crossorigin="anonymous"> ಮಧು ಬಂಗಾರಪ್ಪ ಕಾರ್ಯವೈಖರಿಗೆ ಸಿಎಂ ಅಸಮಾಧಾನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಧು ಬಂಗಾರಪ್ಪ ಕಾರ್ಯವೈಖರಿಗೆ ಸಿಎಂ ಅಸಮಾಧಾನ

Radhakrishna Anegundi by Radhakrishna Anegundi
18-05-24, 11 : 31 pm
in ರಾಜ್ಯ, ಟಾಪ್ ನ್ಯೂಸ್
sslc grace mark siddaramaiah upset about madhu bangarappa

sslc grace mark siddaramaiah upset about madhu bangarappa

Share on FacebookShare on TwitterWhatsAppTelegram

ಗ್ರೇಸ್ ಅಂಕದ ಕೃಪೆಗೆ ಸಿದ್ದರಾಮಯ್ಯ ಮಧು ಬಂಗಾರಪ್ಪ ವಿರುದ್ದ ಗರಂ

ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಒಂದಲ್ಲ ಒಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡೇ ಬಂದಿರುವ ಮಧು ಬಂಗಾರಪ್ಪ ವಿರುದ್ಧ ಇದೀಗ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಸರ್ಕಾರವನ್ನು ಮುಜುಗರದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶೇ 20ರಷ್ಟು ಕೃಪಾಂಕವನ್ನ ನೀಡಿ ಈ ಭಾರಿ SSLC ವಿದ್ಯಾರ್ಥಿಗಳನ್ನು ಪಾಸು ಮಾಡಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಶೇ 10ರಷ್ಟು ಕುಸಿತವನ್ನು ಕಾಣಲಾಗಿತ್ತು. ಒಂದು ವೇಳೆ ಕೃಪಾಂಕ ನೀಡದಿರುತ್ತಿದ್ರೆ ಕುಸಿತದ ಪ್ರಮಾಣ ಶೇ30ರಷ್ಟು ಇರೋದು.

siddaramaiah mng

ಆದರೆ ಶಿಕ್ಷಣ ಸಚಿವರ ಕೃಪಾಂಕದ ನಿರ್ಧಾರದಿಂದ ಇದೀಗ ಸರ್ಕಾರ ತೀವ್ರ ಮುಜುಗರವನ್ನು ಎದುರಿಸಬೇಕಾಗಿದೆ. ಫಲಿತಾಂಶದ ಪ್ರಮಾಣ ಏರಿಕೆಯಾಗಬೇಕು ಅನ್ನೋ ಕಾರಣಕ್ಕೆ ಗ್ರೇಸ್ ಅಂಕ ನೀಡಿದ್ರೆ ಪರೀಕ್ಷಾ ಗುಣಮಟ್ಟದ ಕಥೆಯೇನು ಎಂದು ಸರ್ಕಾರವನ್ನು ಶಿಕ್ಷಣ ತಜ್ಞರು ತರಾಟೆಗೆ ತೆಗೆದುಕೊಂಡಿದ್ದರು. ವಿದ್ಯಾರ್ಥಿಗಳು ಫೇಲ್ ಆಗದ ರೀತಿಯಲ್ಲಿ ಪಾಠಗಳು ನಡೆಯಬೇಕು. ಅದನ್ನು ಬಿಟ್ಟು ಗ್ರೇಸ್ ಅಂಕ ನೀಡಿದರೆ ವಿದ್ಯಾರ್ಥಿಗಳಿಗೆ ಪಿಯುಸಿಯಲ್ಲಿ ದೊಡ್ಡ ಮಟ್ಟದ ಸಮಸ್ಯೆ ಎದುರಾಗುತ್ತದೆ ಎಂದು ಆತಂಕವನ್ನೂ ವ್ಯಕ್ತಪಡಿಸಿದ್ದರು.

ಆದರೆ ಮಧು ಬಂಗಾರಪ್ಪ ಈ ಆತಂಕದ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ನನ್ನ ಇಲಾಖೆಯ ನಿರ್ಧಾರ ಸರಿಯಾಗಿದೆ ಅನ್ನುವ ರೀತಿಯಲ್ಲಿ ಮಾತನಾಡಿದ್ದರು.

ಇದನ್ನು ಓದಿ : ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಆದರೆ ಯಾವಾಗ ವಿಷಯ ಮುಖ್ಯಮಂತ್ರಿಗಳ ಕಛೇರಿ ತಲುಪಿತೋ, ಶಿಕ್ಷಣ ತಜ್ಞರು ಆತಂಕದಲ್ಲಿ ಅರ್ಥವಿದೆ ಅನ್ನೋದು ಅವರಿಗೆ ಅರಿವಾಗಿದೆ. ಈ ನಡುವೆ ಶುಕ್ರವಾರ ನಡೆದ ಸಭೆಯಲ್ಲಿ ಶಿಕ್ಷಣ ಇಲಾಖೆ ಮತ್ತು ಸಚಿವ ಮಧು ಬಂಗಾರಪ್ಪ ಅವರನ್ನು ಗ್ರೇಸ್ ಅಂಕ ನೀಡಿರುವುದರ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ನಡೆಯನ್ನು ಪ್ರಶ್ನಿಸಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

madhu bangarappa

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕುತ್ತಿದ್ದಂತೆ,  ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಗ್ರೇಸ್ ಅಂಕದ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಆದರೆ ಸಿದ್ದರಾಮಯ್ಯ ಈ ವಾದವನ್ನು ಒಪ್ಪಿಕೊಳ್ಳಲಿಲ್ಲ ಅನ್ನಲಾಗಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಶಿಕ್ಷಣ ಇಲಾಖೆಯ ನಡೆಗೆ ಬೇಸರ ಹಾಕಿದ್ದಾರೆ.

ಒಂದು ಹಂತದಲ್ಲಿ ಅಧಿಕಾರಿಗಳು ಕೊರೋನಾ ಸಮಯದಲ್ಲಿ ಗ್ರೇಸ್ ಮಾರ್ಕ್ಸ್ ಅನ್ನು ಶೇ 5 ರಿಂದ 10ಕ್ಕೆ ಏರಿಸಲಾಗಿತ್ತು. ಅದನ್ನೇ ನಾವು ಮುಂದುವರಿಸಿದ್ದೇವೆ ಅಂದಿದ್ದಾರೆ. ಈ ಉತ್ತರದಿಂದ ಕೆರಳಿದ ಸಿದ್ದರಾಮಯ್ಯ, ಈಗೆಲ್ಲಿ ಕೊರೋನಾ ಇದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ್ರಂತೆ.

ಸಭೆಯ ನಂತರ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇರೋದಿಲ್ಲ. ಈ ವರ್ಷದ ನಿರ್ಧಾರದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಶೀಘ್ರದಲ್ಲೇ ಪರೀಕ್ಷಾ ನಡಾವಳಿ ಸರಿಪಡಿಸಿಕೊಳ್ಳುವುದಾಗಿ ಹೇಳಿದರು.

ಒಟ್ಟಿನಲ್ಲಿ ಮುಂದಾಲೋಚನೆ ಮತ್ತು ದೂರಾಲೋಚನೆ ಅನ್ನುವುದು ಶಿಕ್ಷಣ ಸಚಿವರಿಗೆ ಇಲ್ಲದೇ ಹೋದ್ರೆ ಭವಿಷ್ಯದ ಪ್ರಜೆಗಳ ಭವಿಷ್ಯಕ್ಕೆ ಹೇಗೆ ಕೊಡಲಿಯೇಟು ಬೀಳುತ್ತದೆ ಅನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್