crossorigin="anonymous"> ಖ್ಯಾತ ತುಳು ಸಾಹಿತಿ ಸೀತಾರಾಮ್ ಕುಲಾಲ್ ಇನ್ನಿಲ್ಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಖ್ಯಾತ ತುಳು ಸಾಹಿತಿ ಸೀತಾರಾಮ್ ಕುಲಾಲ್ ಇನ್ನಿಲ್ಲ

Radhakrishna Anegundi by Radhakrishna Anegundi
28-07-19, 5 : 18 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಮೋಕೆದ ಸಿಂಗಾರಿ….ಪಕ್ಕಿಲು ಮೂಜಿ.. ಹೀಗೆ ತುಳು ಭಾಷೆಯ ಎವರ್ ಗ್ರೀನ್ ಹಾಡುಗಳ ರಚನೆಕಾರ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಸೀತಾರಾಮ್ ಕುಲಾಲ್ (78) ರವಿವಾರ ನಿಧನ ಹೊಂದಿದ್ದಾರೆ.

https://www.youtube.com/watch?v=n2tYjoCNjN4

ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸೀತಾರಾಮ್‌ ಕುಲಾಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕುಲಾಲ್‌ ಅವರು ರಚಿಸಿರುವ ಮೋಕೆದ ಸಿಂಗಾರಿ, ಪಕ್ಕಿಲು ಮೂಜಿ ಒಂಜೇ ಗೂಡ್‌ ಡ್‌, ಬ್ರಹ್ಮನ ಬರವು ಮಾಜಂದೆ ಪೋಂಡಾ, ಡಿಂಗಿರಿ ಮಾಮ ಡಿಂಗಿರಿ ಮಾಮ, ಪರಶುರಾಮನ ಕುಡರಿಗ್‌ ಪುಟಿನ ತುಳುನಾಡ್‌, ಅಪ್ಪೆ ಮನಸ್‌ ಬಂಗಾರ ಮುಂತಾದ ಹಾಡುಗಳು ತುಳು ಚಿತ್ರರಂಗದ ಎವರ್‌ ಗ್ರೀನ್‌ ಹಾಡುಗಳು ಎಂದೆನಿಸಿಕೊಂಡಿವೆ.

ʼಪಗೆತ ಪುಗೆʼ, ʼಉಡಲ್ದ ತುಡರ್‌ʼ, ʼಕಾಸ್‌ ದಾಲ್‌ ಕಂಡನಿʼ ಮುಂತಾದ ಚಿತ್ರಗಳಿಗೆ ಸಾಹಿತ್ಯ ಬರೆದಿದ್ದ ಸೀತಾರಾಮ ಕುಲಾಲರು ʼಮಣ್ಣ್ ದ ಮಗಲ್‌ ಅಬ್ಬಕ್ಕʼ ಮತ್ತು ʼ ಧರ್ಮೊಗು ಧರ್ಮದ ಸವಾಲ್‌ʼ ಕೃತಿಗಳನ್ನು ರಚಿಸಿದ್ದರು.

ಮಂಗಳೂರಿನ ಬಿಜೈಯಲ್ಲಿ ನೆಲೆಯೂರಿದ್ದ ಸೀತಾರಾಮ್ ಕುಲಾಲ್ ರವರು ಮೊದಲು “ದಾಸಿ ಪುತ್ರ ” ಎನ್ನುವ ಕನ್ನಡ ನಾಟಕದ ಮೂಲಕ ರಂಗ ಭೂಮಿ ಪ್ರವೇಶಿಸಿದ್ದರು.

