ಉತ್ತರ ಪ್ರದೇಶ : ಹಿಂದೂ ಸಂಘಟನೆಗಳ ಪ್ರಮುಖ ನಾಯಕರ ಹತ್ಯೆಗೆ ಸ್ಕೆಚ್ ಹಾಕಲಾಗುತ್ತಿದೆ ಅನ್ನುವ ಆತಂಕಕಾರಿ ಮಾಹಿತಿಯೊಂದು ಹೊರ ಬಿದ್ದಿದೆ.
ಈ ಸಂಬಂಧ ಶಂಕಿತ ಉಗ್ರರಿಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳ ಮೂಲದ ಅನ್ನದ್ ಬದ್ರುದ್ದೀನ್ ಹಾಗೂ ಫಿರೋಜ್ ಖಾನ್ ಎಂದು ಗುರುತಿಸಲಾಗಿದೆ.
ಇವರು PFI ಸಂಘಟನೆ ಜೊತೆಗೆ ಗುರುತಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಿಂದ ಸ್ಫೋಟಕ ಸಾಮಾಗ್ರಿ, ಪಿಸ್ತೂಲ್, ಪೆನ್ ಡ್ರೈವ್, ಪಾನ್ ಕಾರ್ಡ್, ಡಿಎಲ್, ಆಧಾರ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉತ್ತರ ಪ್ರದೇಶದ ಎಸ್ಟಿಎಫ್ ಈ ಕಾರ್ಯಾಚರಣೆ ನಡೆಸಿದ್ದು, ಈ ಬಗ್ಗೆ ಮಾತನಾಡಿರುವ ಎಡಿಜಿಪಿ ಪ್ರಶಾಂತ್ ಕುಮಾರ್ ಬಂಧಿತರಿಬ್ಬರೂ ಬಾಂಬ್ ತಯಾರಿಕೆಯ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿದ್ದಾರೆ ಅಂದಿದ್ದಾರೆ
Discussion about this post