crossorigin="anonymous"> ನನ್ನ ಮಗಳು ಮಹಾಭ್ರಷ್ಟೆ...ಅವಳಿಗೆ ಮತ ಹಾಕಬೇಡಿ... ಡಿಎಂಕೆಗೆ ಸಂಕಷ್ಟ ತಂದಿಟ್ಟ ಅಭ್ಯರ್ಥಿಯ ತಾಯಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನನ್ನ ಮಗಳು ಮಹಾಭ್ರಷ್ಟೆ…ಅವಳಿಗೆ ಮತ ಹಾಕಬೇಡಿ… ಡಿಎಂಕೆಗೆ ಸಂಕಷ್ಟ ತಂದಿಟ್ಟ ಅಭ್ಯರ್ಥಿಯ ತಾಯಿ

Radhakrishna Anegundi by Radhakrishna Anegundi
06-04-21, 8 : 56 pm
in ದೇಶ
aladi aruna
Share on FacebookShare on TwitterWhatsAppTelegram

ತಮಿಳುನಾಡು ವಿಧಾನಸಭೆ ಚುನವಣಾ ಪ್ರಕ್ರಿಯೆಗಳು ಮುಕ್ತಾಯಗೊಂಡಿದೆ. ಅಭ್ಯರ್ಥಿಗಳ ಭವಿಷ್ಯ ಇದೀಗ ಇವಿಎಂ ಯಂತ್ರದಲ್ಲಿ ಭದ್ರವಾಗಿದೆ. ಮತದಾನ ಮುಗಿಯೋ ಕೊನೆ ಕ್ಷಣದವರೆಗೂ ಎಲ್ಲಾ ರಾಜಕೀಯ ಪಕ್ಷಗಳು ಮತದಾರನ ಗಮನ ಸೆಳೆಯಲು ಇನ್ನಿಲ್ಲದ ಸರ್ಕಸ್ ನಡೆಸಿತ್ತು.

ಈ ನಡುವೆ ಗೆಲವು ಖಚಿತ ಅಂದುಕೊಂಡಿದ್ದ ಕ್ಷೇತ್ರವೊಂದರಲ್ಲಿ ಡಿಎಂಕೆ ಪಕ್ಷ ಇಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಿದೆ. ಅಭ್ಯರ್ಥಿಯ ತಾಯಿಯೇ ಮಗಳಿಗೆ ಮತ ಹಾಕಬೇಡಿ ಆಕೆ ಮಹಾಭ್ರಷ್ಟೆ ಎಂದು ಸಾರ್ವಜನಿಕವಾಗಿ ಸಾರಿರುವುದೇ ದೊಡ್ಡ ಸಮಸ್ಯೆಯಾಗಿದೆ.

ಅಲಂಗುಲಂ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಗೆಲುವಿಗಾಗಿ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಡಿಎಂಕೆ ಪಕ್ಷದಿಂದ ಪುಂಜೋಥೈ ಅಳಾದಿ ಅರುಣಾ ಸ್ಪರ್ಧೆಗೆ ಇಳಿದಿದ್ದಾರೆ, ಎಐಎಡಿಎಂಕೆ ಪಕ್ಷ ಮಾಜಿ ರಾಜ್ಯ ಸಭಾ ಹಾಗೂ ಮಾಜಿ ಶಾಸಕರಾಗಿರುವ ಮನೋಜ್ ಪಾಂಡ್ಯನ್ ಅವರನ್ನು ಕಣಕ್ಕಿಳಿಸಿದೆ.

tamil nadu election02

ಅಳಾದಿ ಅರುಣಾ 2006 ಮತ್ತು 2016ರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2011 ರಲ್ಲಿ ಎಐಎಡಿಎಂಕೆ ಇಲ್ಲಿ ಗೆಲುವು ಸಾಧಿಸಿತ್ತು.

ಈ ನಡುವೆ ಚುನಾವಣೆಗೆ ಕೆಲವೇ ಗಂಟೆಗಳಿರುವ ಸಂದರ್ಭದಲ್ಲಿ ಅಳಾದಿ ಅರುಣಾ ತಾಯಿ ಬಾಂಬ್ ಒಂದನ್ನು ಸಿಡಿಸಿದ್ದಾರೆ. ಮಗಳ ವಿರುದ್ಧವೇ ಮಾತನಾಡಿರುವ ತಾಯಿ ಕಮಲಾ ಅಳಾದಿ ಅರುಣ, ನನ್ನ ಮಗಳು ಮಹಾ ಭ್ರಷ್ಟೆಯಾಗಿದ್ದು, ಆಕೆಗೆ ಮತ ನೀಡಬೇಡಿ. ಆಕೆ ಗೆಲ್ಲಬಾರದೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ.

