crossorigin="anonymous"> ಬೆಂಗ್ಳೂರಿಗೆ ಶರಾವತಿ ನೀರು : ಕೈ ಬಿಟ್ಟ ಯೋಜನೆಗೆ ಮತ್ತೊಮ್ಮೆ ಸಮೀಕ್ಷೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಗ್ಳೂರಿಗೆ ಶರಾವತಿ ನೀರು : ಕೈ ಬಿಟ್ಟ ಯೋಜನೆಗೆ ಮತ್ತೊಮ್ಮೆ ಸಮೀಕ್ಷೆ

Radhakrishna Anegundi by Radhakrishna Anegundi
11-08-24, 8 : 33 am
in ಟಾಪ್ ನ್ಯೂಸ್, ರಾಜ್ಯ
linganamakki
Share on FacebookShare on TwitterWhatsAppTelegram

ಎತ್ತಿನಹೊಳೆಯ ಎಡವಟ್ಟಿನ ಬೆನ್ನಲ್ಲೇ ಶರಾವತಿ ನೀರಿಗೆ ಕೈ ಹಾಕಲಾಗಿದೆ

ಕರಾವಳಿಯಲ್ಲಿ ಸಮುದ್ರಕ್ಕೆ ವ್ಯರ್ಥವಾಗಿ ಸೇರುತ್ತಿರುವ ನೀರಿನ ಪೈಕಿ 24 ಟಿಎಂಸಿ ನೀರನ್ನು ಬೆಂಗಳೂರಿಗೆ ಒಯ್ಯುವ ಎತ್ತಿನಹೊಳೆ ಯೋಜನೆ ಈಗಾಗಲೇ ಅವಾಂತರಗಳ ಆಗರವಾಗಿದೆ. ಅವೈಜ್ಞಾನಿಕ ಯೋಜನೆಯೊಂದಕ್ಕೆ ಸಮ್ಮಿತಿಸಿದ ಸೂಚಿಸಿದ ಕರ್ಮಕ್ಕೆ ರಾಜ್ಯ ಸರ್ಕಾರ ಇದೀಗ ಬಿಳಿಯಾನೆಯೊಂದನ್ನು ಸಾಕುತ್ತಿದೆ. ಈ ಯೋಜನೆಯ ಕಾರಣದಿಂದಲೇ ಪಶ್ಚಿಮ ಘಟ್ಟದಲ್ಲಿ ಅನಾಹುತಗಳು ಸಂಭವಿಸುತ್ತಿದೆ. ಮತ್ತೊಂದು ನಮ್ದೇ ತೆರಿಗೆ ದುಡ್ಡು ಪೋಲಾಗುತ್ತಿದೆ.

ಈ ನಡುವೆ ರಾಜಧಾನಿ ಬೆಂಗಳೂರಿಗೆ ಶರಾವತಿ ನೀರನ್ನು ಒಯ್ಯುವ ಯೋಜನೆಯನ್ನು ಮತ್ತೆ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲೇ ನೀರಿನ ಮೂಲಗಳನ್ನು ಹುಡುಕುವ ಮತ್ತು ಅಭಿವೃದ್ಧಿ ಪಡಿಸುವ ಪ್ರಯತ್ನಕ್ಕೆ ಕೈ ಹಾಕುವ ಬದಲು ಬೇರೆ ಜಿಲ್ಲೆಗಳ ಒಡಲಿನತ್ತ ಅಧಿಕಾರಿಗಳು ಕಣ್ಣು ನೆಟ್ಟಿದ್ದಾರೆ.

ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುಕ್ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುತ್ತಿರುವ ಸುಮಾರು 40 ಟಿಎಂಸಿ ನೀರನ್ನು ಬಳಸಿಕೊಂಡು ಬೆಂಗಳೂರಿನ ದಾಹ ಇಂಗಿಸುವುದು ಯೋಜನೆಯ ಉದ್ದೇಶ. ಈ ಸಂಬಂಧ ಕಾರ್ಯಸಾಧು ವರದಿ ನೀಡಲು ವಿಶ್ವೇಶ್ವರಯ್ಯ ಜಲ ನಿಗಮ ಟೆಂಡರ್ ಕರೆದಿದ್ದು, ಬೆಂಗಳೂರಿನ ಈಐ ಟೆಕ್ನೋಲಾಜಿಸಿಸ್ ಪ್ರೈವೇಟ್ ಕಂಪನಿ 73 ಲಕ್ಷಕ್ಕೆ ಟೆಂಡರ್ ಪಡೆದಿದೆ. ( ಎತ್ತಿನಹೊಳೆ ಯೋಜನೆಯ ಕಾರ್ಯಸಾಧು ವರದಿಯನ್ನು ಒಂದ್ಸಲ ಓದಿಕೊಳ್ಳಿ)

ಭದ್ರಾ ಮೇಲ್ದಂಡೆ ಮತ್ತು ಎತ್ತಿನಹೊಳೆಗಾಗಿ ನಿರ್ಮಿಸಿರುವ ಜಾಲ ಬಳಸಿಕೊಂಡು ಶರಾವತಿ ಯೋಜನೆ ಜಾರಿಗೊಳಿಸಬಹುದು ಅನ್ನೋದು ಅಧಿಕಾರಿಗಳ ಲೆಕ್ಕಚಾರ, ಮಾತ್ರವಲ್ಲದೆ ಬೆಂಗಳೂರು ಸೇರಿ ರಾಜ್ಯದ ಮಧ್ಯ ಕರ್ನಾಟಕ, ಹಾಗೂ ಪೂರ್ವ ಭಾಗದ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸೋದು ಹಾಗೂ ಈ ಭಾಗದ ಕೆರೆ ಭರ್ತಿ ಮಾಡೋದು ಈ ಯೋಜನೆಯ ಉದ್ದೇಶವಂತೆ.

ಈಗಿರುವ ಮಾಹಿತಿಗಳ ಪ್ರಕಾರ ಮುಂಗಾರು ಹಂಗಾಮಿನ ನಂತರ ಕಾಲುವೆಗಳ ಮೂಲಕ ನೀರು ಸಂಗ್ರಹ ಮಾಡುವ ಉದ್ದೇಶ ಹೊಂದಲಾಗಿದ್ದು, ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಿಂದ ಮಾವಳ್ಳಿ ಗ್ರಾಮದ ಹತ್ತಿರ Pump House ನಿರ್ಮಿಸಿ 98 ಅಡಿ ನೀರನ್ನು ಮೇಲಕ್ಕೆ ಎತ್ತಲಾಗುತ್ತದೆ. ಅಲ್ಲಿಂದ 24 ಕಿಮೀ ದೂರ ಗುರುತ್ವಾಕರ್ಷಣೆ ಮೂಲಕ ಶಂಕದ ಹೊಳೆ ಸಂಪರ್ಕಿಸುವ ಕಣಿವೆ ಮುಖಾಂತರ ತೀರ್ಥಹಳ್ಳಿ ಸಮೀಪದ ತುಂಗಾನದಿಗೆ ನೀರನ್ನು ಬಿಡಲಾಗುವುದು. ಈ ಸಲುವಾಗಿ 5 ಕಿಮೀ ಸುರಂಗ ನಿರ್ಮಿಸುವ ಪ್ರಸ್ತಾಪವೂ ಇದೆ.

ತುಂಗಾದಿಂದ ಭದ್ರಾ ತನಕ ಈಗಾಗಲೇ ಭದ್ರಾ ಮೇಲ್ದಂಡೆ ಸಂಪರ್ಕಗಳಿದ್ದು ಅಲ್ಲಿಂದ ಹಿರಿಯೂರು ತಾಲೂಕಿನ ವಿವಿ ಸಾಗರದವರೆಗೂ ಕಾಲುವೆ ಮೂಲಕ ನೀರು ಹರಿದು ಬಂದು ವಿವಿ ಸಾಗರದಲ್ಲಿ ಶರಾವತಿ ನೀರು ಸಂಗ್ರಹವಾಗಲಿದೆ.

