crossorigin="anonymous"> unparliamentary words : ನಿತ್ಯದ ಬದುಕಲ್ಲಿ ಬಳಸುವ ಪದಗಳು ಆಸಂಸದೀಯವಂತೆ : ಪ್ರತಿಪಕ್ಷಗಳು ಇನ್ಮುಂದೆ ಬೈಯೋ ಹಾಗಿಲ್ಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

unparliamentary words : ನಿತ್ಯದ ಬದುಕಲ್ಲಿ ಬಳಸುವ ಪದಗಳು ಆಸಂಸದೀಯವಂತೆ : ಪ್ರತಿಪಕ್ಷಗಳು ಇನ್ಮುಂದೆ ಬೈಯೋ ಹಾಗಿಲ್ಲ

Radhakrishna Anegundi by Radhakrishna Anegundi
14-07-22, 5 : 43 pm
in ದೇಶ
unparliamentary-words-jumlajeevi-dictatorial-among-long-list-of-words-now-banned-in-parliament
Share on FacebookShare on TwitterWhatsAppTelegram

ಜುಲೈ 18 ರಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನಕ್ಕೂ ಮುನ್ನವೇ ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಸಿದ್ದತೆಗಳಾಗಿದೆ. ಪಟ್ಟಿ ನೋಡಿದರೆ ಸಂಸತ್ ನಲ್ಲಿ ಮಾತನಾಡುವುದೇ ಕಷ್ಟ. ( unparliamentary words )

ನವದೆಹಲಿ : ಕೋವಿಡ್ ಸ್ಪ್ರೆಡರ್, ( covid spreader ) ಭ್ರಷ್ಟ, (corrupt) ಅಸಮರ್ಥ, ಸರ್ವಾಧಿಕಾರಿ, ಕತ್ತೆ, ನಾಟಕ ( drama ) ಹೀಗಾಗಿ ನೂರಾರು ಪದಗಳನ್ನು ಬಳಸುವಂತಿಲ್ಲ ಅವೆಲ್ಲವೂ ಅಸಂಸದೀಯ ( unparliamentary words ) ಪದಗಳು ಎಂದು ಲೋಕಸಭೆ ಸೆಕ್ರಟೇರಿಯಟ್ ಬಿಡುಗಡೆಗೊಳಿಸಿದ ಪುಸ್ತಕದಲ್ಲಿ ಹೇಳಲಾಗಿದೆ.

ಒಂದು ವೇಳೆ ಈ ಅಸಂಸದೀಯ ಪದಗಳನ್ನು ಬಳಸಿದರೆ ಲೋಕಸಭೆಯ ನಿಯಮ 380ರ ಪ್ರಕಾರ ಸ್ಪೀಕರ್ ಅವರನ್ನು ಕಲಾಪದಿಂದ ಹೊರಗೆ ಹಾಕುತ್ತಾರೆ ಎಂದು ಇದೇ ಪುಸ್ತಕದಲ್ಲಿ ಮಾಹಿತಿ ನೀಡಲಾಗಿದೆ. ಜೊತೆಗೆ ಸ್ಪೀಕರ್ ಅಥವಾ ರಾಜ್ಯಸಭೆಯ ಅಧ್ಯಕ್ಷರು ಅ ಪದಗಳನ್ನು ತೆಗೆದು ಹಾಕುತ್ತಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ : national education policy : ಮೊಟ್ಟೆ ಬೇಡ… ಮಕ್ಕಳಿಗೆ ಶೂ ಬೇಡ : ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ಕರಡಿನಲ್ಲಿ ಸೂಚನೆ

