ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ 5 ತಿಂಗಳಿಗೆ ಬಾಲಿವುಡ್ ನಟಿ ಉರ್ಮಿಳಾ ಮಾತೋಂಡ್ಕರ್ ಪಕ್ಷವನ್ನು ತೊರೆದಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಉರ್ಮಿಳಾ ಮಾತೋಂಡ್ಕರ್ ಸೋಲು ಅನುಭವಿಸಿದ್ದರು.
ಪಕ್ಷದಲ್ಲಿನ ಒಳ ರಾಜಕೀಯದಿಂದ ಬೇಸತ್ತ ಉರ್ಮಿಳಾ ಮಾತೋಂಡ್ಕರ್ ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡ್ತಿದ್ದೇನೆ ಎಂದು ಊರ್ಮಿಳಾ ಘೋಷಿಸಿದ್ದು, ರಾಜೀನಾಮೆ ನಿರ್ಧಾರ ಪ್ರಕಟಿಸುವ ವೇಳೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರ ವಿರುದ್ಧ ಮಾತೋಂಡ್ಕರ್ ಹರಿಹಾಯ್ದಿದ್ಧಾರೆ.
ಪಕ್ಷದಲ್ಲಿರುವ ಪಟ್ಟಭದ್ರ ಹಿತಾಸಕ್ತಿಗಳ ಜೊತೆಗೆ ಕೆಲಸ ಮಾಡಲು ನನ್ನ ರಾಜಕೀಯ ಹಾಗೂ ಸಾಮಾಜಿಕ ಪ್ರಜ್ಞೆ ಒಪ್ಪುತ್ತಿಲ್ಲ ಎಂದು ಊರ್ಮಿಳಾ ಮಾತೋಂಡ್ಕರ್ ಹೇಳಿದ್ದಾರೆ. ದೊಡ್ಡ ಮಟ್ಟದ ಗುರಿ ಇಟ್ಟುಕೊಂಡು ಹೋರಾಟ ನಡೆಸುವ ಬದಲು ಮುಂಬೈ ಕಾಂಗ್ರೆಸ್ ಆಂತರಿಕ ಕಚ್ಚಾಟಕ್ಕೆ ಪ್ರಾಧಾನ್ಯತೆ ನೀಡುತ್ತಿದೆ. ಇಂಥಾ ಸ್ಥಳದಲ್ಲಿ ನಾನು ಕೆಲಸ ಮಾಡಲಾರೆ ಎಂದು ಊರ್ಮಿಳಾ ಹೇಳಿದ್ಧಾರೆ.

ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವೇಳೆ ಮಾಧ್ಯಮಗಳ ಎದುರು ಕಣ್ಣೀರಿಟ್ಟಿದ್ದ ಊರ್ಮಿಳಾ, ಕಾಶ್ಮೀರದಲ್ಲಿರುವ ಅತ್ತೆ, ಮಾವ ಹೇಗಿದ್ದಾರೋ ಗೊತ್ತಾಗುತ್ತಿಲ್ಲ ಎಂದು ವೇದನೆ ಪಟ್ಟಿದ್ದರು.
ಬಿಗ್ ಬಾಸ್ಕೆಟ್ ನಲ್ಲಿ ಬಂಪರ್ ಡಿಸ್ಕೌಂಟ್… ಈ ಚಾನ್ಸ್ ಬಿಟ್ರೆ ಹೋಯ್ತು
ಲೋಕಸಭಾ ಚುನಾವಣಾ ಪ್ರಚಾರದ ವೇಳೆ, ಹಿಂದೂ ಧರ್ಮ ಜಗತ್ತಿನಲ್ಲೇ ಅತ್ಯಂತ ಹಿಂಸಾತ್ಮಕ ಧರ್ಮ ಎಂದು ಹೇಳಿಕೆ ನೀಡಿದ್ದ ಊರ್ಮಿಳಾ ಮಾತೋಂಡ್ಕರ್ ವಿರುದ್ಧ ಪ್ರಕರಣ ಕೂಡಾ ದಾಖಲಾಗಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
Discussion about this post