ಇದಾದ ನಂತರ ಭದ್ರಾ ಮೇಲ್ದಂಡೆಯ ತುಮಕೂರು ಶಾಕಾ ಕಾಲುವೆ ಮೂಲಕ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ ಬೋರನಕಣಿವೆ ಅಣೆಕಟ್ಟಿಗೆ ನೀರನ್ನು ಲಿಫ್ಟ್ ಮಾಡಿ ತಾಲೂಕಿನ ತಿಮ್ಮನಹಳ್ಳಿ ದಾಬಸ್ ಪೇಟೆ ಮೂಲಕ ಅರ್ಕಾವತಿ ನದಿಯ ಹೆಸರಘಟ್ಟ ಮತ್ತು ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ನೀರು ತುಂಬಿಸಲಾಗುತ್ತದೆ. ಅಲ್ಲಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ.

ಆದರೆ ಈ ಯೋಜನೆ ಇಂದಿನ ಯೋಜನೆಯಲ್ಲಿ ಹಲವಾರು ವರ್ಷಗಳ ಹಿಂದೆಯೇ ಅಧಿಕಾರಿಗಳು ಈ ಬಗ್ಗೆ ಕಡತ ಸಿದ್ದಪಡಿಸಿದ್ದರು.

sharavathi

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥದಲ್ಲಿ ಹುಟ್ಟಿ ಹರಿಯುವ ಶರಾವತಿಗೆ ಇನ್ಯಾವ ಕಂಟಕ ಕಾದಿದೆಯೋ ಅನ್ನುವ ಆತಂಕದಲ್ಲೇ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ವೇಳೆ ಮಲೆನಾಡಿಗರು ಬೆಂಗಳೂರಿನಲ್ಲಿ ವಾಸವಾಗಿದ್ದು ಶರಾವತಿಯನ್ನು ಬೆಂಗಳೂರಿಗೆ ಒಯ್ಯಲು ವಿರೋಧ ಯಾಕೆ ಅನ್ನೋ ಮಾತುಗಳು ಕೇಳಿ ಬಂದಿತ್ತು.

2019ರಲ್ಲಿ ರಾಜ್ಯ ಸರ್ಕಾರ ಈ ಯೋಜನೆಗೆ ಡಿಪಿಆರ್ ಸಿದ್ದಪಡಿಸಿತ್ತು. ಮಲೆನಾಡಿನ ಜನ ಇದನ್ನು ವಿರೋಧಿಸಿದ ಕಾರಣ ಪ್ರಸ್ತಾಪನೆಯನ್ನು ಕೈ ಬಿಡಲಾಗಿತ್ತು. 2019ರ ಡಿಪಿಆರ್ ಪ್ರಕಾರ ಲಿಂಗನಮಕ್ಕಿಯಿಂದ ನೀರನ್ನೆತ್ತಿ ಹೊಸನಗರದ ಅಣೆಕಟ್ಟಿಗೆ ಸಾಗಿಸಿ ಅಲ್ಲಿಂದ ಚಿಕ್ಕಮಗಳೂರಿನ ಯಗಚಿ ಜಲಾಶಯಕ್ಕೆ ತಲುಪಿಸಿ, ನಂತರ ಗೊರೂರು ಅಣೆಕಟ್ಟಿಗೆ ಒಯ್ದು, KRS ಮೂಲಕ ಬೆಂಗಳೂರಿಗೆ ಶರಾವತಿ ತಲುಪಿಸಲು ಉದ್ದೇಶಿಸಲಾಗಿತ್ತು. ಈ ಮೂಲಕ ಕಾವೇರಿ, ನೇತ್ರಾವತಿ, ಕುಮಾರಧಾರ ನಂತ್ರ ಶರಾವತಿಯನ್ನು ಬೆಂಗಳೂರಿಗೆ ತರೋದು ಉದ್ದೇಶ.