ಇನ್ನು ಈ ಕ್ರಮಕ್ಕೆ ಕಾಂಗ್ರೆಸ್ ಮತ್ತು ಟಿಎಂಸಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಮೆಹುವಾ ಮೊಯಿತ್ರಾ ಒಂದು ಹೆಜ್ಜೆ ಮುಂದೆ ಹೋಗಿ ನಾವು ಈ ಪದಗಳನ್ನು ಬಳಸುತ್ತೇವೆ, ಅಮಾನತು ಮಾಡಿ ಅಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಬಿಜೆಪಿ ಭಾರತವನ್ನು ಹೇಗೆ ನಾಶ ಮಾಡುತ್ತದೆ ಅನ್ನುವುದು ಇದರಿಂದ ಗೊತ್ತಾಗುತ್ತದೆ. ಪ್ರತಿಪಕ್ಷಗಳು ಬಳಸುತ್ತಿದ್ದ ಶಬ್ಧವನ್ನೇ ಹೆಕ್ಕಿ ನಿಷೇಧಿಸಲಾಗಿದೆ, ಇದು ನಾಚಿಕೆಗೇಡು ಅಂದಿದ್ದಾರೆ.

ಹಾಗಾದ್ರೆ ಯಾವುದೇ ಅಸಂಸದೀಯ ಪದಗಳು ಎಂದು ನೋಡುವುದಾದರೆ ರಕ್ತಪಾತ, ರಕ್ತಸಿಕ್ತ, ದ್ರೋಹ, ವಂಚನೆ, ಚಮ್ಚಾ, ಚಮ್ಚಾಗಿರಿ, ಚೇಲಾನ್, ಬಾಲಿಶ, ಹೇಡಿ, ಕ್ರಿಮಿನಲ್, ಮೊಸಳೆ ಕಣ್ಣೀರು,ಅವಮಾನ, ಕತ್ತೆ, ನಾಟಕ, ಕಣ್ಣೊರೆಸುವ ತಂತ್ರ, ಗೂಂಡಾಗಿರಿ, ಅಸಮರ್ಥ, ಸುಳ್ಳು, ಗದ್ದಾರ್, ಗಿರ್ಗಿಟ್, ಗಢಿಯಾಲಿ ಅಂಸು, ಅಪಮಾನ್, ಅಸತ್ಯ, ಅಹಂಕಾರ, ಕಾಲಾ ದಿನ್, ಕಾಲಾ ಬಜಾರ್, ದಂಗ, ದಲಾಲ್, ದಾದಾಗಿರಿ, ಬೆಚಾರ, ಬಾಯ್ಕಟ್, ಲಾಲಿಪಪ್, ಸಂವೇದನಾ ಹೀನ್, ಸರ್ವಾದಧಿಕಾರಿ, ಶಕುನಿ, ತಾನಾಶಾಹಿ, ಜೈಚಂದ್, ವಿನಾಶ್ ಪುರುಷ್, ಖೂನ್ ಸೇ ಖೇತಿ ಹೀಗೆ ಸಾವಿರಾರು ಪದಗಳನ್ನು ಹೇಳಲಾಗಿದೆ.

ಕೆಲವೊಂದು ಪದಗಳು ಈ ಕೆಳಗಿನಂತಿದೆ

‘jumlajeevi’, ‘baal buddhi’, ‘Covid spreader’, ‘Snoopgate’, ‘ashamed’, ‘abused, ‘betrayed’, ‘corrupt’, ‘drama’, ‘hypocrisy’, ‘incompetent’, ‘Shakuni’, ‘dictatorial’, ‘taanashah’, ‘taanashahi’, ‘Jaichand’, ‘vinash purush’, ‘Khalistani’ and ‘khoon se kheti’, ‘dohra charitra’, ‘nikamma’, ‘nautanki’, ‘dhindora peetna’, ‘behri sarkar’

‘bloodshed’, ‘bloody’, ‘betrayed’, ‘ashamed’, ‘abused’, ‘cheated, ‘chamcha’, ‘chamchagiri’, ‘chelas’, ‘childishness’, ‘corrupt’, ‘coward’, ‘criminal’, ‘crocodile tears’.

‘disgrace’, ‘donkey’, ‘drama’, ‘eyewash’, ‘fudge’, ‘hooliganism’, ‘hypocrisy’, ‘incompetent’, ‘mislead’, ‘lie’, ‘untrue’

‘anarchist’, ‘gaddar’, ‘girgit’, ‘goons’, ‘ghadiyali ansu’, ‘apmaan’, ‘asatya’, ‘ahankaar’, ‘corrupt’, ‘kala din’, ‘kala bazaari’,  ‘khareed farokht’.