11 ತುಳು ಚಿತ್ರಗಳಿಗೆ 25 ಕ್ಕೂ ಹೆಚ್ಚು ಸೂಪರ್ ಹಿಟ್ ಹಾಡುಗಳನ್ನು ನೀಡಿದ ಹಿರಿಯ ತುಳು ಸಾಹಿತಿ ಎಂ.ಕೆ.ಸೀತಾರಾಮ್ ಕುಲಾಲ್. ‘ದಾಸಿ ಪುತ್ರ’ ಕನ್ನಡ ನಾಟಕದ ಮೂಲಕ ರಂಗಭೂಮಿ ಪ್ರವೇಶಿ ನಂತರ ‘ಪಗೆತ ಪುಗೆ’ ತುಳು ಚಲನಚಿತ್ರಕ್ಕೆ ಸಾಹಿತ್ಯ ಬರೆಯುವುದರೊಂದಿಗೆ ತುಳು ಚಿತ್ರರಂಗದ ಪ್ರವೇಶಿಸಿದರು.

ಅಲ್ಲದೇ ಬಯ್ಯಮಲ್ಲಿಗೆ, ಬೊಳ್ಳಿತೋಟ, ಉಡಲ್ದ ತುಡರ್ ಬದ್ಕದ ಬಿಲೆ,  ಕೋಟಿ ಚೆನ್ನಯ, ಬದಿ ಸೇರಿ ಒಟ್ಟು ಹನ್ನೊಂದು ಚಿತ್ರಗಳಿಗೆ ಸಾಹಿತ್ಯವನ್ನು ಬರೆದಿದ್ದಾರೆ. ಸುಮಾರು 17 ಕನ್ನಡ ಚಾರಿತ್ರಿಕ ನಾಟಕ 6 ಕನ್ನಡ ಪೌರಾಣಿಕ ಸೇರಿ ಒಟ್ಟು 66 ಕೃತಿಗಳನ್ನು ರಚಿಸಿದ್ದಾರೆ.

Seetharam Kulal

ಕಲಾವಿದರಾಗಿ ಕಳೆದ 45 ವರ್ಷಗಳಿಂದ ಕಲಾಸೇವೆ ಮಾಡಿದ ಇವರು ತಾವು ರಚಿಸಿರುವ ಯಾವುದೇ ಕೃತಿಗಾಗಲಿ ನಟನೆ ನಾಟಕ ಹಾಗೂ ಹಾಡುಗಳಗಾಗಲಿ ಯಾವುದೇ ರೀತಿಯ ಸಂಭಾವನೆಯನ್ನು ಪಡೆದುಕೊಳ್ಳದೆ ಸೇವೆ ಸಲ್ಲಿಸಿರುವುದು ಇವರ ಕಲಾಪ್ರೇಮಕ್ಕೆ ಸಾಕ್ಷಿಯಾಗಿದೆ.

ಇವರಿಗೆ ‘ರಂಗಕಲಾಭೂಷಣ’ ‘ತುಳು ರತ್ನ’ ‘ಪೆರ್‍ಮೆದ ತುಳುವೆ’ ‘ತುಳುಸಿರಿ’ ‘ತುಳು ಸಾಹಿತ್ಯ ರತ್ನಾಕರ’ ‘ತೌಳವ ಪ್ರಶಸ್ತಿ’ ಇತ್ಯಾದಿ ಹಲವಾರು ಪ್ರಶಸ್ತಿ ಸಂದಿದ್ದು, ಇದರೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2014ರ ಸಾಲಿನ ಗೌರವ ಪ್ರಶಸ್ತಿ ನೀಡಿ ಗೌರವಿಸಿದೆ.

ಬಂಟ್ವಾಳ ತಾಲೂಕಿನ ಕೊಲ್ನಾಡು ಎಂಬ ಪುಟ್ಟ ಗ್ರಾಮದಲ್ಲಿ ಎಂ. ಕಾಂತಪ್ಪ ಮಾಸ್ತರ್ ಮತ್ತು ದೇವಕಿ ದಂಪತಿಯ ಸುಪುತ್ರನಾಗಿ 1940ರಲ್ಲಿ ಜನಿಸಿದ ಸೀತಾರಾಮ್ ಕುಲಾಲ್, ಬಾಲ್ಯದಿಂದಲೂ ನಾಟಕದ ಸಾಹಿತ್ಯ ಕೃಷಿಯನ್ನು ನಡೆಸುತ್ತಾ ಬಂದವರು. ಇದು ಅವರಿಗೆ ರಕ್ತಗತವಾಗಿಯೇ ಒಲಿದಿತ್ತು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”51″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_5120190728171210″); document.getElementById(“div_5120190728171210”).appendChild(scpt);

