ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಇಂದು SIT ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ನರೇಶ್ ಗೌಡ ಹಾಗೂ ಶ್ರವಣ್ಗೆ ಬೆಂಗಳೂರಿನ 91ನೇ ಸಿಸಿಹೆಚ್ ಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ವಕೀಲರ ಜೊತೆ ಆಡುಗೋಡಿ ಟೆಕ್ನಿಕಲ್ ಸೆಲ್ ಗೆ ಆಗಮಿಸಿರುವ ಆರೋಪಿಗಳು ತನಿಖಾಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಬ್ಲ್ಯಾಕ್ಮೇಲ್ ಪ್ರಕರಣದಲ್ಲಿ ಆರೋಪಿಗಳು ಇಂದು ತನಿಖೆಗೆ ಹಾಜರಾಗಿದ್ದಾರೆ. ಈ ನಡುವೆ ಸಿಡಿ ಕಿಂಗ್ಪಿನ್ಗಳಾದ ನರೇಶ್ ಮತ್ತು ಶ್ರವಣ್ ಅವರನ್ನು ಅವಶ್ಯವಿದ್ದರೆ ಬಂಧಿಸಬಹುದು ಎಂದು ನ್ಯಾಯಾಲಯ ಹೇಳಿರುವುದು ಕುತೂಹಲ ಕೆರಳಿಸಿದೆ,
ಆರೋಪಿಗಳನ್ನು ಬಂಧಿಸಲು ಎಸ್ಐಟಿ ತನಿಖಾಧಿಕಾರಿಗಳುಸ್ವತಂತ್ರರಾಗಿರುವ ಕಾರಣ ಸಂಜೆ ಏನಾಗಲಿದೆ ಅನ್ನುವುದನ್ನು ನಿರೀಕ್ಷಿಸಲಾಗುತ್ತಿದೆ.

ತನಿಖಾಧಿಕಾರಿಗಳು ಇಬ್ಬರಿಗೂ ಸುಮಾರು 50 ಪ್ರಶ್ನೆಗಳನ್ನು ಕೇಳಿದ್ದು, ಬಹುತೇಕ ಪ್ರಶ್ನೆಗಳು ಇಬ್ಬರ ಆಸ್ತಿಗೆ ಸಂಬಂಧಿಸಿದ್ದಾಗಿದೆ. ಪತ್ರಕರ್ತರಾಗಿ ಬರುತ್ತಿದ್ದ ಸಂಬಳಕ್ಕೂ ಅವರು ಮಾಡಿರುವ ಆಸ್ತಿಗೂ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ಬ್ಲ್ಯಾಕ್ ಮೇಲ್ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಹಣದ ಲಿಂಕ್ ಮೂಲಕ ತನಿಖೆ ವಿಸ್ತರಿಸಲು ನಿರ್ಧರಿಸಿದೆ.
Discussion about this post