crossorigin="anonymous"> Seemanth Kumar Singh : ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಸಿಬಿಐ ಸರಿಯಾದ ತನಿಖೆ ನಡೆಸಿಲ್ಲ : ತನಿಖೆಯ ವರದಿ ಸಲ್ಲಿಸಲು ಸಿಬಿಐ CBI ವಕೀಲರಿಗೆ ಕೋರ್ಟ್ ಸೂಚನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Seemanth Kumar Singh : ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಸಿಬಿಐ ಸರಿಯಾದ ತನಿಖೆ ನಡೆಸಿಲ್ಲ : ತನಿಖೆಯ ವರದಿ ಸಲ್ಲಿಸಲು ಸಿಬಿಐ CBI ವಕೀಲರಿಗೆ ಕೋರ್ಟ್ ಸೂಚನೆ

ಎಸಿಬಿ ವಿಚಾರದಲ್ಲಿ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಗಮನಿಸಿದರೆ ಸರ್ಕಾರ ಇನ್ನಾದರೂ ಕಣ್ಣು ತೆರೆಯಬೇಕಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಇನ್ನಾದರೂ ಯೋಜನೆಗಳು ತಲುಪಲಿ

Radhakrishna Anegundi by Radhakrishna Anegundi
08-07-22, 7 : 30 am
in ರಾಜ್ಯ
Seemanth Kumar Singh high-court-judge-hp-sandesh-again-criticises-acb-adgp-seemanthkumar-singh
Share on FacebookShare on TwitterWhatsAppTelegram

ಬೆಂಗಳೂರು : ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ( Seemanth Kumar Singh ) ಕಾರ್ಯವೈಖರಿ ಬಗ್ಗೆ ಮೊನ್ನೆಯಿಂದ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹೈಕೋರ್ಟ್ ಹಲವು ಮಹತ್ತರ ವಿಚಾರಗಳತ್ತ ಬೆಳಕು ಚೆಲ್ಲಿದೆ. ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ( HP Sandesh ) ಹೇಳಿದ ಮಾತುಗಳು ಮತ್ತು ಬೆಳವಣಿಗೆ ಜನ ಸಾಮಾನ್ಯರಲ್ಲಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

Seemanth Kumar Singh ಈ ನಡುವೆ ಗುರುವಾರ ಬೆಂಗಳೂರು ನಗರ ಡಿಸಿಯಾಗಿದ್ದ ಮಂಜುನಾಥ್ ಲಂಚ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮತ್ತೆ ಎಸಿಬಿ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು. ಹೈಕೋರ್ಟ್ ವಿಚಾರಣೆ ಬಳಿಕ ಡಿಸಿಯನ್ನು ಬಂಧಿಸಲಾಗಿದೆ. ಸಾಕ್ಷಿ ಸಿಕ್ಕ ತಕ್ಷಣ ಬಂಧನ ಮಾಡಬೇಕು ತಾನೇ. ನಾವು ಹೇಳುವ ತನಕ ಏನು ಮಾಡ್ತಾ ಇದ್ರಿ.

ಪರ್ಸನಲ್ ಅಸಿಸ್ಟೆಂಟ್ ಮಹೇಶ್ ಮೂಲಕ ಡಿಸಿ ಡೀಲ್ ಮಾಡಿದ್ದಾರೆ. ಮಹೇಶ್ ನೇಮಕಾತಿ ಆದೇಶ ಎಲ್ಲಿದೆ ಹಣ ಮಾಡುವ ಸಲುವಾಗಿಯೇ ಅವರನ್ನು ಸೇರಿಸಿಕೊಳ್ಳಲಾಗಿದೆ. ಖಾಸಗಿ ವ್ಯಕ್ತಿಯನ್ನು ಡಿಸಿ ತನ್ನ ಚೇಂಬರ್ ಗೆ ಬಿಟ್ಟು ಕೊಂಡ್ರು. ನಾನು ಗರಂ ಆದ ಮೇಲೆ ಮಂಜುನಾಥ್ ಮನೆ ಮೇಲೆ ದಾಳಿ ಮಾಡಲಾಗಿದೆ. ಮನೆಯಲ್ಲಿ ಏನು ಸಿಕ್ಕಿಲ್ಲವಂತಲ್ವಾ…ಎಂದು ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ( HP Sandesh )  ಪ್ರಶ್ನಿಸಿದರು.

ಇದನ್ನೂ ಓದಿ : PSI Exam Scam Amrut Paul : ಹರ್ಷನ ಕೊಲೆ ಆರೋಪಿಗಳಿಗೆ ಮೊಬೈಲ್ ಸಿಗುತ್ತದೆ… ಅಮೃತ ಪಾಲ್ ಗೆ ಎಣ್ಣೆ ಸಿಗಲ್ವ….

