crossorigin="anonymous"> ಶಬರಿಮಲೆಯಲ್ಲಿ ಅರವಣ ಪ್ರಸಾದ ತಯಾರಿ ಮತ್ತೆ ಸ್ಥಗಿತ : ಅಯ್ಯಪ್ಪನ ಸನ್ನಿಧಿಯಲ್ಲಿ ಮುಗಿಯದ ಗೊಂದಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಬರಿಮಲೆಯಲ್ಲಿ ಅರವಣ ಪ್ರಸಾದ ತಯಾರಿ ಮತ್ತೆ ಸ್ಥಗಿತ : ಅಯ್ಯಪ್ಪನ ಸನ್ನಿಧಿಯಲ್ಲಿ ಮುಗಿಯದ ಗೊಂದಲ

Devaswom Board officials have assured that additional containers are expected to arrive today

Radhakrishna Anegundi by Radhakrishna Anegundi
04-01-24, 3 : 52 pm
in ಟಾಪ್ ನ್ಯೂಸ್, ದೇಶ
aravana prasadam
Share on FacebookShare on TwitterWhatsAppTelegram

ಶಬರಿಮಲೆ ಈ ಬಾರಿ ಸಿಕ್ಕಾಪಟ್ಟೆ ಸದ್ದು ಮಾಡಿದೆ. ಭಕ್ತರಿಗೆ ತೊಂದರೆ ಕೊಟ್ಟವರಿಗೇನು ಶಿಕ್ಷೆ

ಶಬರಿಮಲೆ :  ಮಕರ ಜ್ಯೋತಿ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶಬರಿಮಲೆ ಅಯ್ಯಪ್ಪನ ( sabarimala ) ಸನ್ನಿಧಿಯಲ್ಲಿ ಮತ್ತೆ ಗೊಂದಲ ಪ್ರಾರಂಭವಾಗಿದೆ. ಸಾಕಷ್ಟು ದಿನಗಳಿಂದ ವಿವಾದಕ್ಕೆ ಗುರಿಯಾಗಿದ್ದ ಅರವಣ ಪ್ರಸಾದವೇ ( aravana prasadam ) ಈ ಬಾರಿಯೂ ಗೊಂದಲಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಬೆಲ್ಲದ ಕೊರತೆ ಕಾಡಿತ್ತು. ಅದಕ್ಕೂ ಮುಂಚೆ ಏಲಕ್ಕಿಯಲ್ಲಿ ಕೀಟನಾಶದ ವಿಷಯ ಪ್ರಸ್ತಾಪವಾಗಿತ್ತು.

ಇದೀಗ ಅರವಣ ಪ್ರಸಾದ ತುಂಬಿಸಲು ಕಂಟೈನರ್ ಅಂದ್ರೆ ಪ್ರಸಾದದ ಡಬ್ಬಿ ಇಲ್ಲ ಅನ್ನುವ ಕಾರಣದಿಂದ ಅರವಣ ಪ್ರಸಾದ ತಯಾರಿಕೆಯನ್ನೇ ಸ್ಥಗಿತಗೊಳಿಸಲಾಗಿದೆ.

ಪ್ರಸ್ತುತ 2.5 ಲಕ್ಷ ಟನ್ ಅರವಣ ಪ್ರಸಾದ ದಾಸ್ತಾನಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಹೇಳಿದೆ. ಆದರೆ ಪ್ರತೀ ನಿತ್ಯ 3 ಲಕ್ಷಕ್ಕೂ ಅಧಿಕ ಟಿನ್ ಅರವಣ ಪ್ರಸಾದ ಮಾರಾಟವಾಗುತ್ತಿದೆ. ಹೀಗಾಗಿ ದಾಸ್ತಾನಿರುವ ಅರವಣ ಪ್ರಸಾದದಿಂದ ಭಕ್ತರ ಬೇಡಿಕೆ ಪೂರೈಸಲು ಸಾಧ್ಯವಿಲ್ಲ.

