಂದ ಹೊರಗಡೆ ನಡೆಯಿತು. ಬಳಿಕ ಮಸೂದೆ ಅಂಗೀಕಾರಗೊಂಡು ರಾಷ್ಟ್ರಪತಿ ಭವನಕ್ಕೆ ರವಾನಿಸ್ಪಟ್ಟಿತು.
ಈಗಾಗಲೇ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.
Discussion about this post