‘danga’, ‘dalal’, ‘daadagiri’, ‘dohra charitra’, ‘bechara’, ‘bobcut’, ‘lollypop’, ‘vishwasghat’, ‘samvedanheen’, ‘foolish’, ‘pitthu’, ‘behri sarkar’ and ‘sexual harassment’

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು : ನಿವೃತ ಪೊಲೀಸ್ ಅಧಿಕಾರಿ ದಂಪತಿ ಬಂಧನ

ಗಂಡ ಹೆಂಡತಿ ಸೇರಿ ಪ್ರಧಾನಿಯ ಹತ್ಯೆಗೆ ಸಂಚು ರೂಪಿಸಿದ್ದರು. 2047ಕ್ಕೆ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ಜಾರಿಗೊಳಿಸೋದು ಇವರ ಗುರಿಯಂತೆ

ಬಿಹಾರ : ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾರ್ಖಂಡ್ ನ ನಿವೃತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಹಾಗೂ ಆತನ ಪತ್ನಿ ಅಥರ್ ಪರ್ವೇಜ್ ಎಂದು ಗುರುತಿಸಲಾಗಿದೆ

ಬಿಹಾರ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆಯಲ್ಲಿ ಜುಲೈ 11 ರಂದು ಈ ಕಾರ್ಯಾಚರಮೆ ನಡೆಸಲಾಗಿತ್ತು ಬಿಹಾರದ ನಯಾ ಟೋಲಾ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಬಂಧಿತರಿಂದ PFI ಸಂಘಟನೆಯ ಕರ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜುಲೈ 12 ರಂದು ಪ್ರಧಾನಿ ನರೇಂದ್ಕರ ಮೋದಿಯವರ ಪಾಟ್ನಾ ಪ್ರವಾಸ ನಿಗದಿಯಾಗಿತ್ತು. ಈ ವೇಳೆ ಅವರನ್ನು ಮುಗಿಸಲು ಹಂತಕರು ಯೋಜನೆ ರೂಪಿಸಿದ್ದರು. ಈ ಸಲುವಾಗಿ ಜುಲೈ 6 ಮತ್ತು ಜುಲೈ 7 ರಂದು ಸಭೆಗಳನ್ನು ನಡೆಸಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬಂಧಿತ ದಂಪತಿ ದೇಶ ವಿರೋಧಿ ಕಾರ್ಯಕ್ಕಾಗಿ ಪಾಕ್, ಬಾಂಗ್ಲಾ ಮತ್ತು ಟರ್ಕಿಯಿಂದ ಹಣ ಪಡೆಯುತ್ತಿದ್ದರು. 2047ರ ಹೊತ್ತಿಗೆ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ತರುವುದು ಇವರ ಗುರಿಯಾಗಿತ್ತು ಅನ್ನುವುದು ತನಿಖೆ ವೇಳೆ ಗೊತ್ತಾಗಿದೆ, ಇವರು PFI ಸಂಘಟನೆ ಜೊತೆ ಸಂಪರ್ಕ ಹೊಂದಿದ್ದು, ಈ ಹಿಂದೆ SIMIಯೊಂದಿಗೆ ಗುರುತಿಸಿಕೊಂಡಿದ್ದರು ಅನ್ನಲಾಗಿದೆ. ಇದೇ ಪರ್ವೆಜ್ ಸಹೋದರ 2001-02ರಲ್ಲಿ ಸಿಮಿ ಸಂಘಟನೆ ನಿಷೇಧ ಬಳಿಕ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಈ ದಂಪತಿ ಕೋಮು ಗಲಭೆಗೆ ಪ್ರಚೋದನೆ ಹಾಗೂ ಯುವಕರಿಗೆ ಕತ್ತಿ ಚಾಕು ಬಳಕೆಯ ತರಬೇತಿ ನೀಡುತ್ತಿದ್ದರು ಅನ್ನುವ ಆರೋಪವನ್ನೂ ಎದುರಿಸುತ್ತಿದ್ದಾರೆ.

Tags: MAIN
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್