ಇದನ್ನು ಓದಿ : ಶಬರಿಮಲೆಯಲ್ಲಿ ಅಪ್ಪಂ ಅರವಣ ಪ್ರಸಾದ ಉತ್ಪಾದನೆ ಸ್ಥಗಿತ : ಅಯ್ಯಪ್ಪ ಭಕ್ತರಿಗೆ ನಿರಾಶೆ

ಈ ಹಿಂದೆ ಬೆಲ್ಲ ಪೂರೈಕೆಯಲ್ಲಿ ವ್ಯತ್ಯಾಸವಾದ ಕಾರಣ ಅರವಣ ಪ್ರಸಾದ ತಯಾರಿಕೆ ಸ್ಥಗಿತಗೊಂಡಿತ್ತು. ಜೊತೆಗೆ ಅರವಣ ಪ್ರಸಾದ ವಿತರಣೆ ಮೇಲೆ ನಿರ್ಬಂಧ ಹೇರಲಾಗಿತ್ತು. ಇದೀಗ ಕಂಟೈನರ್ ಕೊರತೆಯ ಕಾರಣ ಪ್ರತೀ ಭಕ್ತನಿಗೆ 10 ಅರವಣ ಟಿನ್ ಬದಲು 5 ಟಿನ್ ಮಾತ್ರ ನೀಡಲು ನಿರ್ಧರಿಸಲಾಗಿದೆ. ಇದರಿಂದ ಹೊರ ರಾಜ್ಯದ ಯಾತ್ರಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ಮಿತಿಯ ಕಾರಣದಿಂದ ಗುಂಪಿನಲ್ಲಿ ಬಂದ ಪ್ರತಿಯೊಬ್ಬರೂ ಅರವಣ ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಇದರಿಂದ ಕೌಂಟರ್ ನಲ್ಲಿ ದಟ್ಟಣೆ ಹೆಚ್ಚಾಗುತ್ತಿದೆ.

ಈ ಬಾರಿ ಅರವಣ ಪ್ರಸಾದ ತುಂಬಿಸುವ ಕಂಟೈನರ್ ಗಳನ್ನು ಪೂರೈಸಲು ಇಬ್ಬರಿಗೆ ಗುತ್ತಿಗೆ ನೀಡಲಾಗಿತ್ತು.  2 ಕೋಟಿ ಕಂಟೈನರ್ ಗಳನ್ನು ಸರಬರಾಜು ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಗುತ್ತಿಗೆದಾರರು ನಿಗದಿತ ಸಮಯಕ್ಕೆ ಕಂಟೈನರ್ ತಲುಪಿಸಲದ ಕಾರಣ ಸಮಸ್ಯೆಯಾಗಿದೆ.

sabarimale1

ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ದೇವಸ್ವಂ ಬೋರ್ಡ್ ಇದೀಗ ಕಂಟೈನರ್ ಪೂರೈಕೆಗೆ ಹೊಸದಾಗಿ ಟೆಂಡರ್ ಕರೆದಿದ್ದು, ಮೂರನೇ ಗುತ್ತಿಗೆದಾರರನ್ನು ನೇಮಿಸಲಾಗಿದೆ. ಅವರು ಪ್ರತೀ ದಿನ ಒಂದು ಲಕ್ಷ ಕಂಟೈನರ್ ಸರಬರಾಜು ಮಾಡಲು ಸಮ್ಮತಿಸಿದ್ದಾರೆ. ಈ ಹಿಂದೆ ಗುತ್ತಿಗೆ ಪಡೆದವರ ಪೈಕಿ ಒಬ್ಬರು ದಿನಕ್ಕೆ 50 ಸಾವಿರ ಕಂಟೈನರ್ ಪೂರೈಸುವುದಾಗಿ ಹೇಳಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಸಮಸ್ಯೆ ಬಗೆ ಹರಿಯುವ ವಿಶ್ವಾಸವನ್ನು ದೇವಸ್ವಂ ಮಂಡಳಿ ಹೊಂದಿದ್ದಾರೆ.

ಮಂಡಲ ಪೂಜೆಯ ಹೊತ್ತಿನಲ್ಲಿ ಶಬರಿಮಲೆಯ ಅವ್ಯವಸ್ಥೆಯ ಆಗರವಾಗಿದೆ ಅನ್ನುವ ಆರೋಪ ಕೇಳಿ ಬಂದಿತ್ತು. ಇದೀಗ ಮಕರ ಜ್ಯೋತಿಯ ಹೊತ್ತಿಗೆ ಪ್ರವಾಹೋಪಾದಿಯಲ್ಲಿ ಅಯ್ಯಪ್ಪನ ಭಕ್ತರು ಆಗಮಿಸುತ್ತಾರೆ. ಈ ಬಾರಿ ಪರಿಸ್ಥಿತಿ ಹೇಗಿರಲಿದೆಯೋ.  

sabarimala
Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್