ತಂದೆ ಕಾಂತಪ್ಪ ಮಾಸ್ತರ್ ಮೊದಲು ಅಧ್ಯಾಪಕರಾಗಿದ್ದರು, ಬಳಿಕ ಜಿಲ್ಲಾ ಸಹಕಾರ ಇಲಾಖೆಗೆ ವೃತ್ತಿ ಬದಲಾಯಿಸಿ ನಿವೃತ್ತಿಯಾದರು. ಅಧ್ಯಾಪಕರಾಗಿದ್ದ ಸಂದರ್ಭದಲ್ಲಿ ಇವರು 4ನೇ ಮತ್ತು 5ನೇ ತರಗತಿಗೆ ಗಣಿತ ಪಠ್ಯವನ್ನೂ ರಚಿಸಿದ್ದರು. ಉತ್ತಮ ಕವಿಯೂ ಆಗಿದ್ದ ಕಾಂತಪ್ಪ ಮಾಸ್ತರ್ ಎರಡನೇ ಯುದ್ಧದ ಸಂದರ್ಭದಲ್ಲಿ ಅದಕ್ಕೆ ಪೂರಕವಾಗಿ ರಚಿಸಿದ್ದ ಕವನವೊಂದಕ್ಕೆ ಆಗಿನ ಮದ್ರಾಸ್ ಸರ್ಕಾರದಿಂದ 100 ರೂಪಾಯಿ ಬಹುಮಾನ ಪಡೆದಿದ್ದರು. ಕಾಂತಪ್ಪ ಮಾಸ್ತರ್ ಒಬ್ಬ ನಾಟಕ ಕಲಾವಿದ ಮಾತ್ರವಲ್ಲದೆ ಉತ್ತಮ ತಬಲಾ ಪಟುವೂ ಆಗಿದ್ದರು.
ಹೀಗಾಗಿಯೇ ತಂದೆಯ ರಕ್ತದಲ್ಲಿ ಹರಿಯುತ್ತಿದ್ದ ಸಾಹಿತ್ಯ, ಪುತ್ರ ಸೀತಾರಾಮ್ ಕುಲಾಲ್ ಅವರ ರಕ್ತದಲ್ಲೂ ಬೆಸೆದುಕೊಂಡಿತ್ತು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190728171210″); document.getElementById(“div_6920190728171210”).appendChild(scpt);

ಸೀತಾರಾಮ್ ಕುಲಾಲ್ ಮೆಟ್ರಿಕ್ ತನಕ ಓದಿ ನಂತರ ಯುನೈಟೆಡ್ ಇಂಡಿಯಾ ಇನ್ಯೂರೆನ್ಸ್ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದರು. ಬಳಿಕ ಸೀನಿಯರ್ ಮ್ಯಾನೇಜರ್ ತನಕ ಹುದ್ದೆಗೇರಿ ನಿವೃತ್ತಿಯಾಗಿದ್ದರು.

ಶನಿವಾರವಷ್ಟೇ ಕರಾವಳಿಯ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ನಿಧನ ವಾರ್ತೆಯ ಬೆನ್ನಲ್ಲೇ ಸೀತಾರಾಮ್ ಕುಲಾಲ್ ಇನ್ನಿಲ್ಲ ಅನ್ನುವ ಸುದ್ದಿ ಬಂದಿದೆ.

Tags: ತುಳುತುಳು ಸಾಹಿತಿಮಂಗಳೂರುಸೀತಾರಾಮ್ ಕುಲಾಲ್
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್