ಬೆಂಗಳೂರು : ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರ ಮುಂದಿನ ಚಿತ್ರ ಬ್ಯಾಡ್ ಮ್ಯಾನರ್ಸ್ ಚಿತ್ರದ ಮತ್ತೊಂದು ನಾಯಕಿ ಯಾರು ಅನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಈ ಹಿಂದೆ ಕೃಷ್ಣ ತುಳಸಿ ಧಾರಾವಾಹಿಯಲ್ಲಿ ನಟಿಸಿದ್ದ ಪ್ರಿಯಾಂಕ ಕುಮಾರ್ ಇದೀಗ ಅಭಿಷೇಕ್ ಅಂಬರೀಶ್ ಅವರಿಗೆ ಎರಡನೇ ನಾಯಕಿಯಾಗಿ ನಟಿಸಲಿದ್ದಾರೆ.
ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಚಿತ್ರದ ನಾಯಕಿಯಾಗಿ ಈಗಾಗಲೇ ರಚಿತಾ ರಾಮ್ ಆಯ್ಕೆಯಾಗಿದ್ದು, ಮತ್ತೊಮ್ಮೆ ನಾಯಕಿಗಾಗಿ ಹುಡುಕಾಟ ನಡೆದಿತ್ತು.

ಇದೀಗ ಮೈಸೂರು ಮೂಲದ ಪ್ರಿಯಾಂಕ ಕುಮಾರ್ ಆಯ್ಕೆಯಾಗಿದ್ದಾರೆ. ಪ್ರಿಯಾಂಕ ಈ ಹಿಂದೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕೃಷ್ಣ ತುಳಸಿಯಲ್ಲಿ ನಟಿಸಿದ್ದರು.
ಇದಾದ ಬಳಿಕ ತಮಿಳು ಕಿರುತೆರೆಯಲ್ಲಿ ಕೆಲಸ ಮಾಡಿದ್ದ ಪ್ರಿಯಾಂಕ ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.
ಬ್ಯಾಡ್ ಮ್ಯಾನರ್ಸ್ ಚಿತ್ರಕ್ಕೆ ಚರಣ್ ರಾಜ್ ಸಂಗೀತವಿದ್ದು, ಶೇಖರ್ ಛಾಯಾಗ್ರಹಣ ಜವಾಬ್ದಾರಿ ಹೊತ್ತಿದ್ದು ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ
Discussion about this post