crossorigin="anonymous"> ನಗೆಯ ಬುಗ್ಗೆ, ನವಿರು ಪ್ರೇಮಕಥೆಯ ಕನ್ನಡ ವ್ಯಾಕರಣ ಸವರ್ಣದೀರ್ಘ ಸಂಧಿ' - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಗೆಯ ಬುಗ್ಗೆ, ನವಿರು ಪ್ರೇಮಕಥೆಯ ಕನ್ನಡ ವ್ಯಾಕರಣ ಸವರ್ಣದೀರ್ಘ ಸಂಧಿ’

Radhakrishna Anegundi by Radhakrishna Anegundi
18-10-19, 11 : 02 am
in ಗಾಂಧಿ ಕ್ಲಾಸ್
Share on FacebookShare on TwitterWhatsAppTelegram

ಕನ್ನಡ ಮಣ್ಣಿನ ಘಮಲನ್ನು ಪಸರಿಸುತ್ತಾ ಇಂದಿನ ದಿನಮಾನಕ್ಕೆ ಸರಿ ಹೊಂದುವಂತಹ ಕಥೆಯನ್ನು ಹಾಸ್ಯ ರೂಪದಲ್ಲಿ ಹೇಳುತ್ತಾ ಬಂದಿರುವ ಹೊಸಬರ ಚಿತ್ರ ಸವರ್ಣದೀರ್ಘ ಸಂಧಿ ಸಿನಿ ಪ್ರೇಕ್ಷಕರ ಮನ ಗೆದ್ದಿದೆ.

ಸವರ್ಣದೀರ್ಘ ಸಂಧಿ ಚಿತ್ರದಲ್ಲಿ ಗಮನ ಸೆಳೆಯುವುದು ಪಾತ್ರಗಳ ಹೆಸರುಗಳು. ಕನ್ನಡ ಕವಿಯ ಹೆಸರನ್ನು ಇಟ್ಟುಕೊಂಡ ನಾಯಕ ಮುದ್ದಣ್ಣ (ವೀರೇಂದ್ರ ಶೆಟ್ಟಿ) ರೌಡಿ ಗ್ಯಾಂಗ್ ಕಟ್ಟಿಕೊಂಡಿರುತ್ತಾನೆ. ಸಮಾಜಕ್ಕೆ ಉಪಕಾರ ಮಾಡಲು ರೌಡಿಸಂ ಮಾಡುವುದು ಈ ತಂಡದ ವಿಶೇಷ.

https://www.youtube.com/watch?v=q5UccPJSk6E

ತಮ್ಮ ಕಾಯಕವನ್ನು ಪಾಸಿಟಿವ್ ರೌಡಿಸಂ ಎಂದು ಕರೆದುಕೊಳ್ಳುತ್ತಾರೆ. ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಳ್ಳದಂತೆ ರಕ್ಷಿಸಲು ಇವರ ಗ್ಯಾಂಗ್ ನಲ್ಲಿ ಒಬ್ಬ ಲಾಯರ್ ಇರುತ್ತಾನೆ.

ಫ್ಲಾಶ್ ಬ್ಯಾಕ್ ಒಂದರಲ್ಲಿ ಹಳ್ಳಿಯಲ್ಲಿ ಅನಾಥನಾಗಿ ಜೀತದಾಳು ಕೆಲಸ ಮಾಡುತ್ತಾ ಬೆಳೆಯುವ ನಾಯಕ ತಿಮ್ಮ (ಬಾಲ್ಯದ ಹೆಸರು) ಕೆಲಸ ಮಾಡುವ ಹುಡುಗನ ಜೊತೆ ಕನ್ನಡ ಮೇಷ್ಟ್ರ ಬಳಿ ವ್ಯಾಕರಣ ಪಾಠ ಕಲಿಯುವ ದೃಶ್ಯಗಳು ಮೂಡಿಬರುತ್ತವೆ.

