ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಮಲೀಲೆಯ ಸಿಡಿ ಲೇಡಿ ಇನ್ನು ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಸೆಕ್ಷನ್ 164ರ ಅಡಿಯಲ್ಲಿ ಹೇಳಿಕೆ ದಾಖಲಿಸಲು ಸಿಡಿ ಲೇಡಿ ಪರ ವಕೀಲ ಜಗದೀಶ್ ಕೋರಿದ್ದರು. ಈ ಕೋರಿಕೆಯನ್ನು ಮನ್ನಿಸಿರುವ ನ್ಯಾಯಮೂರ್ತಿಗಳು ಹೇಳಿಕೆ ದಾಖಲಿಸಲು ಒಪ್ಪಿದ್ದಾರೆ.
ಇದೇ ವೇಳೆ ಎಸ್ಐಟಿ ಸೆಕ್ಷನ್ 164ರಡಿಯಲ್ಲಿ ಹೇಳಿಕೆ ದಾಖಲಿಸಲು ವಿರೋಧ ವ್ಯಕ್ತಪಡಿಸಿತ್ತು. ಮೊದಲು ಅವರು ತನಿಖಾಧಿಕಾರಿ ಮುಂದೆ ಹಾಜರಾಗಲಿ, ಅವರ ಮೆಡಿಕಲ್ ಟೆಸ್ಟ್ ನಡೆಯಬೇಕಾಗಿದೆ ಎಂದು ವಾದ ಮಂಡಿಸಿದ್ದರು. ಆದರೆ ಇದಕ್ಕೆ ನ್ಯಾಯಾಲಯ ಸಮ್ಮತಿಸಲಿಲ್ಲ.
ಸೆಕ್ಷನ್ 164ರ ಅಡಿಯಲ್ಲಿ ಹೇಳಿಕೆ ದಾಖಲಿಸಲು ಒಪ್ಪಿಗೆ ಸಿಕ್ಕ ಹಿನ್ನಲೆಯಲ್ಲಿ ನ್ಯಾಯಾಲಯದಲ್ಲಿ ವಿಡಿಯೋ ರೆಕಾರ್ಡ್ ಸೇರಿದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಕ್ಲೋಸ್ ಡೋರ್ ನಲ್ಲಿ ನಡೆಯಲಿರುವ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಯುವತಿ ಅಜ್ಞಾತ ಸ್ಥಳದಿಂದ ಹೊರಟಿದ್ದಾಳೆ ಎನ್ನಲಾಗಿದೆ. 3.10 ನಿಮಿಷಕ್ಕೆ ಸಿಡಿ ಲೇಡಿ ನ್ಯಾಯಾಧೀಶರ ಎದುರು ಹಾಜರಾಗಲಿದ್ದಾರೆ.
ಸಂತ್ರಸ್ಥೆ ಪರ ವಕೀಲರು ಸುರಕ್ಷತೆಯ ಪ್ರಶ್ನೆ ಎತ್ತಿದ ಹಿನ್ನಲೆಯಲ್ಲಿ ಸಂತ್ರಸ್ಥೆಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಡಿಸಿಪಿ ಇಶಾಪಂತ್ ನೇತೃತ್ವದಲ್ಲಿ ಭದ್ರತೆ ಕೊಡಲಾಗಿದೆ ಅನ್ನುವ ಮಾಹಿತಿ ಸಿಕ್ಕಿದೆ.
ಈ ನಡುವೆ ಭದ್ರತೆ ಹಾಗೂ ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡಿರುವ ಸಂತ್ರಸ್ಥೆ ಪರ ವಕೀಲರಾದ ಜಗದೀಶ್ ತೃಪ್ತಿ ವ್ಯಕ್ತಪಡಿಸಿದ್ದಾರೆ.
Discussion about this post