ಈ ನಡುವೆ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಕಾರ್ಯವೈಖರಿಗೆ ಬಗ್ಗೆ ಮಾತನಾಡಿದ ನ್ಯಾಯಮೂರ್ತಿಗಳು ನಮಗೆ ಅವರ ಬಗ್ಗೆ ಯಾವುದೇ ದ್ವೇಷವಿಲ್ಲ. ಅವರು ಬಳ್ಳಾರಿ ಎಸ್ಪಿಯಾಗಿದ್ದ ವೇಳೆ ಸಿಬಿಐ ದಾಳಿ ನಡೆಸಿತ್ತು.  ಸೀಮಂತ್ ಕುಮಾರ್ ಸಿಂಗ್ ಪ್ರತಿ ತಿಂಗಳು ಮಾಮೂಲಿ ಸ್ವೀಕರಿಸಿದ್ದಾರೆ ಎಂದು ಸಾಕ್ಷಿಗಳ ಹೇಳಿಕೆ ಇದೆ. ಆದರೆ ಸಿಬಿಐ ಈ ಬಗ್ಗೆ ಆಳವಾದ ತನಿಖೆ ನಡೆಸಿಲ್ಲ. ಅದಿರು ಸಾಗಾಟಕ್ಕೆ ಲಂಚ ಸ್ವೀಕರಿಸುತ್ತಿದ್ದರೆಂದು ಆರೋಪಿಸಲಾಗಿದ್ದರೂ, ಪ್ರತೀ ತಿಂಗಳು ಮಾಮೂಲಿ ಸ್ವೀಕರಿಸುತ್ತಾರೆ ಅನ್ನುವ ಸಾಕ್ಷಿಗಳ ಹೇಳಿಕೆ ಇದ್ದರೂ ಯಾವುದೇ ಕ್ರಮಕ್ಕೂ ಶಿಫಾರಸ್ಸು ಆಗಿರಲಿಲ್ಲ ಅಂದ ನ್ಯಾಯಮೂರ್ತಿಗಳು,  ಆ ತನಿಖೆ ವರದಿಯನ್ನು ಸಲ್ಲಿಸಲು ಸಿಬಿಐಗೆ ಸೂಚಿಸಿದೆ. ತನಿಖಾ ವರದಿ ಬಾರದಿದ್ರೆ ಸಿಬಿಐ ಎಸ್ಪಿಯವರೇ ಹಾಜರಿರುವಂತೆ ಕೋರ್ಟ್ ಸೂಚಿಸಿದೆ.

ಎಸಿಬಿ ಕಾರ್ಯವೈಖರಿಗೆ ಮತ್ತೆ ಹೈಕೋರ್ಟ್ ಗರಂ : ಅಪೂರ್ಣ ಬಿ ರಿಪೋರ್ಟ್ ಮಾಹಿತಿ ಕಂಡು ನ್ಯಾ. ಹೆಚ್.ಪಿ. ಸಂದೇಶ್ ಕೆಂಡಾಮಂಡಲ

ಬೆಂಗಳೂರು : ಎಸಿಬಿ ಕಾರ್ಯವೈಖರಿಗೆ ಸಂಬಂಧಿಸಿದಂತೆ (karnataka high court ACB) ಹೈಕೋರ್ಟ್ ಮತ್ತೆ ಚಾಟಿ ಬೀಸಿದೆ. ಕಳೆದ ಕೆಲವು ದಿನಗಳಿಂದ ಈ ಸಂಬಂಧ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ( HP Sandesh ) ಇವತ್ತು ಕೂಡಾ ಕೆಂಡಮಂಡಲರಾಗಿದ್ದಾರೆ.

ಎಸಿಬಿ ಈ ತನಕ ಹಾಕಿರುವ ಬಿ ರಿಪೋರ್ಟ್ ಗಳ ಬಗ್ಗೆ ವಕೀಲರು ನೀಡಿದ ವರದಿಯನ್ನು  ಪರಿಶೀಲಿಸಿದ ನ್ಯಾಯಾಧೀಶರು ಸಹಿ ಇಲ್ಲದ ಅಪೂರ್ಣ ಮಾಹಿತಿಯನ್ನು ನೋಡಿ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಎಸಿಬಿ ಪರ ವಕೀಲರು 99 ಬಿ ರಿಪೋರ್ಟ್ ಗಳ ಮಾಹಿತಿ ಕೊಟ್ಟಿದ್ದಾರೆ. ಬಳಿಕ ಆ ಸಂಖ್ಯೆ 105ಕ್ಕೆ ಏರಿತು.

ಆಗ ಅಸಮಾಧಾನಗೊಂಡ ನ್ಯಾಯಾಧೀಶರು, ನಾನು ಪದೇ ಪದೇ ಎಸಿಬಿಗೆ ಹೇಳಬೇಕಾ, ಸರಿಯಾಗಿ ಮಾಹಿತಿಯನ್ನು ಯಾಕೆ ಕೊಡುತ್ತಿಲ್ಲ. ನನಗೆ ಆಟ ಆಡುತ್ತಿರುವ ಬಗ್ಗೆ ಎಲ್ಲವೂ ಗೊತ್ತಿದೆ. 2022ರ ಬಿ ರಿಪೋರ್ಟ್ ಗಳು ಎಲ್ಲಿದೆ. ADGP ರಕ್ಷಿಸಲು ಬಿ ರಿಪೋರ್ಟ್ ಮಾಹಿತಿ ನೀಡಿಲ್ಲ. ಮಾರ್ಚ್ ಜೂನ್ ತಿಂಗಳಲ್ಲಿ ಬಿ ರಿಪೋಟ್ ಸಲ್ಲಿಸಲಾಗಿದೆ. ನೀವು ಹೀಗೆ ಆಟವಾಡುತ್ತಿರುವುದು ಗೊತ್ತಿದ್ದು ಈ ಮಾಹಿತಿಗಳನ್ನು ಕೇಳಲಾಗಿದೆ ಎಂದು ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ( HP Sandesh ) ಗರಂ ಆಗಿದ್ದಾರೆ.

ಈ ನಡುವೆ ಎಫ್ ಐ ಆರ್ ರದ್ದು ಕೋರಿ ಐಎಎಸ್ ಅಧಿಕಾರಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ್ದು, ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ. ಪೊಲೀಸ್ ನೇಮಕಾತಿ ಹಗರಣದ ಪ್ರಕರಣದ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಲಾಗಿದೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್