crossorigin="anonymous"> ಬ್ಯಾಂಕ್ ಹಣವನ್ನೇ ಲೂಟಿ ಹೊಡೆದ ಯೂನಿಯನ್ ಬ್ಯಾಂಕ್ ( union bank) ಸ.ಮ್ಯಾನೇಜರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬ್ಯಾಂಕ್ ಹಣವನ್ನೇ ಲೂಟಿ ಹೊಡೆದ ಯೂನಿಯನ್ ಬ್ಯಾಂಕ್ ( union bank) ಸ.ಮ್ಯಾನೇಜರ್

Radhakrishna Anegundi by Radhakrishna Anegundi
10-11-23, 8 : 17 am
in ಟಾಪ್ ನ್ಯೂಸ್, ಕ್ರೈಮ್
union-bank-assistant-manager-archana-betageri-arrested-haveri-kurubagonda
Share on FacebookShare on TwitterWhatsAppTelegram

ಯೂನಿಯನ್ ಬ್ಯಾಂಕ್ ( union bank) ಇದೀಗ ಗ್ರಾಹಕರ ನಂಬಿಕೆ ಗಳಿಸೋದು ಹೇಗೆ

ಹಾವೇರಿ : ಯೂನಿಯನ್ ಬ್ಯಾಂಕ್‌ನಲ್ಲಿದ್ದ ( union bank Kurubagonda)  ಖಾತೆದಾರರ ಕೋಟಿ ಕೋಟಿ ಹಣ, ಚಿನ್ನಾಭರಣಗಳು ನಾಪತ್ತೆಯಾಗಿರುವ ಪ್ರಕರಣ ಕುರಿತಂತೆ  ಬ್ಯಾಂಕ್ ಸಹಾಯಕ ವ್ಯವಸ್ಥಾಪಕಿಯನ್ನು ಹಾವೇರಿ ಸಿ.ಇ.ಎನ್. ಪೊಲೀಸರು ಬಂಧಿಸಿದ್ದಾರೆ.

ಬ್ಯಾಂಕ್ ನಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಸಹಾಯಕ ಮ್ಯಾನೇಜರ್ ಅರ್ಚನಾ ಬೆಟಗೇರಿ ( archana betageri ), ದಿನಗೂಲಿ ನೌಕರ ಶಾಂತಪ್ಪ ಯಲಗಚ್ಚ, ಬಿಸಿನೆಸ್ ಕರೆಸ್ಪಾಂಡೆಂಟ್ ಪ್ರವೀಣ ಚಿಕ್ಕಲಿಂಗದಹಳ್ಳಿ ವಿರುದ್ಧ ಬ್ರಾಂಚ್ ಮ್ಯಾನೇಜರ್ ರವಿರಾಜ್ ದೂರು ನೀಡಿದ್ದರು.

ಕುರುಬಗೊಂಡ ಶಾಖೆಯ ಯೂನಿಯನ್ ಬ್ಯಾಂಕ್ ನಲ್ಲಿ ಅರ್ಚನಾ ಬೆಟಿಗೇರಿ ಕಳೆದ ಎರಡುವರೆ ವರ್ಷಗಳಿಂದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ವಂತ ಲಾಭಕ್ಕಾಗಿ ಗ್ರಾಹಕರಿಗೆ ಸಂಬಂಧಿಸಿದ 1,12,78,920ರೂ. ನಗದು ಮತ್ತು 49,47,792ರೂ. ಮೌಲ್ಯದ ಚಿನ್ನಾಭರಣ ಸೇರಿ ಒಟ್ಟು 1.62ರೂ. ಕೋಟಿಯನ್ನ ವಂಚಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿತ್ತು.

ಪ್ರಕರಣದ ವಿವರ

ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರ್ಚನಾ ಗ್ರಾಹಕರಿಗೆ ಸಂಬಂಧಿಸಿದ 1,12,78,920 ರೂಪಾಯಿ ನಗದು ಹಾಗೂ 49,47,792 ಮೌಲ್ಯದ ಚಿನ್ನಾಭರಣ ಹೀಗೆ ಒಟ್ಟು 1 ಕೋಟಿ 62 ಲಕ್ಷ ರೂಪಾಯಿ ವಂಚನೆ ಮಾಡಿದ್ದರು.

ಇದನ್ನೂ ಓದಿ : ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

ಬ್ಯಾಂಕ್ ಗೆ ದುಡ್ಡು ಕಟ್ಟಲು ಬಂದ 9 ಗ್ರಾಹಕರಿಂದ 81,45,420 ರೂಪಾಯಿ ಪಡೆದುಕೊಂಡು, ನಗದು ರಸೀದಿಗಳಿಗೆ ಹಾಗೂ ಡೆಪಾಸಿಟ್ ಸರ್ಟಿಫಿಕೆಟ್ ಗೆ ಸಹಿ ಸೀಲು ಮಾಡಿ ಕೊಟ್ಟಿದ್ದರು. ಆದರೆ ಅದನ್ನು ಖಾತೆಗಳಿಗೆ ಜಮಾ ಮಾಡದೆ ಅರ್ಚನಾ ಈ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು. 13 ಮಂದಿ ಗ್ರಾಹಕರು ಸಾಲಕ್ಕಾಗಿ ಬ್ಯಾಂಕ್ ನಲ್ಲಿ ಚಿನ್ನಾಭರಣ ಒತ್ತೆ ಇಟ್ಟು ಸಾಲ ಪಡೆದಿದ್ದರು. ಆ ಚಿನ್ನಾಭರಣಗಳನ್ನು ಕೂಡಾ ಅರ್ಚನಾ ದೋಚಿರುವ ಆರೋಪ ಕೇಳಿ ಬಂದಿದೆ.

union bank of india logo

ಮುತ್ತಣ್ಣ ಅನ್ನುವವರು ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ಶಿವಕುಮಾರ್ ಎನ್ನುವವರು 10 ಲಕ್ಷ ಹಣ ಕಳಕೊಂಡಿದ್ದಾರೆ. ಚಂದ್ರು ಎನ್ನುವವರು 6 ಲಕ್ಷ ಹಣ ಕಳಕೊಂಡಿದ್ದಾರೆ. ಭೂಮಿಕಾ ಸ್ತ್ರೀ ಶಕ್ತಿ ಸಂಘದ ಲತಾ, ಸ್ಥಳೀಯ ಮೊಹಮ್ಮಗೌಸ್ ಹೀಗೆ ಹಣ ಕಳೆದುಕೊಂಡವರ ಪಟ್ಟಿ ಬೆಳೆದಿತ್ತು.

ಅಷ್ಟು ಮಾತ್ರವಲ್ಲದೆ ಕುರುಬಗೊಂಡ ಬ್ಯಾಂಕ್ ಆವರಣದಲ್ಲಿರುವ ಎಟಿಎಂ ಕೇಂದ್ರದಿಂದ 31,35,500 ರೂಪಾಯಿ ಹಣವನ್ನು ಪ್ರವೀಣ್ ಮತ್ತು ಶಾಂತಪ್ಪ ಅನ್ನುವವರೊಂದಿಗೆ ಸೇರಿ ದೋಚಿದ್ದಾರೆ ಅನ್ನಲಾಗಿದೆ.

Bank assistant manager arrested in Haveri district for fraud : CEN Police arrest Union Bank of Kurubagonda’s assistant branch manager in Haveri district for defrauding customers of ₹1.62 crore in cash

Tags: archana betageriFEATUREDKurubagonda
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್