crossorigin="anonymous"> ವಯಸ್ಸು 77..ಆದರೂ ಬತ್ತದ ಉತ್ಸಾಹ... ಸಾಂಸ್ಕೃತಿಕ ನಗರಿಯ ಟ್ರಾಫಿಕ್ ವಾರ್ಡನ್ ಕಥೆಯಿದು... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಯಸ್ಸು 77..ಆದರೂ ಬತ್ತದ ಉತ್ಸಾಹ… ಸಾಂಸ್ಕೃತಿಕ ನಗರಿಯ ಟ್ರಾಫಿಕ್ ವಾರ್ಡನ್ ಕಥೆಯಿದು…

Radhakrishna Anegundi by Radhakrishna Anegundi
07-04-21, 6 : 39 am
in ಟಾಪ್ ನ್ಯೂಸ್
mys traffic wardan 1
Share on FacebookShare on TwitterWhatsAppTelegram

ಮೈಸೂರು : ಸಂಜೆ ಗಡಿಯಾರದ ಮುಳ್ಳು 5 ಗಂಟೆ ಎಂದು ತೋರಿಸಿದರೆ ಸಾಕು, ಮೈಸೂರಿನ ಕೌಟಿಲ್ಯ ಸರ್ಕಲ್ ನಲ್ಲಿ ಟ್ರಾಫಿಕ್ ವಾರ್ಡನ್ ಒಬ್ಬರು ಪ್ರತ್ಯಕ್ಷರಾಗಿ ಬಿಡುತ್ತಾರೆ. ಟ್ರಾಫಿಕ್ ಪೊಲೀಸರ ಸಮವಸ್ತ್ರವನ್ನೇ ಹೋಲುವ ಸಮವಸ್ತ್ರದೊಂದಿಗೆ ಹಾಜರಾಗುವ ಇವರು 7 ಗಂಟೆಯ ತನಕ ಟ್ರಾಫಿಕ್ ನಿಯಂತ್ರಣ ಕಾರ್ಯನಿರ್ವಹಿಸುತ್ತಾರೆ. ಈ ವೇಳೆ ಒಂದೇ ಒಂದು ಬ್ರೇಕ್ ಪಡೆಯೋದಿಲ್ಲ.

ಇನ್ನು ಕೊರೋನಾ ಸಮಯದ 9 ತಿಂಗಳಲ್ಲಿ ಸಂಜೆ 5 ರಿಂದ 7ರವರೆಗೆ ಮಾತ್ರವಲ್ಲದೆ ಬೆಳಗ್ಗೆಯೂ ಬಂದು ಕೆಲಸ ನಿರ್ವಹಿಸಿದ್ದರು.

ಅಂದ ಹಾಗೇ ಇವರ ಹೆಸರು ಮಹೇಶ್ವರ, ಕಳೆದ ಮೂರು ದಶಕಗಳಿಂದ ಸಾಂಸ್ಕೃತಿಕ ನಗರಿಯಲ್ಲಿ ಟ್ರಾಫಿಕ್ ವಾರ್ಡನ್ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯವೈಖರಿಯನ್ನು ನೋಡಿದ್ರೆ ಅನುಭವಿ ಪೊಲೀಸ್ ಅಧಿಕಾರಿಗಳೇ ತಲೆ ಸುತ್ತಿ ಬೀಳಬೇಕು, ಇಳಿ ವಯಸ್ಸಿನಲ್ಲೂ ಇವರ ತಾಕತ್ತು ಪುಟಿದೇಳುವ ಚಿಲುಮೆ.

