ಬೆಂಗಳೂರು : ರಾಜ್ಯದಲ್ಲಿ ಅಬ್ಬರಿಸುತ್ತಿರುವ ಕೊರೋನಾ ವಿರುದ್ಧದ ಹೋರಾಟಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಕೈ ಜೋಡಿಸಿದೆ. ಈಗಾಗಲೇ ವಿವಿಧ ಕಾರ್ಯಕ್ರಮಗಳನ್ನು ಕೊರೋನಾ ವಿರುದ್ಧದ ಸಮರಕ್ಕಾಗಿ ಜಾರಿ ಮಾಡಲಾಗಿದೆ.
ಇದರ ಮುಂದುವರಿದ ಭಾಗವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ ಹಾಗೂ ವೆಂಟಿಲೇಟರ್ ಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಗಿದೆ. ಇದು ಮೊದಲ ಕಂತಿನ ಸಹಾಯವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಶ್ರೀಕ್ಷೇತ್ರ ಒದಗಿಸಲಿದೆ.

ಮೊದಲ ಕಂತಿನಲ್ಲಿ 300 ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತು 20 ವೆಂಟಿಲೇಟರ್ ಹಾಗೂ ಹೈ ಫ್ಲೋ ಯಂತ್ರಗಳನ್ನು ಹಸ್ತಾಂತರಿಸಲಾಗಿದೆ. ಶನಿವಾರ ಸಿಎಂ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಇಓ ಡಾ.ಎಚ್.ಎಲ್. ಮಂಜುನಾಥ್ ಸಿಎಂ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ಇದೇ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ಸಂಕಷ್ಟ ಕಾಲದಲ್ಲಿ ಧರ್ಮಸ್ಥಳದ ವಿರೇಂದ್ರ ಹೆಗ್ಗಡೆಯವರು ಮಾಡಿದ ಕಾರ್ಯಗಳನ್ನು ಉಳಿದ ಸ್ವಾಮೀಜಿಗಳು ನಡೆಸಿದರೆ ಒಳ್ಳೆಯ ಅರ್ಥ ಬರುತ್ತದೆ ಅಂದರು.
Discussion about this post