ಹೈದರಾಬಾದ್ : ತೆಲಂಗಾಣದ ಸ್ಥಳೀಯ ಬಿಜೆಪಿ ನಾಯಕನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್ ಮಾಡಿ ಕೆಲ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಮೃತರನ್ನು ಬಿಜೆಪಿ ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಮೇದಕ್ ಜಿಲ್ಲೆಯ ಎಸ್ ಪಿ ಚಂದನಾ ದೀಪ್ತಿ ದುಷ್ಕರ್ಮಿಗಳು ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಅವರದ್ದೇ ಕಾರಿನಲ್ಲಿ ಕೂಡಿ ಹಾಕಿ ಕಾರಿಗೆ ಬೆಂಕಿ ಹಾಕಿದ್ದಾರೆ. ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿದ ಸ್ಥಳೀಯರು ಅಲ್ಲಿಗೆ ಹೋದಾಗ, ಶ್ರೀನಿವಾಸ್ ಮೃತದೇಹ ಪತ್ತೆಯಾಗಿದೆ ಅಂದಿದ್ದಾರೆ.
ಇದೀಗ ಶ್ರೀನಿವಾಸ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದ್ದು, ಐಪಿಸಿ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
V Srinivas Prasad, former Bharatiya Janata Party (BJP) district vice-president and businessman, was found dead in his burnt car’s trunk in Telangana’s Medak district
Discussion about this post