ಬೆಂಗಳೂರಿಗೆ ಶರಾವತಿ ನೀರನ್ನು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ 2019ರಲ್ಲಿ ಶಿವಮೊಗ್ಗ ಜಿಲ್ಲೆ ಬೆಂದ್ ನಡೆಸಲಾಗಿತ್ತು , ಹೀಗಾಗಿ ಯೋಜನೆ ಜಾರಿಯಿಂದ ಸರ್ಕಾರ ಹಿಂದಕ್ಕೆ ಸರಿದಿತ್ತು.

sharavathi plan

ಹಾಗಿದ್ದರೂ 2020ರ ಮಾರ್ಚ್ ತಿಂಗಳಲ್ಲಿ BBMP Council ಸಭೆಯಲ್ಲಿ ಮಾತನಾಡಿದ್ದ ಬೆಂಗಳೂರು ಜಲಮಂಜಳಿಯ ಅಗಿನ ಅಧ್ಯಕ್ಷ ತುಷಾರ್ ಗಿರಿನಾಥ್ ರಾಜಧಾನಿಯ ನೀರಿನ ಬವಣೆ ನೀಗಿಸುವ ಸಲುವಾಗಿ ಶರಾವತಿ ನದಿಯಿಂದ 30 ಟಿಎಂಸಿ ನೀರು ತರಲು ಬೆಂಗಳೂರು ಜಲಮಂಡಳಿಯು ಆಲೋಚಿಸಿದೆ ಅಂದಿದ್ದರು.

2028ಕ್ಕೆ ನೀರಿನ ಅಭಾವ ಉಂಟಾಗುವ ಹಿನ್ನೆಲೆಯಲ್ಲಿ ಶರಾವತಿಯಿಂದ ಯಗಚಿ ಅಥವಾ ವಾಣಿವಿಲಾಸ ಜಲಾಶಯಕ್ಕೆ ನೀರು ಹರಿಸಿ ಅಲ್ಲಿಂದ ನಗರಕ್ಕೆ 30 ಟಿಎಂಸಿ ನೀರು ತರಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ ಶರಾವತಿಯಿಂದ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಿ, ಅಲ್ಲಿಂದ ಬೆಂಗಳೂರಿಗೆ ನೀರು ತರುವುದು ಸೂಕ್ತವೆನಿಸಿದೆ.

ಹೀಗಾಗಿ, ಅಲ್ಲಿಂದ ಮೊದಲ ಹಂತದಲ್ಲಿ 15 ಟಿಎಂಸಿ ನೀರು ತರಲು ತೀರ್ಮಾನಿಸಲಾಗಿದೆ. ಇದಕ್ಕೆ ಸಾಕಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ. ಈ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾರ್ಗ ಮಧ್ಯದಲ್ಲಿನ ಶಿವಮೊಗ್ಗ, ಚಿತ್ರದುರ್ಗ, ತುಮಕೂರು ಜನತೆಗೆ 5 ಟಿಎಂಸಿ ನೀರು ಒದಗಿಸುವ ಪ್ರಸ್ತಾವನೆಯೂ ಇದರಲ್ಲಿ ಇದೆ ಎಂದು ತಿಳಿಸಿದರು.

ಒಟ್ಟಿನಲ್ಲಿ ಮಲೆನಾಡಿನ ನೆಮ್ಮದಿ ಕೆಡಿಸಲು ಶರಾವತಿ ಯೋಜನೆ ಮತ್ತೊಮ್ಮೆ ಸಿದ್ದವಾಗಿದೆ. ಗಮನಾರ್ಹ ಅಂಶ ಅಂದ್ರೆ ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಮಾತನಾಡಿದ್ದ ಇಂಧನ ಸಚಿವ ಕೆಜೆ ಜಾರ್ಜ್ ನೀರಿನ ಅಗತ್ಯತೆಗಳನ್ನು ಪೂರೈಸಲು ಶರಾವತಿ ನದಿ ನೀರನ್ನು ಬೆಂಗಳೂರಿಗೆ ತಿರುಗಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ ಅಂದಿದ್ದರು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್