A Maheshwara

ಮಹೇಶ್ವರ ಅವರು ಹಲವು ವರ್ಷಗಳ ಕಾಲ ಪೇಪರ್ ಏಜೆಂಟ್ ಆಗಿ ಕೆಲಸ ಮಾಡಿದ್ದರು. ಬಳಿಕ ವಿಮಾ ಕಂಪನಿಯೊಂದಕ್ಕೆ ಸೇರಿಕೊಂಡರು. ಈ ನಡುವೆ 1984ರಲ್ಲಿ ಮೈಸೂರಿನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಾಮಮೂರ್ತಿಯವರು ದಸರಾ ಭದ್ರತೆ ಸಲುವಾಗಿ ಸ್ವಯಂ ಸೇವಕರನ್ನು ಬಯಸಿದ್ದರು. ಈ ಸಂದರ್ಭದಲ್ಲಿ ರಾಮಮೂರ್ತಿ ಕೂಡಾ ಪೊಲೀಸರೊಂದಿಗೆ ದಸರೆಯ ಭದ್ರತೆಯ ಕೆಲಸ ನಿರ್ವಹಿಸಿದ್ದರು. ಹೀಗೆ ಪೊಲೀಸರೊಂದಿಗೆ ಕಾರ್ಯನಿರ್ವಹಿಸಿದ ಅನುಭವ ಪಡೆದ ನಾನ್ಯಾಕೆ ಪೊಲೀಸರ ಕೆಲಸಕ್ಕೆ ಸಹಕಾರ ನೀಡಬಾರದು ಎಂದು ಯೋಚಿಸಿದರು. ಅದರಂತೆ ಮೈಸೂರು ನಗರದ ಬೇರೆ ಬೇರೆ ಪ್ರಮುಖ ಸರ್ಕಲ್ ಗಳಲ್ಲಿ ಟ್ರಾಫಿಕ್ ನಿಯಂತ್ರಿಸುವ ಜವಾಬ್ದಾರಿಯನ್ನು ಸ್ವಯಂ ಪ್ರೇರಿತರಾಗಿ ವಹಿಸಿಕೊಂಡರು,

ಕಳೆದ ಕೆಲವು ವರ್ಷಗಳಿಂದ ಕೌಟಿಲ್ಯ ಸರ್ಕಲ್ ನಲ್ಲೇ ನಿಂತು ಕಾರ್ಯನಿರ್ವಹಿಸುತ್ತಿದ್ದಾರೆ.

mys traffic wardan 1

ಇನ್ನು ತಾವ್ಯಾಕೆ ಈ ಕೆಲಸಕ್ಕೆ ಬಂದೆ ಅನ್ನುವುದನ್ನು ವಿವರಿಸುವ ಮಹೇಶ್ವರ್, ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಅನ್ನುವುದು ನನ್ನ ಹಂಬಲವಾಗಿತ್ತು. ಈ ವೇಳೆ ಮೈಸೂರು ದಸರೆಯಲ್ಲಿ ಸಿಕ್ಕ ಅವಕಾಶ ಸಮಾಜ ಸೇವೆಗೊಂದು ಒಳ್ಳೆಯ ದಾರಿ ಅನ್ನಿಸಿತು. ಬಳಿಕ ಪೊಲೀಸರಿಗೆ ನೆರವಾಗುವ ಮೂಲಕ ಈ ಸೇವೆಯನ್ನು ಮುಂದುವರಿಸಿದ್ದೇನೆ ಅನ್ನುತ್ತಾರೆ.

ಆದರೆ ಇವರು 1984ರ ಹೊತ್ತಿಗೆ ಟ್ರಾಫಿಕ್ ನಿಯಂತ್ರಿಸುವ ಕೆಲಸ ಪ್ರಾರಂಭಿಸಿದಾಗ ಟ್ರಾಫಿಕ್ ವಾರ್ಡನ್ ಅನ್ನೋ ಕಾನ್ಸ್ ಪ್ಟ್ ಇರಲಿಲ್ಲ. 1991 -92ರ ಹೊತ್ತಿಗೆ ಟಾಫಿಕ್ ವಾರ್ಡನ್ ಪರಿಚಯವಾಗಿದ್ದು, ಆದರೆ ಅದಕ್ಕಿಂತ ಮುಂಚೆಯೇ ಟ್ರಾಫಿಕ್ ವಾರ್ಡನ್ ಆಗಿದ್ದ ಹಿರಿಮೆ ಇವರದ್ದು. ಈ ಕಾರಣದಿಂದ ಇವರಿಗೂ ಇಂದಿಗೂ ಎಂದೆಂದಿಗೂ ಹಿರಿಯ ಟ್ರಾಫಿಕ್ ವಾರ್ಡನ್.

Tags: Mysoreಮೈಸೂರು
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್