https://www.youtube.com/watch?v=jRvhIgvwu1c

ಮೇಷ್ಟ್ರ ಮಗಳು ಮನೋರಮೆಯ ಜೊತೆ ಸ್ನೇಹವೂ ಆಗುತ್ತದೆ. ಆದರೆ ಆಕಸ್ಮಿಕ ಘಟನೆಯಿಂದ ಮೇಷ್ಟ್ರ ಸಖ್ಯದಿಂದ ದೂರವಾಗಿ ನಗರ ಸೇರುತ್ತಾನೆ. ಅಲ್ಲಿ ಪೈಲ್ವಾನ್ ಮನೆ ಸೇರುತ್ತಾನೆ. ಇವನೇ ಮುಂದೆ ಮುದ್ದಣ್ಣ ಎಂದು ಪ್ರಖ್ಯಾತಿ ಪಡೆಯುತ್ತಾನೆ. ಪೈಲ್ವಾನ್ ನಿಧನದ ನಂತರ ರೌಡಿಗಳ ಗ್ಯಾಂಗನ್ನು ಮುನ್ನಡೆಸುತ್ತಾನೆ.
ಇಲ್ಲಿ ನಾಯಕ ಅವಿದ್ಯಾವಂತನಾದರೂ ಕನ್ನಡ ವ್ಯಾಕರಣದಲ್ಲಿ ಉದ್ಧಾಮ ಪಂಡಿತ. ಕನ್ನಡ ಸಂಧಿ, ಪದ್ಯಗಳು ಅವನ ಬಾಯಲ್ಲಿ ಆಗಾಗ ಕೇಳಿ ಬರುತ್ತವೆ. ನಾಯಕನ ಊರಿಗೆ ಹೊಸದಾಗಿ ಬರುವ ಪೊಲೀಸ್ ಕಪಾಲೀಶ್ವರನ್ ಮುದ್ದಣ್ಣ ಗ್ಯಾಂಗ್‍ನ ನಾಯಕ ಮುದ್ದಣ್ಣನನ್ನು ಹೇಗಾದರೂ ಮಾಡಿ ಜೈಲಿಗಟ್ಟಬೇಕು ಎಂದು ಶಪಥ ಮಾಡುತ್ತಾನೆ. ಇವರಿಬ್ಬರ ನಡುವಿನ ತಾಕಲಾಟವೇ ಚಿತ್ರದ ಹೂರಣ.

ಪರೋಪಕಾರಿ ರೌಡಿಸಂ, ಕನ್ನಡ ವ್ಯಾಕರಣ ಪಾಠಗಳ ನಡುವೆ ಪ್ರೀತಿಯ ಎಳೆಯೂ ಇದೆ. ನಾಯಕನ ಸಾಮಾಜಿಕ ಕೆಲಸವನ್ನು ನೋಡಿ ಗಾಯಕಿಯಾದ ನಾಯಕಿ ಅಮೃತವರ್ಷಿಣಿಗೆ (ಕೃಷ್ಣ) ಮಾಂಕುರವಾಗುತ್ತದೆ. ನಾಯಕನ ಕನ್ನಡ ಪ್ರೇಮವನ್ನು ಕಂಡು ಇನ್ನೂ ಹತ್ತಿರವಾಗುತ್ತಾಳೆ. ಆದರೆ ವೈರಿಗಳ ಕುತಂತ್ರದಿಂದ ನಾಯಕಿ ನಾಯಕನಿಂದ ದೂರವಾಗಬೇಕಾಗುತ್ತದೆ. ಇಲ್ಲಿ ಕಥೆ ತಿರುವು ಪಡೆದುಕೊಳ್ಳುತ್ತದೆ.

ನಾಯಕನ ವೈರಿಗಳಾರು, ನಾಯಕಿ ಏಕೆ ದೂರವಾಗುತ್ತಾಳೆ, ಮುದ್ದಣ್ಣನಿಗೆ ಆಕೆ ಸಿಗುತ್ತಾಳೆಯೇ, ನಾಯಕ ತನ್ನ ವೈರಿಗಳನ್ನು ಹೇಗೆ ಪತ್ತೆ ಹಚ್ಚುತ್ತಾನೆ ಎಂಬ ಕುತೂಹಲಕಾರಿ ಅಂಶಗಳಿಗೆ ಚಿತ್ರ ನೋಡಿಯೇ ಉತ್ತರ ಕಂಡುಕೊಳ್ಳಬೇಕು.

ಸನ್ನಿವೇಶಕ್ಕೆ ತಕ್ಕಂತೆ ನಾಯಕನ ಬಾಯಲ್ಲಿ ನುಡಿಯುವ ಸಂಧಿ, ಪದ್ಯಗಳು, ಪೊಲೀಸರನ್ನು ಗೇಲಿ ಮಾಡಲು ಅವುಗಳನ್ನು ಬಳಸಿಕೊಳ್ಳುವ ಪರಿ ನೋಡುಗರನ್ನು ನಗೆಗಡಲಲ್ಲಿ ತೇಲಿಸುತ್ತದೆ (ಸಂಭಾಷಣೆ ವೀರೇಂದ್ರ ಶೆಟ್ಟಿ).
ಸಂಭಾಷಣೆಗಳು ನೋಡುಗರ ಮನಸ್ಸಿಗೆ ಮುದ ನೀಡುತ್ತವೆ. ಅಲ್ಲದೆ ಕನ್ನಡ ವ್ಯಾಕರಣದ ಸವರ್ಣದೀರ್ಘ ಸಂಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆ. ಮೊದಲ ಚಿತ್ರದಲ್ಲಿಯೇ ನಾಯಕಿ ತಮಗೆ ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡಿದ್ದಾರೆ. ವ್ಯಾಕರಣ ಪಾಠ ಮಾಡುವ ಮೇಷ್ಟ್ರ ಪಾತ್ರವೂ ಅಚ್ಚುಕಟ್ಟಾಗಿ ಮೂಡಿಬಂದಿದೆ. ಉಳಿದಂತೆ ಬರುವ ಪೊಲೀಸರು, ರೌಡಿಗಳು, ಇತರ ಪಾತ್ರಗಳೂ ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ಪದ್ಮಜಾರಾವ್? ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ.

