crossorigin="anonymous"> ಪ್ರಶಾಂತ್ ಆಚಾರ್ಯ ಸುಶ್ರೀಂದ್ರ ತೀರ್ಥ ಸ್ವಾಮೀಜಿಯಾದ ಹಿಂದಿದೆ ರೋಚಕ ಕಥೆ… - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರಶಾಂತ್ ಆಚಾರ್ಯ ಸುಶ್ರೀಂದ್ರ ತೀರ್ಥ ಸ್ವಾಮೀಜಿಯಾದ ಹಿಂದಿದೆ ರೋಚಕ ಕಥೆ…

Radhakrishna Anegundi by Radhakrishna Anegundi
23-04-19, 6 : 39 pm
in ಟ್ರೆಂಡಿಂಗ್
putige
Share on FacebookShare on TwitterWhatsAppTelegram

ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದ 31ನೇ ಯತಿ ಸ್ವೀಕಾರ ಕಾರ್ಯಕ್ರಮ ಉಡುಪಿ ಹಿರಿಯಡ್ಕ ಸಮೀಪದ ಪುತ್ತಿಗೆ ಮಠದಲ್ಲಿ ಸೋಮವಾರ ನಡೆಯಿತು. ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶಿಷ್ಯನಿಗೆ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಎಂದು ನಾಮಕರಣ ಮಾಡಿದರು.

ಹಾಗಾದರೆ ಸ್ವಾಮೀಜಿ ಸ್ವೀಕಾರ ಕಾರ್ಯ ಹೇಗೆ ನಡೆಯಿತು, ಅದರ ಹಿಂದಿದೆ ಅದ್ಭುತ ಕಥೆ.

ಮಠದ ಉತ್ತರಾಧಿಕಾರಿಯಾಗಿ 29 ವರ್ಷದ ಸುಶ್ರೀಂದ್ರ ತೀರ್ಥ ಶ್ರೀಗಳು ಪೂರ್ವಾಶ್ರಮದಲ್ಲಿ ಬೆಂಗಳೂರಿನಲ್ಲಿ ಆರ್ಸನ್ ಸಾಫ್ಟ್‌ವೇರ್ ಕಂಪನಿಯಲ್ಲಿ ಟೀಂ ಲೀಡರ್ ಆಗಿ ಕಾರ್ಯನಿರ್ವಹಿಸಿದ್ದು, 8 ತಿಂಗಳ ಹಿಂದೆ ಬೆಂಗಳೂರಿನ ಮಠದಲ್ಲಿ ಪುತ್ತಿಗೆಶ್ರೀಗಳನ್ನು ಭೇಟಿ ಮಾಡಿದ್ದ ಪ್ರಶಾಂತ್ ಆಚಾರ್ಯ, ಸನ್ಯಾಸಾಶ್ರಮ ಸ್ವೀಕರಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಸನ್ಯಾಸದ ಬಗ್ಗೆ ಅವರ ಒಲವು ನೋಡಿ ಎಲ್ಲ ಕಡೆಗಳಿಂದಲೂ ಮಾಹಿತಿ ಸಂಗ್ರಹಿಸಿ, ಜಾತಕ ವಿಮರ್ಶೆ ಮಾಡಿ ದೀಕ್ಷೆ ನೀಡಲು ನಿರ್ಧರಿಸಲಾಯಿತಂತೆ.

ಹುಡುಗಿಯರ ಬಗ್ಗೆ ಆಸಕ್ತಿ ಇಲ್ಲ : ಪುತ್ತಿಗೆ ಮಠದ ಶಿಷ್ಯರ ಹಿಂದೆ ನಡೆದಿತ್ತು ಬೇಹುಗಾರಿಕೆ….!

ಇನ್ನು ತಮ್ಮ ಸನ್ಯಾಸ ದೀಕ್ಷೆ ಕುರಿತಂತೆ ಮಾತನಾಡಿರುವ ಸುಶ್ರೀಂದ್ರ ತೀರ್ಥ ಶ್ರೀಗಳು,ಕಳೆದ 15 ವರ್ಷದಿಂದ ಸನ್ಯಾಸದ ಆಸಕ್ತಿ ಇತ್ತು. ಐದು ವರ್ಷದಿಂದ ಕೃಷ್ಣಪೂಜೆ ಹಂಬಲ ತೀವ್ರವಾಗಿತ್ತು. ಆದರೆ ಸನ್ಯಾಸ ದೀಕ್ಷೆ ಯಾರಲ್ಲಿ ಕೇಳುವುದು ಎಂಬುದು ತಿಳಿಯುತ್ತಿರಲಿಲ್ಲ.

