crossorigin="anonymous"> ಏನಿದು ಆರೋಗ್ಯ ಸಚಿವರೇ..? ಸೋಂಕು ಗೆದ್ದು ತಿಂಗಳು ಕಳೆದಿಲ್ಲ ಆಗ್ಲೇ ಲಸಿಕೆ ಪಡೆದ ಶ್ವೇತಾ ಚೆಂಗಪ್ಪ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಏನಿದು ಆರೋಗ್ಯ ಸಚಿವರೇ..? ಸೋಂಕು ಗೆದ್ದು ತಿಂಗಳು ಕಳೆದಿಲ್ಲ ಆಗ್ಲೇ ಲಸಿಕೆ ಪಡೆದ ಶ್ವೇತಾ ಚೆಂಗಪ್ಪ…!

Radhakrishna Anegundi by Radhakrishna Anegundi
28-05-21, 3 : 59 pm
in ರಾಜ್ಯ
shwetha chengappa
Share on FacebookShare on TwitterWhatsAppTelegram

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಲಸಿಕೆ ಕುರಿತಂತೆ ಕಳ್ಳಾಟ ನಡೆಯುತ್ತಿದೆಯೇ ಅನ್ನುವ ಅನುಮಾನಗಳು ಶುರುವಾಗಿದೆ. ಸಮ್ ಥಿಂಗ್ ರಾಂಗ್ ಅನ್ನಿಸುವ ಬೆಳವಣಿಗೆಗಳು ನಡೆಯುತ್ತಿದ್ದು, ಜನ ಸಾಮಾನ್ಯರಿಗೆ ಶೀಘ್ರದಲ್ಲೇ ಲಸಿಕೆ ಸಿಗೋ ಸಾಧ್ಯತೆಗಳಿಲ್ಲ. ಪರಿಸ್ಥಿತಿ ನೋಡಿದರೆ ಮೂರನೇ ಅಲೆ ಮಕ್ಕಳಿಗಲ್ಲ, ಗ್ರಾಮೀಣ ಪ್ರದೇಶ ಹಾಗೂ ರಾಜ್ಯದ ಬಡವರಿಗೆ ಅಪಾಯ ಅನ್ನೋದು ಗ್ಯಾರಂಟಿ. ಯಾಕಂದ್ರೆ ಕಾಸಿರುವ ಮಂದಿ ಲಸಿಕೆ ಪಡೆಯುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಬಡವರು ಬಿಡಿ ಕಾಸು ಉಳ್ಳವರಿಗೂ ಲಸಿಕೆ ಸಿಗುತ್ತಿಲ್ಲ.

ಈ ನಡುವೆ ಕೊರೋನಾ ಲಸಿಕೆ ಪಡೆಯುವ ಕುರಿತಂತೆ ಪದೇ ಪದೇ ನಿಯಮಗಳು ಬದಲಾಗುತ್ತಿದೆ. ಇದೀಗ ಕೋವಿಶೀಲ್ಡ್ ಲಸಿಕೆಯನ್ನು ಎರಡನೇ ಡೋಸ್ ಪಡೆಯಲು ಸಾಕಷ್ಟು ಕಾಲಾವಕಾಶ ನೀಡಲಾಗಿದೆ. ಈ ಹಿಂದೆ ಹೀಗಿರಲಿಲ್ಲ. ಇನ್ನು ಕೊರೋನಾ ಸೋಂಕು ತುತ್ತಾಗಿರುವ ಮಂದಿ 14 ದಿನಗಳ ಬಳಿಕ ಲಸಿಕೆ ಪಡೆಯಬಹುದು ಎನ್ನಲಾಗಿತ್ತು. ಆದರೆ ಈಗ ಒಂದು ವೇಳೆ ಸೋಂಕಿಗೆ ತುತ್ತಾಗಿದ್ರೆ ಮೂರು ತಿಂಗಳ ಬಳಿಕ ಲಸಿಕೆ ಪಡೆಯಿರಿ ಎಂದು ಸೂಚಿಸಲಾಗಿದೆ.

ಇದನ್ನೂ ಓದಿ : ಕೊರೋನಾ ಇಲ್ಲ ಅಂತಾ ಉಡಾಫೆ ಮಾಡಬೇಡಿ… ನಾನು ಉಸಿರಾಡಲು ಪಟ್ಟ ಕಷ್ಟ ನನಗೆ ಗೊತ್ತು – ಶ್ವೇತಾ ಚೆಂಗಪ್ಪ

ಹಾಗಿದ್ದರೂ ನಟಿ ಶ್ವೇತ ಚೆಂಗಪ್ಪ ಲಸಿಕೆ ಪಡೆದಿರುವುದು ಅಚ್ಚರಿಗೆ ಕಾರಣವಾಗಿದೆ. ಮಾತ್ರವಲ್ಲದೆ ಸೋಂಕಿಗೆ ತುತ್ತಾದವರು ತಮ್ಮ ಆರೋಗ್ಯದ ಕುರಿತಂತೆ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ.