kamala

ನನ್ನ ಗಂಡ ಅಳಾದಿ ಅರುಣ ಅವರು ಶಾಸಕರಾಗಿದ್ದ ವೇಳೆ ಎಲ್ಲವೂ ಚೆನ್ನಾಗಿತ್ತು. ಜನರಿಗೆ ಸಾಕಷ್ಟು ಸಹಾಯ ಮಾಡುತ್ತಿದ್ದರು. ಈ ಕ್ಷೇತ್ರದಲ್ಲಿ ಸಾಕಷ್ಟು ಅಕ್ಕಿ ಮಿಲ್ ತಲೆ ಎತ್ತಿವೆ ಅಂದ್ರೆ ಅದಕ್ಕೆ ನನ್ನ ಪತಿ ಕಾರಣ. ಅವರು ಎಂದಿಗೂ ಲಂಚಕ್ಕಾಗಿ ಕೈ ಒಡ್ಡಿದವರಲ್ಲ. ಆದರೆ ನನ್ನ ಮಗಳು ತಂದೆಯ ಹಾಗಲ್ಲ. ರೆಸಾರ್ಟ್ ನಿರ್ಮಾಣ, ಲ್ಯಾಂಡ್ ಮಾಫಿಯಾಗಳೇ ಆಕೆಯ ವ್ಯವಹಾರವಾಗಿದೆ.

ಆಕೆಯ ತಂದೆ ಕೊಲೆಯಾದ ವೇಳೆಯಲ್ಲೂ ನನಗೆ ಆಕೆ ಸಹಕಾರ ನೀಡಲಿಲ್ಲ. ನಮ್ಮ ಶಾಲೆ ಮತ್ತು ನನ್ನ ಮಗನ ಒಂದು ಕೋಟಿ ರೂಪಾಯಿ ಹಣವನ್ನು ಆಕೆಯ ಗಂಡ ಬಾಲಾಜಿ ಹೆಸರಿಗೆ ಬರೆಸಿಕೊಂಡಿದ್ದಾಳೆ. ಅಷ್ಟು ಮಾತ್ರವಲ್ಲದೆ ಆಕೆ ನನ್ನ ಮೇಲೆ ಹಲ್ಲೆಯನ್ನೂ ನಡೆಸಿದ್ದು, ನನ್ನ ಕಾಲು ಮತ್ತು ಕೈಗೆ ಬಲವಾದ ಗಾಯವಾಗಿತ್ತು ಎಂದು ದೂರಿದ್ದಾರೆ.

tamil nadu election04

ಲಭ್ಯ ಮಾಹಿತಿಗಳ ಪ್ರಕಾರ ಕುಟುಂಬ ಕಲಹದಿಂದ ಈ ವಿವಾದ ಎದ್ದಿದೆಯಂತೆ. ಕುಟುಂಬ ಸದಸ್ಯರು ಕೂಡಾ ಕಳೆದ ಬಾರಿಯಂತೆ ಈ ಬಾರಿಯೂ ಡಿಎಂಕೆ ಪಕ್ಷದಿಂದ ಟಿಕೆಟ್ ಬಯಸಿದ್ದರು. ಆದರೆ ಪಕ್ಷ ಮತ್ತೆ ಅಳಾದಿ ಅರುಣಾ ಅವರಿಗೆ ಟಿಕೆಟ್ ನೀಡಿತ್ತು. ಈ ಕಾರಣದಿಂದ ತಾಯಿ ಮಗಳ ವಿರುದ್ಧವೇ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ.

tamil nadu election01

ಆದರೆ ತಾಯಿಯ ಈ ಆರೋಪ ಎಐಎಡಿಎಂಕೆಗೆ ಸಹಕಾರವಾಗುವ ಸಾಧ್ಯತೆಗಳಿದೆ ಅನ್ನುವ ಮಾತುಗಳು ಕೇಳಿ ಬಂದಿದೆ.

ಅಳಾದಿ ಅರುಣಾ ತಂದೆ ತಮಿಳುನಾಡಿನ ಹಿರಿಯ ರಾಜಕಾರಣಿಯಾಗಿದ್ದು,  ಮೂರು ಬಾರಿ ಶಾಸಕರಾಗಿದ್ದರು ಆಯ್ಕೆಯಾಗಿದ್ದರು.2004ರಲ್ಲಿ ಅವರ ಕೊಲೆಯಾಗಿತ್ತು. ಹೀಗಾಗಿ 2006ರಲ್ಲಿ ನಡೆದ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಮಗಳು ಗೆಲುವು ಸಾಧಿಸಿದ್ದರು. 2011ರಲ್ಲಿ ಈ  ಸೀಟನ್ನು ಎಐಎಡಿಎಂಕೆ ಕಸಿದು ಕೊಂಡಿತ್ತು. 2016ರಲ್ಲಿ ಮತ್ತೆ ಅಳಾದಿ ಅರುಣಾ ಗೆಲುವು ಸಾಧಿಸಿದ್ದರು.

tamil nadu election03
Tags: AIADMKDMKtamil naduಡಿಎಂಕೆತಮಿಳುನಾಡು
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್