ಶಿವಮೊಗ್ಗ : ರಾಜ್ಯದಲ್ಲಿ ಆತಂಕ ಹುಟ್ಟಿಸಿದ ನಿಗೂಢ ಸದ್ದಿನ ರಹಸ್ಯ ಕೊನೆಗೂ ಬಯಲಾಗಿದೆ.
ಶಿವಮೊಗ್ಗ ಅಬ್ಬಲಗೆರೆಯ ಹುಣಸೋಡು ಗ್ರಾಮದಲ್ಲಿ ಕಾರ್ಯಾಚರಿಸುತ್ತಿದ್ದ ಕ್ರಷರ್ ನಲ್ಲಿ ಡೈನಮೇಟ್ ಸ್ಫೋಟಗೊಂಡ ಪರಿಣಾಮ ಈ ಸದ್ದು ಕೇಳಿಸಿದೆ ಎನ್ನಲಾಗಿದೆ.
ಬಂಡೆ ಒಡೆಯುವ ಸಲುವಾಗಿ ಲಾರಿಯಲ್ಲಿ ಡೈನಮೇಟ್ ಗಳನ್ನು ತರಲಾಗಿತ್ತು. ಡೈನಮೇಟ್ ಇಳಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿದ್ದು ಒಂದು ಕಿಲೋಮೀಟರ್ ದೂರಕ್ಕೆ ಕೈ ಕಾಲುಗಳು ಹಾರಿದೆ. ಮೃತರ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ.
ಸ್ಥಳಕ್ಕೆ ಇದೀಗ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ದೌಡಾಯಿಸಿದ್ದಾರೆ.
ಸ್ಫೋಟದ ರಭಸಕ್ಕೆ ಹುಣಸೋಡು ಗ್ರಾಮದ ಅನೇಕ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಜೊತೆಗೆ ಮನೆಯ ಕಿಟಕಿಯ ಗಾಜುಗಳು ಪುಡಿ ಪುಡಿಯಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯಕ್ ಹೇಳಿದ್ದಾರೆ.
ರೈಲ್ವೆ ಇಲಾಖೆಗೆ ಸೇರಿದ ಕ್ರಷರ್ ಇದಾಗಿದೆ ಎಂದು ಗೊತ್ತಾಗಿದೆ.
Discussion about this post