ಇದನ್ನು ಓದಿ : ಮಜಾ ಟಾಕೀಸ್ ತಂಡಕ್ಕೆ ಕೊರೋನಾ ಆತಂಕ – ಶ್ವೇತಾ ಚೆಂಗಪ್ಪಗೆ ಕೊರೋನಾ ಪಾಸಿಟಿವ್

ಕೊರೋನಾ ಸೋಂಕು ತಗುಲಿದ ಬಳಿಕ 21 ದಿನಗಳ ಕ್ವಾರಂಟೈನಲ್ಲಿದ್ದ ಶ್ವೇತಾ ಚೆಂಗಪ್ಪ ಎಪ್ರಿಲ್ 29 ರಂದು ತಮಗೆ ನೆಗೆಟಿವ್ ರಿಪೋರ್ಟ್ ಬಂದಿರುವ ಬಗ್ಗೆ ಹೇಳಿದ್ದರು. ಎಪ್ರಿಲ್ 30ರಂದು ಇನ್ಸ್ಟಾದಲ್ಲಿ ಲೈವ್ ಬಂದಿದ್ದ ಶ್ವೇತಾ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

shwetha chengappa

ಈ ನಡುವೆ ಕೊರೋನಾದಿಂದ ಗುಣಮುಖರಾದವರು ಮೂರು ತಿಂಗಳ ತನಕ ಹಾಕಿಸಿಕೊಳ್ಳುವಂತಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಹಾಗಿದ್ದ ಮೇಲೆ ಶ್ವೇತಾ ಅವರು ಮೂರು ತಿಂಗಳ ಒಳಗಾಗಿ ಲಸಿಕೆ ಹಾಕಿಸಿಕೊಂಡಿದ್ದು ಹೇಗೆ ಅನ್ನುವ ಪ್ರಶ್ನೆ ಎದ್ದಿದೆ. ಕೋವಿನ್ ನಲ್ಲಿ ಹೆಸರು ರಿಜಿಸ್ಟರ್ ಮಾಡಿಕೊಂಡವರಿಗೆ ಇನ್ನೂ ಲಸಿಕೆ ಸಿಕ್ಕಿಲ್ಲ ಹಾಕಿದ್ದ ಈ ಸೆಲೆಬ್ರೆಟಿಗಳಿಗೆ ಲಸಿಕೆ ಸಿಗುತ್ತಿರೋದು ಹೇಗೆ ಅನ್ನೋದಕ್ಕೆ ಆರೋಗ್ಯ ಸಚಿವ ಸುಧಾಕರ್ ಅವರೇ ಉತ್ತರಿಸಬೇಕು.

ಅಷ್ಟೇ ಅಲ್ಲ, ಕೊರೋನಾ ಸೋಂಕು ಬಂದವರು ಮೂರು ತಿಂಗಳ ತನಕ ಲಸಿಕೆ ಹಾಕಿಸಿಕೊಳ್ಳೋದು ಬೇಡ ಅಂದಿದ್ದಾರೆ. ಸರ್ಕಾರವೂ ಇದಕ್ಕೆ ಹಸಿರು ಮುದ್ರೆ ಒತ್ತಿದೆ. ಹಾಗಿದ್ದ ಮೇಲೆ ಶ್ವೇತಾ ಅವರು ಮೂರು ತಿಂಗಳ ಮುಂಚೆ ಲಸಿಕೆ ಹಾಕಿಸಿಕೊಳ್ಳಲು ಕಾರಣವೇನು ಅನ್ನುವುದಕ್ಕೂ ಆರೋಗ್ಯ ಸಚಿವರು ಉತ್ತರಿಸಬೇಕು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ವೇತಾ ಚೆಂಗಪ್ಪ, ನಾನು ವೈದ್ಯರ ಸಲಹೆಯ ಮೇರೆಗೆ ಹಾಕಿಸಿಕೊಂಡಿದ್ದೇನೆ. ನೀವು ನಿಮ್ಮ ವೈದ್ಯರ ಬಳಿ ಕೇಳಿ ಅಂದಿದ್ದಾರೆ.     

View this post on Instagram

A post shared by Swetha Changappa (@swethachangappa)

Tags: shwetha chengappa
Share6TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್