crossorigin="anonymous"> ಶಿಕ್ಷಣ ಮಂದಿರಗಳಲ್ಲಿ ಹಿಜಬ್ ವಿವಾದ : ಷಡ್ಯಂತ್ರದ ಹಿಂದೆ ಯಾರಿದ್ದಾರೆ... ಉನ್ನತ ಮಟ್ಟದ ತನಿಖೆಗೆ ಒಲವು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಿಕ್ಷಣ ಮಂದಿರಗಳಲ್ಲಿ ಹಿಜಬ್ ವಿವಾದ : ಷಡ್ಯಂತ್ರದ ಹಿಂದೆ ಯಾರಿದ್ದಾರೆ… ಉನ್ನತ ಮಟ್ಟದ ತನಿಖೆಗೆ ಒಲವು

Radhakrishna Anegundi by Radhakrishna Anegundi
07-02-22, 6 : 50 pm
in ರಾಜ್ಯ
saffron-shawl-protests-separate-classrooms-and-probe-into-chats-karnataka-hijab-row-blows-up
Share on FacebookShare on TwitterWhatsAppTelegram

ಬೆಂಗಳೂರು : ಕರಾವಳಿಯಲ್ಲಿ ಪ್ರಾರಂಭವಾದ ಹಿಜಬ್ ವಿವಾದ ಇದೀಗ ರಾಜ್ಯದ ಹಲವು ಶಾಲೆಗಳಲ್ಲಿ ಪ್ರಾರಂಭಗೊಂಡಿದೆ. ಶೈಕ್ಷಣಿಕ ವರ್ಷ ಮುಕ್ತಾಯದ ಹಂತಕ್ಕೆ ಬಂದು ನಿಂತಿರುವ ಸಂದರ್ಭದಲ್ಲಿ ವಿವಾದ ಎದ್ದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಮಾತ್ರವಲ್ಲದೆ ವಿವಾದ ಪ್ರಾರಂಭದ ಮೊದಲ ಹಂತದಲ್ಲಿ ಕೆಲವೇ ಕೆಲವು ವಿದ್ಯಾರ್ಥಿನಿಯರು ಈ ಬಗ್ಗೆ ದನಿ ಎತ್ತಿದ್ದರು. ಆದಾದ ಬಳಿಕ ಅದು ವಿಸ್ತಾರವಾಗುತ್ತಾ ಸಾಗಿದೆ.