ಕೃಷ್ಣ-ಮುಖ್ಯಪ್ರಾಣ ದೇವರ ಅನುಗ್ರಹದಿಂದ ಪುತ್ತಿಗೆ ಶ್ರೀಗಳು ಶಿಷ್ಯನನ್ನಾಗಿ ಸ್ವೀಕರಿಸಿ ಅನುಗ್ರಹಿಸಿದ್ದಾರೆ. ಮಠದ ಜ್ಞಾನ ಪರಂಪರೆ ವಿಶಿಷ್ಟವಾಗಿದೆ. ಇದನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ತಾಯಿ ಕೃಷ್ಣನ ಭಕ್ತೆಯಾಗಿದ್ದು, ಕೃಷ್ಣನ ಸೇವೆಗೆ ಸನ್ಯಾಸ ಸ್ವೀಕರಿಸುವುದರಿಂದ ಒಪ್ಪಿಕೊಂಡಿದ್ದಾರೆ ಅಂದಿದ್ದಾರೆ.

ಇನ್ನು ಶಿಷ್ಯ ಸ್ವೀಕಾರ ತರಾತುರಿಯಲ್ಲಿ ನಡೆಯಿತು ಅನ್ನುವುದನ್ನು ಒಪ್ಪಿಕೊಂಡಿರುವ ಪುತ್ತಿಗೆ ಹಿರಿಯಶ್ರೀಗಳು, ಪುತ್ತಿಗೆ ಮಠ ವಿಶ್ವಮಟ್ಟದಲ್ಲಿ ಧರ್ಮ ಪ್ರಚಾರ ಕಾರ್ಯ ನಡೆಸುತ್ತಿದ್ದು, 11 ದೇಶಗಳಲ್ಲಿ ಶಾಖಾ ಮಠಗಳನ್ನು ಹೊಂದಿದೆ. ಮುಂದಿನ ದಿನಗಳಲ್ಲಿ 108 ದೇಶಗಳಲ್ಲಿ ಕೃಷ್ಣ ಮಂದಿರ ನಿರ್ಮಾಣ ಸಂಕಲ್ಪ ಕೈಗೊಳ್ಳಲಾಗಿದೆ. ಹೀಗಾಗಿ ಕಾರ್ಯ ಬಾಹುಲ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಷ್ಯ ಸ್ವೀಕಾರಕ್ಕೆ ನಿರ್ಧರಿಸಲಾಯಿತು.

ಶುಭ ಮುಹೂರ್ತಕ್ಕೆ ಸೋಮವಾರ ಹೊರತುಪಡಿಸಿದರೆ ಬೇರೆ ದಿನಕ್ಕೆ ಒಂದೂವರೆ ವರ್ಷ ಕಾಯಬೇಕಾಗಿದ್ದರಿಂದ ಸರಳ ಸಮಾರಂಭದಲ್ಲಿ ಸನ್ಯಾಸ ದೀಕ್ಷೆ ಕಾರ್ಯಕ್ರಮ ನಿಗದಿಪಡಿಸಲಾಯಿತು ಎಂದಿದ್ದಾರೆ.

ಅಷ್ಟಮಠಗಳ ಯತಿಗಳ ಗೈರಿನ ನಡುವೆ ಪುತ್ತಿಗೆ ಮಠಕ್ಕೆ ಶಿಷ್ಯ ಸ್ವೀಕಾರ…!

ತುರ್ತಾಗಿ ಸನ್ಯಾಸ ದೀಕ್ಷೆ ಕಾರ್ಯಕ್ರಮ ಆಯೋಜಿಸಿದ ಕಾರಣ ಅನೇಕ ಮಠದ ಅಭಿಮಾನಿಗಳು, ಶಿಷ್ಯರಿಗೆ ಆಮಂತ್ರಣ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ಮೇ 16ರಂದು ನರಸಿಂಹ ಜಯಂತಿಯಂದು ಪುತ್ತಿಗೆ ಮೂಲ ಮಠದಲ್ಲಿ ಸಾರ್ವಜನಿಕ ಅಭಿನಂದನಾ ಹಾಗೂ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪುತ್ತಿಗೆ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.

ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್