ಚಿತ್ರದ ಗಟ್ಟಿಯಾದ ಕಥಾನಕವನ್ನು ಇನ್ನೊಂದಷ್ಟು ಸೊಗಸಾಗಿ ತೋರಿಸಬಹುದಿತ್ತು. ಆದರೂ ನಿರೂಪಣೆಯಿಂದ ಸಿನಿರಸಿಕರನ್ನು ಸೆಳೆಯುತ್ತದೆ. ಮನೋಮೂರ್ತಿಯವರ ರಾಗ ಸಂಯೋಜನೆಯಲ್ಲಿ ಮೂಡಿ ಬಂದಿರುವ “ಕೊರಳಾದೆ ನಾ ಕೃಷ್ಣ ನಿನ್ನ ಕೈಯಲ್ಲಿ..” ಸೇರಿದಂತೆ ಇತರ ಗೀತೆಗಳು ಕೇಳಲು ಇಂಪಾಗಿವೆ.

ಚಿತ್ರದ ಮೊದಲಾರ್ಧದಲ್ಲಿ ಕಂಡು ಬರುವ ಮಲೆನಾಡ ಸೌಂದರ್ಯವನ್ನು ಕ್ಯಾಮರಾ ಆಕರ್ಷಕವಾಗಿ ಸೆರೆ ಹಿಡಿದಿದೆ (ಛಾಯಾಗ್ರಹಣ ಲೋಕನಾಥ್).

ವೀರೇಂದ್ರ ಶೆಟ್ಟಿ ಸವರ್ಣದೀರ್ಘ ಸಂಧಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ.

ನಿರ್ಮಾಣದ ನೊಗವನ್ನೂ ಹೊತ್ತಿರುವ ವೀರೇಂದ್ರ ಅವರು ನಾಯಕನಾಗಿಯೂ ಗಮನ ಸೆಳೆದಿದ್ದಾರೆ. ಆದರೆ ಕೆಲವು ಸನ್ನಿವೇಶಗಳಿಗೆ ಜೀವ ತುಂಬಬಹುದಿತ್ತು ಎನಿಸದೆ ಇರದು. ಸಂಕೇತ್ ಶಿವಪ್ಪ ಸಂಕಲನ ಪ್ರೇಕ್ಷಕರನ್ನು ಕಟ್ಟಿಹಾಕುತ್ತದೆ.

“ಅದು ಸುವರ್ಣದೀರ್ಘ ಅಲ್ಲ ಸವರ್ಣದೀರ್ಘ ಸಂಧಿ” ಎಂದು ಚಿತ್ರದಲ್ಲಿ ಆಗಾಗ ಕೇಳಿ ಬರುವ ಸಾಲುಗಳು ಕನ್ನಡ ಪದಗಳನ್ನು ತಪ್ಪಾಗಿ ಉಚ್ಚರಿಸುವ ಮಂದಿಗೆ ತಿವಿದಂತಿದೆ.

ಮೊದಲ ಪ್ರಯತ್ನದಲ್ಲೇ ವೀರೇಂದ್ರ ಶೆಟ್ಟಿ ಯಶಸ್ವಿಯಾಗಿದ್ದಾರೆ. ನಕ್ಕು ಹಗುರಾಗಬೇಕು ಎನ್ನುವ ಮನಸುಗಳಿಗೆ ಚಿತ್ರ ಯಥೇಚ್ಛ ಸರಕನ್ನು ಒದಗಿಸುತ್ತದೆ. ಒಟ್ಟಿನಲ್ಲಿ ನಿರ್ಮಾಪಕರಾದ ವೀರೇಂದ್ರ ಶೆಟ್ಟಿ, ಮನೋ ಮೂರ್ತಿ, ಲುಷಿಂಗ್ಟನ್ ಮತ್ತು ಹೇಮಂತ್ ಕುಮಾರ್ ಹಾಕಿದ ದುಡ್ಡಿಗೆ ಮೋಸವೇನು ಆಗಲ್ಲ.

Tags: savarna deergha sandhiಸವರ್ಣದೀರ್ಘ ಸಂಧಿ
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್