ಕಳೆದ ಕೆಲ ವರ್ಷಗಳಲ್ಲಿ ಅಲ್ಲೊಂದು ಇಲ್ಲೊಂದು ಅನ್ನುವಂತೆ ವಿವಾದಗಳು ಪ್ರಾರಂಭವಾಗಿತ್ತು, ಆದರೆ ಅದು ಕಾಡ್ಗಿಚ್ಚಿನಂತೆ ಹಬ್ಬಿರಲಿಲ್ಲ. ಈ ಬಾರಿ ಶೈಕ್ಷಣಿಕ ಭವಿಷ್ಯವನ್ನು ಬದಿಗೊತ್ತಿ ಹಿಜಬ್ ಪರವಾದ ಹೋರಾಟ ಹಾಗೂ ಅದರ ವಿರುದ್ಧ ಕೇಸರಿ ಶಾಲಿನ ಪ್ರತಿಭಟನೆ ಪ್ರಜ್ಞಾವಂತರದಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಈ ವಿವಾದ ಎಬ್ಬಿಸಿರುವುದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರವಿದೆ ಅನ್ನುವ ಅನುಮಾನಗಳು ವ್ಯಕ್ತವಾಗಿದೆ. ಜೊತೆಗೆ ಕಾಂಗ್ರೆಸ್ ಕೂಡಾ ಈ ವಿಚಾರದಲ್ಲಿ ಅಂತರ ಕಾಯ್ದುಕೊಂಡಿದ್ದು, ಕಾಂಗ್ರೆಸ್ ನಲ್ಲಿರುವ ಕೆಲ ಮುಸ್ಲಿಂ ಮಹಿಳಾ ಮುಖಂಡರು, ಹಿಜಬ್ ನಮ್ಮ ಧರ್ಮದ ಪ್ರತೀಕ, ನನ್ನ ಹಿಜಬ್ ನನ್ನ ಹಕ್ಕು ಅನ್ನುವುದರಲ್ಲಿ ಸಂಶಯವಿಲ್ಲ. ಆದರೆ ತರಗತಿಗಳಲ್ಲಿ ಹಿಜಬ್ ಅಗತ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ. ಅಲ್ಲಿಗೆ ಈ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರವಿಲ್ಲ, ಹೋರಾಟದ ಲಾಭ ಪಡೆಯುವ ಉದ್ದೇಶವೂ ಕಾಂಗ್ರೆಸ್ ಗಿಲ್ಲ ಅಂದಾಯ್ತು.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಿಜಬ್ ಹೋರಾಟ ಕುರಿತಂತೆ ಕಾಳಜಿ ತೋರುತ್ತಿರುವವರು ಯಾರು ಅನ್ನುವುದನ್ನು ನೋಡಿದರೆ ಬಹುತೇಕರು ಎಡಪಂಥೀಯ ಚಿಂತನೆಗಳನ್ನು ಹೊಂದಿದವರು. ಈ ಹಿಂದೆಯೂ ಇವರೆಲ್ಲಾ ಬಿಜೆಪಿ ವಿರೋಧಿ ಹೋರಾಟಗಳಲ್ಲಿ ಕಾಣಿಸಿಕೊಂಡಿದ್ದರು. ಅನ್ನುವ ಗಮನಾರ್ಹ.

ಈ ಬಗ್ಗೆ ಮಾಹಿತಿ ನೀಡಿರುವ ನಿವೃತ ಪೊಲೀಸ್ ಅಧಿಕಾರಿಯೊಬ್ಬರು, ಇದೊಂದು ಪಕ್ಕಾ ರಾಜಕೀಯ ಹೋರಾಟ. ಮತ ವಿಭಜನೆಗಾಗಿ ಮಾಡಿರುವ ಯೋಜನೆಯೇ ಹೊರತು ಬೇರೇನು ಅಲ್ಲ.  ಸಾಕಷ್ಟು ಪ್ಲಾನ್ ಮಾಡಿ ಈ  ಹೋರಾಟಕ್ಕೆ ಚಾಲನೆ ನೀಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ದೊಡ್ಡ ಮನಸ್ಸು ತನಿಖೆಯೊಂದನ್ನು ಮಾಡಲಿ, ಹೋರಾಟ ಹೇಗೆ ಪ್ರಾರಂಭವಾಯ್ತು. ಹೋರಾಟ ಪ್ರಾರಂಭಿಸಿದ ಸಂದರ್ಭದಲ್ಲಿ ಯಾರ ಫೋನ್ ಗಳಿಗೆ ಎಲ್ಲಿಂದ ಕರೆ ಬಂತು, ಯಾರೆಲ್ಲಿ ಸಭೆ ನಡೆಸಿದರು ಅನ್ನುವುದನ್ನು ಕೆದಕಲಿ. ಅಸಲಿ ಸತ್ಯ ಹೊರ ಬರುತ್ತದೆ ಅಂದಿದ್ದಾರೆ.

ಇನ್ನು ವಿವಾದ ಕುರಿತಂತೆ ಪತ್ರಕರ್ತರೊಬ್ಬರು ಪ್ರತಿಕ್ರಿಯಿಸಿದ್ದು, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಅನ್ನುವುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ಹೋರಾಟ ಹೀಗೆ ಮುಂದುವರಿದರೆ ನಾಳೆ ವಿದ್ಯಾರ್ಥಿನಿಯರ ಶಿಕ್ಷಣವೇ ಮೊಟಕುಗೊಳ್ಳುವ ಆತಂಕವಿದೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್